ಬ್ರೇಕಿಂಗ್ ನ್ಯೂಸ್
02-11-22 08:34 pm Bangalore Correspondent ಕರ್ನಾಟಕ
ಬೆಂಗಳೂರು, ನ.2 : ಮುಂದಿನ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ ಪಕ್ಷ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಅರ್ಜಿಗೆ 5 ಸಾವಿರ ರೂ. ಶುಲ್ಕ ನಿಗದಿ ಮಾಡಲಾಗಿದೆ. ಅರ್ಜಿಯ ಜೊತೆಗೆ ಸಾಮಾನ್ಯ ವರ್ಗಕ್ಕೆ ಸೇರಿದವರು 2 ಲಕ್ಷ ರೂ. ಡಿಡಿ ಹಾಗೂ ಕಾಂಗ್ರೆಸ್ ಸದಸ್ಯತ್ವ ವಿವರದ ಲಗತ್ತಿಸಬೇಕು. ಪರಿಶಿಷ್ಟ ವರ್ಗದವರಿಗೆ ಶೇ.50 ವಿನಾಯಿತಿ ನೀಡಲಾಗಿದೆ. ಟಿಕೆಟ್ ಆಕಾಂಕ್ಷಿಗಳು ನ.5 ರಿಂದ 15 ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ. ಅರ್ಜಿಯ ಜತೆಗೆ ಸಂಗ್ರಹವಾಗುವ ಹಣವನ್ನು ಪಕ್ಷದ ಕಚೇರಿ, ಕಟ್ಟಡಗಳ ಕಾಮಗಾರಿಗೆ ಬಳಸಲಾಗುತ್ತದೆ ಎಂದು ಡಿಕೆಶಿ ತಿಳಿಸಿದರು.

ರಾಜ್ಯ ವಿಧಾನಸಭೆಗೆ 2023 ರ ಚುನಾವಣೆಯಲ್ಲಿ ಹಾಲಿ ಶಾಸಕರ ಸಮೇತ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. ನಾನು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಜಿ ಹಾಕಲೇಬೇಕು. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ. ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವ ಒಪ್ಪಿ ಬೇಷರತ್ತಾಗಿ ಪಕ್ಷ ಸೇರಲು ಬಯಸುವವರು ಅರ್ಜಿ ಹಾಕಬಹುದು. ಅವರಿಗೆ ಮುಕ್ತ ಅವಕಾಶ ನೀಡಲಾಗಿದೆ. ಅರ್ಜಿ ಹಾಕಿದ ನಂತರ ಅಲ್ಲಂ ವೀರಭದ್ರಪ್ಪ ಅವರ ನೇತೃತ್ವದ ಸಮಿತಿ ಯಾರನ್ನು ಸೇರಿಸಿಕೊಳ್ಳಬೇಕು ಎಂದು ತೀರ್ಮಾನಿಸಲಿದೆ ಎಂದು ವಿವರಿಸಿದರು.
ಅರ್ಜಿ ಹಾಕಲು ನಮ್ಮಲ್ಲಿ ವಯೋಮಿತಿ ಇಲ್ಲ. ನಮ್ಮಲ್ಲಿ ಮಾರ್ಗದರ್ಶಕ ಮಂಡಳಿಯೂ ಇಲ್ಲ. ನಾವು 92 ವರ್ಷದ ಶಾಮನೂರು ಶಿವಶಂಕರಪ್ಪ ಅವರನ್ನು ಇಟ್ಟುಕೊಂಡಿದ್ದೇವೆ. ಅವರು ಬೇರೆಯವರಿಗಿಂತ ಹೆಚ್ಚು ಓಡಾಡುತ್ತಿದ್ದಾರೆ. ಕ್ಷೇತ್ರದ ಎಲ್ಲ ಬೂತ್ಗಳಿಗೂ ಭೇಟಿ ನೀಡುತ್ತಿದ್ದಾರೆ. ನಮ್ಮ ತಂದೆ ತಾಯಿಗಳನ್ನು ನಾವು ಮನೆಯಿಂದ ಆಚೆ ಹಾಕುವುದಿಲ್ಲ ಎಂದರು.
5 thousand fees mandatory for those newcomers contesting from congress says KPCC president DK shivakumar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm