ಬ್ರೇಕಿಂಗ್ ನ್ಯೂಸ್
04-11-22 01:05 pm Bangalore Correspondent ಕರ್ನಾಟಕ
ಬೆಂಗಳೂರು, ನ.4 : ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದು ಪರೀಕ್ಷೆ ರದ್ದುಗೊಳಿಸಿದ್ದರಿಂದ ವಯೋಮಿತಿ ಹೆಚ್ಚಿಸಬೇಕೆಂದು ಅಭ್ಯರ್ಥಿಗಳು ಬೇಡಿಕೆ ಇಟ್ಟಿದ್ದರು. ಇದರಂತೆ, ರಾಜ್ಯ ಸರ್ಕಾರ ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಆದೇಶಿಸಿದೆ.
ಈ ಮೂಲಕ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಯ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದೆ. ಈ ಸಂಬಂಧ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ. ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ 2022-23ನೇ ಸಾಲಿನಲ್ಲಿ ಎರಡು ವರ್ಷ ಹೆಚ್ಚಿಸಲಾಗಿದೆ.
ನೇಮಕಾತಿಗೆ ಕರೆದಿರುವ ಪೊಲೀಸ್ ಕಾನ್ಸ್ ಟೇಬಲ್ ( ಸಿಎಆರ್ ಮತ್ತು ಡಿಎಆರ್) 420+3064 ಸೇರಿ ಒಟ್ಟು 3484 ಹುದ್ದೆಗಳಿಗೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ ( ಸಿವಿಲ್ ) 1137+454 ಸೇರಿದಂತೆ 1591 ಹುದ್ದೆಗಳಿಗೆ ಮಾತ್ರ ಗರಿಷ್ಠ ವಯೋಮಿತಿಯನ್ನು ಎರಡು ವರ್ಷಗಳಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ ( ಸಿಎಆರ್ ಮತ್ತು ಡಿಎಆರ್ ) ಹುದ್ದೆಗಳಿಗೆ ಗರಿಷ್ಠ ವಯೋಮಿತಿಯ ಕುರಿತಂತೆ ಸಂಬಂಧಿಸಿದ ನೇಮಕಾತಿ ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡಲು ಷರತ್ತಿಗೆ ಒಳಪಟ್ಟು ಈ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ. ಎರಡು ದಿನಗಳ ಹಿಂದೆ ಪಿಎಸ್ಐ ಅಭ್ಯರ್ಥಿಗಳು ವಯೋಮಿತಿ ಹೆಚ್ಚಿಸಲು ಗೃಹ ಸಚಿವರಿಗೆ ಮನವಿ ನೀಡಿದ್ದರು. ಈ ವೇಳೆ, ಗೊಂದಲ ಏರ್ಪಟ್ಟು ಒಬ್ಬ ಅಭ್ಯರ್ಥಿಗೆ ಡಿವೈಎಸ್ಪಿ ಕಪಾಳಮೋಕ್ಷ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು.
Civil, CAR, DAR, Police Constable (police constable) Recruitment Age Limit (Age limit) The state government has issued an order to increase by 2 years. This will be applicable only for constable recruitment for the year 2022-23. The maximum recruitment age of the state police constable has been increased once before and now it has been ordered to increase it to two years. In this regard, the Under Secretary to the Government of the District Administration Department has fixed the maximum age limit for the posts of Police Constable (Civil) and Police Constable (CAR and DAR).
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm