ಬ್ರೇಕಿಂಗ್ ನ್ಯೂಸ್
30-10-22 10:39 pm HK News Desk ಕರ್ನಾಟಕ
ಅಹ್ಮದಾಬಾದ್, ಅ.30:ಗುಜರಾತಿನ ಮೋರ್ಬಿ ನಗರದಲ್ಲಿ ತೂಗು ಸೇತುವೆ ಮುರಿದು ಬಿದ್ದು 60ಕ್ಕೂ ಹೆಚ್ಚು ಜನರು ಮೃತಪಟ್ಟ ದುರಂತ ನಡೆದಿದೆ. ಭಾನುವಾರ ಸಂಜೆ ಮುಚ್ಚು ನದಿಯ ಅಡ್ಡಲಾಗಿರುವ ಸೇತುವೆ ಕುಸಿದು ನೀರಿಗೆ ಬಿದ್ದಿದೆ.
ಸ್ಥಳೀಯ ಶಾಸಕ ಮತ್ತು ಗುಜರಾತ್ ಸರಕಾರದಲ್ಲಿ ಪಂಚಾಯತ್ ರಾಜ್ ಸಚಿವನಾಗಿರುವ ಬ್ರಿಜೇಶ್ ಮೆರ್ಜಾ ಸ್ಥಳಕ್ಕೆ ಆಗಮಿಸಿದ್ದು 60ಕ್ಕು ಹೆಚ್ಚು ಜನರು ಸಾವಿಗೀಡಾದ ಶಂಕೆ ವ್ಯಕ್ತಪಡಿಸಿದ್ದಾರೆ. ರಾಜಕೋಟ್ ಸಂಸದ ಮೋಹನ್ ಕುಂದರಿಯಾ, 60 ಶವಗಳನ್ನು ಪತ್ತೆ ಮಾಡಲಾಗಿದೆ ಎಂದಿದ್ದಾರೆ.
ಎನ್ ಡಿ ಆರ್ ಎಫ್ ಮತ್ತು ಇತರ ರಕ್ಷಣಾ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಮೃತರಲ್ಲಿ ಹಲವರು ಪ್ರವಾಸಿಗರು ಆಗಿರುವ ಸಾಧ್ಯತೆಯಿದೆ ಎಂದು ಸ್ಥಳೀಯ ವಾಹಿನಿಗಳು ವರದಿಯ ಮಾಡಿವೆ. ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಹಾರ ಕಾರ್ಯಕ್ಕೆ ಸೂಚನೆ ನೀಡಿದ್ದಾರೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮೃತರ ಕುಟುಂಬಕ್ಕೆ ತಲಾ ನಾಲ್ಕು ಲಕ್ಷ ಪರಿಹಾರ ಘೋಷಿಸಿದ್ದಾರೆ.
ಭಾನುವಾರ ಸಂಜೆ 6.30ರ ವೇಳೆಗೆ ದುರಂತ ನಡೆದಿದೆ. ತೇಲುವ ಸೇತುವೆ ಎಂದು ಪ್ರಸಿದ್ಧಿ ಪಡೆದಿದ್ದ ಕಾರಣ ಟೂರಿಸ್ಟ್ ಸ್ಪಾಟ್ ಆಗಿತ್ತು. ಸೇತುವೆ ನೋಡುವುದಕ್ಕಾಗಿಯೇ ಜನರು ಬರುತ್ತಿದ್ದರು. ಘಟನೆ ಸಂದರ್ಭದಲ್ಲಿ 150ಕ್ಕೂ ಹೆಚ್ಚು ಜನರಿದ್ದರು. ಇದರ ಭಾರದಿಂದಾಗಿ ಒಂದು ಪಾರ್ಶ್ವ ಕುಸಿದು ಬಿದ್ದಿದೆ ಎನ್ನಲಾಗಿದೆ. 79 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಆ ಪೈಕಿ 60 ಮಂದಿಯ ಸ್ಥಿತಿ ಗಂಭೀರ ಇದೆ. ಕೆಲವರು ನೀರಿನಲ್ಲಿ ಈಜಿ ದಡ ಸೇರುವುದು, ಅವರನ್ನು ರಕ್ಷಣೆ ಮಾಡುವ ವಿಡಿಯೋ ವೈರಲ್ ಆಗಿದೆ.
At least 60 people have died after a cable bridge collapsed in Gujarat on Sunday evening, state minister Brijesh Merja said. The incident took place on the Machhu river in Morbi district.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm