ಬ್ರೇಕಿಂಗ್ ನ್ಯೂಸ್
01-11-22 01:24 pm Bangalore Correspondent ಕರ್ನಾಟಕ
ಬೆಂಗಳೂರು, ನ.01: 2018ರ ವಿಧಾನಸಭೆ ಚುನಾವಣೆ ಹಾಗೂ 2019ರ ಉಪ ಚುನಾವಣೆ ವೇಳೆ ನಾಮಪತ್ರದಲ್ಲಿ ತನ್ನ ಕುರಿತು ಅಪೂರ್ಣ ಮಾಹಿತಿ ನೀಡಿದ್ದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ರಮೇಶ್ ಜಾರಕಿಹೊಳಿಯವರು ಚುನಾವಣಾ ನಾಮಪತ್ರದ ಜತೆಗೆ ಮೊದಲು 2018ರ ಏ.23ರಂದು ಪ್ರಮಾಣಪತ್ರ ಸಲ್ಲಿಸಿದ್ದರು. ನಂತರ 2019ರ ನ.18ರಂದು ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದಾಗ ಚುನಾವಣಾ ಆಯೋಗಕ್ಕೆ ಪ್ರತ್ಯೇಕ ಪ್ರಮಾಣಪತ್ರ ಸಲ್ಲಿಸಿದ್ದರು. ಈ ಎರಡೂ ಪ್ರಮಾಣ ಪತ್ರಗಳಲ್ಲಿ ಅಪೂರ್ಣ ಮಾಹಿತಿ ನೀಡುವುದರ ಜತೆಗೆ ಕೆಲವು ಮಾಹಿತಿಗಳನ್ನು ಮುಚ್ಚಿಟ್ಟಿದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ.
ರಮೇಶ್ ಜಾರಕಿಹೊಳಿ ಕುಟುಂಬ ಸದಸ್ಯರು ನಿರ್ದೇಶಕರಾಗಿರುವ ಸೌಭಾಗ್ಯಲಕ್ಷ್ಮಿ ಶುಗರ್ ಕಾರ್ಖಾನೆ 578 ಕೋಟಿ ರೂ. ಸಾಲ ಮಾಡಿದ್ದು, ಇದರ ವಿವರಗಳನ್ನು ಪ್ರಮಾಣಪತ್ರದಲ್ಲಿ ನಮೂದಿಸಿಲ್ಲ. ರೈತರಿಗೆ ಸುಮಾರು 50 ಕೋಟಿ ರೂ. ಬಾಕಿ ನೀಡಬೇಕಾಗಿದ್ದು, ಅದರ ಮಾಹಿತಿಯೂ ಕೊಟ್ಟಿಲ್ಲ. ಆದಾಯ ತೆರಿಗೆ ಇಲಾಖೆಗೆ 150 ಕೋಟಿ ರೂ. ಪಾವತಿ ಮಾಡಬೇಕಿದ್ದು, ಅದರ ವಿವರಗಳನ್ನೂ ಮುಚ್ಚಿಟ್ಟಿದ್ದಾರೆ.
ಇದು ಪ್ರಜಾಪ್ರತಿನಿಧಿ ಕಾಯ್ದೆಯ ಕಲಂ 125-ಎ ಅನ್ವಯ ಉಲ್ಲಂಘನೆಯಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ. ಇದರ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ.
M. Lakshmana, spokesperson of the Karnataka Pradesh Congress Committee, on Monday submitted a petition to the Election Commission of India to consider the alleged false affidavit filed by Ramesh Laxman Rao Jarkiholi, BJP MLA, during the 2019 byelection to Gokak Assembly constituency and demanded a probe by the Central Board of Direct Taxes and the Enforcement Directorate in public interest.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm