ಬ್ರೇಕಿಂಗ್ ನ್ಯೂಸ್
03-11-22 04:08 pm Bangalore Correspondent ಕರ್ನಾಟಕ
ಬೆಂಗಳೂರು, ನ.3 : ತುಮಕೂರಿನ ಮಾಜಿ ಸಂಸದ ಮುದ್ದಹನುಮೇಗೌಡ ಹಾಗೂ ಚಿತ್ರನಟ ಶಶಿಕುಮಾರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಇಬ್ಬರು ಮುಖಂಡರು ಕೇಸರಿ ಪಕ್ಷ ಸೇರಿದ್ದಾರೆ.
ಇವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಗೋವಿಂದ ಕಾರಜೋಳ, ಸಿ.ಪಿ.ಯೋಗೀಶ್ವರ್, ರಾಜ್ಯಸಭೆ ಸದಸ್ಯ ಜಗ್ಗೇಶ್, ಮಸಾಲಾ ಜಯರಾಂ ಸೇರಿದಂತೆ ಹಲವು ಪ್ರಮುಖರು ಸಮಾರಂಭದಲ್ಲಿ ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಮುದ್ದಹನುಮೇಗೌಡ, ಶಶಿಕುಮಾರ್ ಸೇರ್ಪಡೆಯಿಂದ ಬಿಜೆಪಿಗೆ ಬಲ ಬಂದಿದೆ' ಎಂದು ಅಭಿಪ್ರಾಯಪಟ್ಟರು. ಕಾಂಗ್ರೆಸ್ ಪಕ್ಷದಲ್ಲಿ ಜನರಿಗೆ ವಿಶ್ವಾಸವಿಲ್ಲ. ಜನಪರ ಕೆಲಸಗಳನ್ನು ಬಿಜೆಪಿ ಮಾಡುತ್ತಿದೆ. ಜನರು ಬಿಜೆಪಿಯಲ್ಲಿ ವಿಶ್ವಾಸ ಇರಿಸಿದ್ದಾರೆ. ಮುದ್ದಹನುಮೇಗೌಡ ಜನಪರ ನಾಯಕರು. ಶಶಿ ಕುಮಾರ್ ನಮ್ಮಲ್ಲೆ ಇದ್ದವರು. ಈಗ ಮತ್ತೆ ಗೂಡಿಗೆ ಮರಳಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.
ದೇಶದಲ್ಲಿ ಬಿಜೆಪಿಗೆ ಜನಮನ್ನಣೆ ಇದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಕಾರಣ. ನಾನು ಅನೇಕ ಬಾರಿ ಲೋಕಸಭೆ ಕಲಾಪದಲ್ಲಿ ಭಾಗವಹಿಸಿದ್ದೇನೆ. ಮೋದಿಯವರು ಯಾವತ್ತಿಗೂ ಮುಜುಗರ ಆಗುವ ರೀತಿಯಲ್ಲಿ ಮತನಾಡಿಲ್ಲ. ತುಮಕೂರಿನ ಕಾರ್ಯಕರ್ತರ ಜೊತೆಗೂ ನನಗೆ ಹತ್ತಿರದ ಸಂಬಂಧವಿದೆ ಎಂದು ಮುದ್ದಹನುಮೇಗೌಡ ತಿಳಿಸಿದರು.
ಇದೇ ವೇಳೆ ಮಾತನಾಡಿದ ಚಿತ್ರದುರ್ಗದ ಮಾಜಿ ಸಂಸದ ಶಶಿಕುಮಾರ್, 'ಬಿಜೆಪಿಗೆ ನಾನು ಹಳಬ. ಈ ಹಿಂದೆ ಜೆಡಿಯುನಲ್ಲಿದ್ದಾಗ ಎನ್ಡಿಎ ಕೂಟದ ಭಾಗವಾಗಿದ್ದೆ. ವಾಜಪೇಯಿ ಜೊತೆ ಕೆಲಸ ಮಾಡಿದ್ದೇನೆ. ನಾನು ನಾಯಕ ಸಮುದಾಯದವನು. ನಾನೊಬ್ಬ ನಟ. ಎಲ್ಲ ಸಮುದಾಯಗಳನ್ನು ಒಂದೇ ರೀತಿಯಲ್ಲಿ ನೋಡುತ್ತೇನೆ. ಪಕ್ಷ ನೀಡುವ ಜವಾಬ್ದಾರಿಗಳನ್ನು ನಿಭಾಯಿಸುತ್ತೇನೆ. ಪಕ್ಷಕ್ಕೆ ಸ್ವಾಗತಿಸಿದ ನಾಯಕರಿಗೆ ಧನ್ಯವಾದಗಳು ಎಂದರು.
Kannada actor and former MP Shashi Kumar and former MP S P Muddahanumegowda joined the BJP at a program held at the BJP office in Malleswaram, Bengaluru, on Wednesday.In addition, retired IAS officer B H Anil Kumar, Seva Dal state vice president Hanumanth Rao Javali, Ramesh Muniyappa, G Venkatachalaiah also joined the BJP on Wednesday.Karnataka Chief Minister Basavaraj Bommai and BJP state president Nalin Kumar Kateel, along with other BJP members and activists, welcomed the new members into the party at the event.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am