ಕಾಂಗ್ರೆಸ್ ನಿಂದ ಚುನಾವಣೆ ಸ್ಪರ್ಧೆಗೆ ಆಕಾಂಕ್ಷಿಗಳು ಅರ್ಜಿ ಹಾಕಬೇಕು, ಶುಲ್ಕವನ್ನೂ ನೀಡಬೇಕು ; ಕೆಪಿಸಿಸಿ ಅಧ್ಯಕ್ಷ 

02-11-22 08:34 pm       Bangalore Correspondent   ಕರ್ನಾಟಕ

ಮುಂದಿನ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್​ ಪಕ್ಷ ಟಿಕೆಟ್​ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಮಾಹಿತಿ ನೀಡಿದ್ದಾರೆ. 

ಬೆಂಗಳೂರು, ನ.2 : ಮುಂದಿನ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್​ ಪಕ್ಷ ಟಿಕೆಟ್​ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಮಾಹಿತಿ ನೀಡಿದ್ದಾರೆ. 

ಅರ್ಜಿಗೆ 5 ಸಾವಿರ ರೂ. ಶುಲ್ಕ ನಿಗದಿ ಮಾಡಲಾಗಿದೆ. ಅರ್ಜಿಯ ಜೊತೆಗೆ ಸಾಮಾನ್ಯ ವರ್ಗಕ್ಕೆ ಸೇರಿದವರು 2 ಲಕ್ಷ ರೂ. ಡಿಡಿ ಹಾಗೂ ಕಾಂಗ್ರೆಸ್​ ಸದಸ್ಯತ್ವ ವಿವರದ ಲಗತ್ತಿಸಬೇಕು. ಪರಿಶಿಷ್ಟ ವರ್ಗದವರಿಗೆ ಶೇ.50 ವಿನಾಯಿತಿ ನೀಡಲಾಗಿದೆ. ಟಿಕೆಟ್​ ಆಕಾಂಕ್ಷಿಗಳು ನ.5 ರಿಂದ 15 ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ. ಅರ್ಜಿಯ ಜತೆಗೆ ಸಂಗ್ರಹವಾಗುವ ಹಣವನ್ನು ಪಕ್ಷದ ಕಚೇರಿ, ಕಟ್ಟಡಗಳ ಕಾಮಗಾರಿಗೆ ಬಳಸಲಾಗುತ್ತದೆ ಎಂದು ಡಿಕೆಶಿ ತಿಳಿಸಿದರು.

ED summons Sonia Gandhi, Rahul Gandhi in National Herald case -  BusinessToday

ರಾಜ್ಯ ವಿಧಾನಸಭೆಗೆ 2023 ರ ಚುನಾವಣೆಯಲ್ಲಿ ಹಾಲಿ ಶಾಸಕರ ಸಮೇತ ಟಿಕೆಟ್​ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. ನಾನು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಜಿ ಹಾಕಲೇಬೇಕು. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ. ಕಾಂಗ್ರೆಸ್​ ಪಕ್ಷದ ಸಿದ್ಧಾಂತ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ಅವರ ನಾಯಕತ್ವ ಒಪ್ಪಿ ಬೇಷರತ್ತಾಗಿ ಪಕ್ಷ ಸೇರಲು ಬಯಸುವವರು ಅರ್ಜಿ ಹಾಕಬಹುದು. ಅವರಿಗೆ ಮುಕ್ತ ಅವಕಾಶ ನೀಡಲಾಗಿದೆ. ಅರ್ಜಿ ಹಾಕಿದ ನಂತರ ಅಲ್ಲಂ ವೀರಭದ್ರಪ್ಪ ಅವರ ನೇತೃತ್ವದ ಸಮಿತಿ ಯಾರನ್ನು ಸೇರಿಸಿಕೊಳ್ಳಬೇಕು ಎಂದು ತೀರ್ಮಾನಿಸಲಿದೆ ಎಂದು ವಿವರಿಸಿದರು.

ಅರ್ಜಿ ಹಾಕಲು ನಮ್ಮಲ್ಲಿ ವಯೋಮಿತಿ ಇಲ್ಲ. ನಮ್ಮಲ್ಲಿ ಮಾರ್ಗದರ್ಶಕ ಮಂಡಳಿಯೂ ಇಲ್ಲ. ನಾವು 92 ವರ್ಷದ ಶಾಮನೂರು ಶಿವಶಂಕರಪ್ಪ ಅವರನ್ನು ಇಟ್ಟುಕೊಂಡಿದ್ದೇವೆ. ಅವರು ಬೇರೆಯವರಿಗಿಂತ ಹೆಚ್ಚು ಓಡಾಡುತ್ತಿದ್ದಾರೆ. ಕ್ಷೇತ್ರದ ಎಲ್ಲ ಬೂತ್​ಗಳಿಗೂ ಭೇಟಿ ನೀಡುತ್ತಿದ್ದಾರೆ. ನಮ್ಮ ತಂದೆ ತಾಯಿಗಳನ್ನು ನಾವು ಮನೆಯಿಂದ ಆಚೆ ಹಾಕುವುದಿಲ್ಲ ಎಂದರು.

5 thousand fees mandatory for those newcomers contesting from congress says KPCC president DK shivakumar.