ಬ್ರೇಕಿಂಗ್ ನ್ಯೂಸ್
30-10-22 10:39 pm HK News Desk ಕರ್ನಾಟಕ
ಅಹ್ಮದಾಬಾದ್, ಅ.30:ಗುಜರಾತಿನ ಮೋರ್ಬಿ ನಗರದಲ್ಲಿ ತೂಗು ಸೇತುವೆ ಮುರಿದು ಬಿದ್ದು 60ಕ್ಕೂ ಹೆಚ್ಚು ಜನರು ಮೃತಪಟ್ಟ ದುರಂತ ನಡೆದಿದೆ. ಭಾನುವಾರ ಸಂಜೆ ಮುಚ್ಚು ನದಿಯ ಅಡ್ಡಲಾಗಿರುವ ಸೇತುವೆ ಕುಸಿದು ನೀರಿಗೆ ಬಿದ್ದಿದೆ.
ಸ್ಥಳೀಯ ಶಾಸಕ ಮತ್ತು ಗುಜರಾತ್ ಸರಕಾರದಲ್ಲಿ ಪಂಚಾಯತ್ ರಾಜ್ ಸಚಿವನಾಗಿರುವ ಬ್ರಿಜೇಶ್ ಮೆರ್ಜಾ ಸ್ಥಳಕ್ಕೆ ಆಗಮಿಸಿದ್ದು 60ಕ್ಕು ಹೆಚ್ಚು ಜನರು ಸಾವಿಗೀಡಾದ ಶಂಕೆ ವ್ಯಕ್ತಪಡಿಸಿದ್ದಾರೆ. ರಾಜಕೋಟ್ ಸಂಸದ ಮೋಹನ್ ಕುಂದರಿಯಾ, 60 ಶವಗಳನ್ನು ಪತ್ತೆ ಮಾಡಲಾಗಿದೆ ಎಂದಿದ್ದಾರೆ.
ಎನ್ ಡಿ ಆರ್ ಎಫ್ ಮತ್ತು ಇತರ ರಕ್ಷಣಾ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಮೃತರಲ್ಲಿ ಹಲವರು ಪ್ರವಾಸಿಗರು ಆಗಿರುವ ಸಾಧ್ಯತೆಯಿದೆ ಎಂದು ಸ್ಥಳೀಯ ವಾಹಿನಿಗಳು ವರದಿಯ ಮಾಡಿವೆ. ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಹಾರ ಕಾರ್ಯಕ್ಕೆ ಸೂಚನೆ ನೀಡಿದ್ದಾರೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮೃತರ ಕುಟುಂಬಕ್ಕೆ ತಲಾ ನಾಲ್ಕು ಲಕ್ಷ ಪರಿಹಾರ ಘೋಷಿಸಿದ್ದಾರೆ.
ಭಾನುವಾರ ಸಂಜೆ 6.30ರ ವೇಳೆಗೆ ದುರಂತ ನಡೆದಿದೆ. ತೇಲುವ ಸೇತುವೆ ಎಂದು ಪ್ರಸಿದ್ಧಿ ಪಡೆದಿದ್ದ ಕಾರಣ ಟೂರಿಸ್ಟ್ ಸ್ಪಾಟ್ ಆಗಿತ್ತು. ಸೇತುವೆ ನೋಡುವುದಕ್ಕಾಗಿಯೇ ಜನರು ಬರುತ್ತಿದ್ದರು. ಘಟನೆ ಸಂದರ್ಭದಲ್ಲಿ 150ಕ್ಕೂ ಹೆಚ್ಚು ಜನರಿದ್ದರು. ಇದರ ಭಾರದಿಂದಾಗಿ ಒಂದು ಪಾರ್ಶ್ವ ಕುಸಿದು ಬಿದ್ದಿದೆ ಎನ್ನಲಾಗಿದೆ. 79 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಆ ಪೈಕಿ 60 ಮಂದಿಯ ಸ್ಥಿತಿ ಗಂಭೀರ ಇದೆ. ಕೆಲವರು ನೀರಿನಲ್ಲಿ ಈಜಿ ದಡ ಸೇರುವುದು, ಅವರನ್ನು ರಕ್ಷಣೆ ಮಾಡುವ ವಿಡಿಯೋ ವೈರಲ್ ಆಗಿದೆ.
At least 60 people have died after a cable bridge collapsed in Gujarat on Sunday evening, state minister Brijesh Merja said. The incident took place on the Machhu river in Morbi district.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm