ಬ್ರೇಕಿಂಗ್ ನ್ಯೂಸ್
30-10-22 05:37 pm HK News Desk ಕರ್ನಾಟಕ
ಬೆಂಗಳೂರು, ಅ.30:ಕೆಆರ್ ಪುರಂ ಠಾಣೆಯ ಇನ್ಸ್ ಪೆಕ್ಟರ್ ನಂದೀಶ್ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸಲು ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ಮಾಹಿತಿ ಪಡೆದು ತನಿಖೆ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ನಂದೀಶ್ ಸಾವಿನ ಬಗ್ಗೆ ಆರೋಪಗಳು ಬಂದಿವೆ. ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ. ತನಿಖೆ ಕೈಗೊಳ್ಳುವುದರ ಬಗ್ಗೆ ಹಿಂದೆ ಮುಂದೆ ಯೋಚಿಸುವುದಿಲ್ಲ. ಹಿರಿಯ ಅಧಿಕಾರಿಗಳಿಂದ ತನಿಖೆ ನಡೆಸುತ್ತೇನೆ ಎಂದರು. ಇನ್ಸ್ ಪೆಕ್ಟರ್ ನಂದೀಶ್ ಬಿಜೆಪಿ ಭ್ರಷ್ಟಾಚಾರಕ್ಕೆ ಬಲಿಯಾಗಿದ್ದಾರೆಂದು ವಿಪಕ್ಷ ನಾಯಕರು ಆರೋಪಿಸಿದ್ದರು.
ಪತ್ರಕರ್ತರಿಗೆ ಉಡುಗೊರೆ ; ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ

ಪತ್ರಕರ್ತರಿಗೆ ಗಿಫ್ಟ್ ನೀಡಿರುವ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ, ಕಾಂಗ್ರೆಸ್ಸಿನ ಟೂಲ್ ಕಿಟ್ ನಡೆಸುತ್ತಿರುವ ಭಾಗ ಇದು. ಸುಳ್ಳನ್ನು ಸೃಷ್ಟಿಸುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ನಾನು ಯಾರಿಗೂ ಸೂಚನೆಯನ್ನು ನೀಡಿಲ್ಲ. ಕಾಂಗ್ರೆಸ್ ಇದ್ದಾಗ ಹಲವಾರು ಜನರಿಗೆ ಏನೇನು ಉಡುಗೊರೆಗಳನ್ನು ನೀಡಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ. ಪತ್ರಿಕೆಗಳಲ್ಲಿ ವರದಿಯೂ ಆಗಿದೆ. ಐ ಫೋನ್, ಲ್ಯಾಪ್ಟಾಪ್, ಬಂಗಾರದ ನಾಣ್ಯಗಳನ್ನೇ ಕೊಟ್ಟಿದ್ದಾರೆ. ಇವರಿಗೆ ಮಾತನಾಡಲು ಯಾವ ನೈತಿಕ ಹಕ್ಕೂ ಇಲ್ಲ. ಯಾರೋ ಒಬ್ಬರು ಲೋಕಾಯುಕ್ತಕ್ಕೆ ದೂರನ್ನು ನೀಡಿದ್ದು, ತನಿಖೆಯಾಗುತ್ತದೆ. ಇದರ ಅರ್ಥ ಎಲ್ಲಾ ಪತ್ರಕರ್ತರು ಉಡುಗೊರೆಯನ್ನು ಪಡೆದಿದ್ದಾರೆ ಎಂದು ವ್ಯಾಖ್ಯಾನ ಮಾಡುವುದು ಸರಿಯಲ್ಲ. ನಿನ್ನೆ ಕಾಂಗ್ರೆಸ್ ವಕ್ತಾರ ಬಹಳ ಕೆಟ್ಟದಾಗಿ ವ್ಯಾಖ್ಯಾನ ಮಾಡಿದ್ದು ಅದನ್ನು ನಾನು ಖಂಡಿಸುತ್ತೇನೆ ಎಂದರು.
ಬಿಜೆಪಿಗೆ ಒಬಿಸಿ ಜನರ ಬೆಂಬಲ
ಓಬಿಸಿ ಸಮುದಾಯಗಳ ಜನರ ದೊಡ್ಡ ಪ್ರಮಾಣದ ಬೆಂಬಲ ಬಿಜೆಪಿಗೆ ಇದೆ. ಅದರ ಸಂಕೇತವಾಗಿ ಕಲಬುರಗಿಯಲ್ಲಿ ಬಿಜೆಪಿಯಿಂದ ಓಬಿಸಿ ಸಮಾವೇಶ ಆಯೋಜನೆಗೊಂಡಿದೆ. ನವೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಪರಿಶಿಷ್ಟ ಪಂಗಡಗಳ ಸಮಾವೇಶವಿದೆ. ನಂತರ ಪರಿಶಿಷ್ಟ ಜಾತಿಗಳ ಸಮಾವೇಶ ನಡೆಯಲಿದೆ. ಹುಬ್ಬಳ್ಳಿಯಲ್ಲಿ ರೈತರ ಸಮಾವೇಶ ನಡೆಯಲಿದ್ದು, ಡಿಸೆಂಬರ್ ತಿಂಗಳಲ್ಲಿ ಮಹಿಳೆಯರ ಸಮಾವೇಶ ಆಯೋಜನೆ ಮಾಡಲು ಪಕ್ಷದ ಅಧ್ಯಕ್ಷರು, ಕೋರ್ ಸಮಿತಿ ತೀರ್ಮಾನ ಮಾಡಿದೆ.
ಕಲಬುರಗಿಯಲ್ಲಿ ಹಿಂದುಳಿದ ವರ್ಗಗಳ ಸಮಾವೇಶವನ್ನು ಆಯೋಜಿಸಲಾಗಿದೆ. ಸುಮಾರು 2 ಲಕ್ಷ ಜನ ಸೇರಲಿದ್ದು, ಒಬಿಸಿ ಮೋರ್ಚಾ ಪದಾಧಿಕಾರಿಗಳು ದೊಡ್ಡ ಪ್ರಮಾಣದಲ್ಲಿ ಸೇರುತ್ತಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.
Bangalore police Inspector Sandesh death cm Bommai orders for probe
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am