ಬ್ರೇಕಿಂಗ್ ನ್ಯೂಸ್
01-11-22 10:17 pm Bangalore Correspondent ಕರ್ನಾಟಕ
ಬೆಂಗಳೂರು, ನ.1 : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ರಾಜ್ಯ ಸರ್ಕಾರದಿಂದ ಮರಣೋತ್ತರ ನೆಲೆಯಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿದೆ. ವಿಧಾನಸೌಧದ ಹೊರಗಿನ ಮೆಟ್ಟಿಲಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿದ್ದು ಪ್ರಶಸ್ತಿಯನ್ನು ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಗೆ ಪ್ರದಾನ ಮಾಡಲಾಯಿತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸೂಪರ್ ಸ್ಟಾರ್ ರಜನಿಕಾಂತ್, ಜೂ.ಎನ್ಟಿಆರ್ ಅವರು ಜೊತೆಯಾಗಿ ಪ್ರಶಸ್ತಿ ಪ್ರದಾನ ಮಾಡುತ್ತಿದ್ದಂತೆ ಹೊರಗೆ ಅದೇ ಸಮಯದಲ್ಲಿ ವರುಣ ಸಿಂಚನವಾಯಿತು. ಈ ಸಂದರ್ಭದಲ್ಲಿ ಅಭಿಮಾನಿಗಳಿಂದಲೂ ಹರ್ಷೋದ್ಗಾರ ಹೊರಹೊಮ್ಮಿತು. ಭಾರೀ ಸಂಖ್ಯೆಯಲ್ಲಿ ವಿಧಾನಸೌಧ ಹೊರ ಆವರಣದಲ್ಲಿ ಜನರು, ಅಭಿಮಾನಿಗಳು ಸೇರಿದ್ದರು.
ಇದೇ ವೇಳೆ, ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪುನೀತ್ ಅವರನ್ನು ಕನ್ನಡಿಗರು ಯಾವತ್ತಿಗೂ ಮರೆಯಲ್ಲ. ಕೇವಲ 46 ವರ್ಷಗಳಲ್ಲಿ ಅವರು ನೀಡಿದ ಕೊಡುಗೆ ಚಿರಸ್ಮರಣೀಯ. ನಾವು ಕನ್ನಡಿಗರು ಅಪ್ಪುವನ್ನು ದಿನವೂ ನೆನೆಯುತ್ತೇವೆ. ಮತ್ತೊಮ್ಮೆ ಹುಟ್ಟಿ ಬರುವಂತೆ ನಾವು ಅಪ್ಪು ಬಳಿ ಕೇಳಿಕೊಳ್ಳುತ್ತೇವೆ. ಇದೇ ಕನ್ನಡ ನಾಡಿನಲ್ಲಿ ಮತ್ತೆ ಹುಟ್ಟಿ ಬಾ ಅಪ್ಪು ಎಂದು ಭಾವುಕರಾಗಿ ಹೇಳಿದರು.
ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಕನ್ನಡದಲ್ಲಿಯೇ ಮಾತನಾಡಿ ಪುನೀತ್ ಮತ್ತು ರಾಜಕುಮಾರ್ ಜೊತೆಗಿನ ಒಡನಾಟವನ್ನು ಸ್ಮರಿಸಿದರು. ಶಿವ ರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಸೇರಿದಂತೆ ಚಿತ್ರರಂಗದ ಪ್ರಮುಖರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು. ಹೊರಗಡೆ ಮಳೆ ಹನಿಯುತ್ತಿದ್ದರೂ ಜನರು ಮಳೆಯ ನಡುವೆಯೇ ನಿಂತು ಕಾರ್ಯಕ್ರಮ ವೀಕ್ಷಿಸಿದರು.
Karnataka government conferred 'Karnataka Ratna' award to late Kannada superstar Puneeth Rajkumar on Tuesday at a grand function held in the premises of the Vidhana Soudha.Thousands of fans witnessed the programme amid rains and cheered the recognition to their favourite star in the presence of Tamil superstar Rajinikanth, Telugu superstar Jr NTR and Indian author, educator, philanthropist and chairperson of Infosys Foundation Sudha Murthy.
10-05-25 11:30 am
HK News Desk
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm