ಬ್ರೇಕಿಂಗ್ ನ್ಯೂಸ್
04-11-22 05:20 pm Bangalore Correspondent ಕರ್ನಾಟಕ
ಬೆಂಗಳೂರು, ನ.4: ಬೆಂಗಳೂರಿನಲ್ಲಿ ರಸ್ತೆ ಗುಂಡಿ, ಅದರ ಬಗ್ಗೆ ಸರಕಾರ ನಿರ್ಲಕ್ಷ್ಯ ವಹಿಸಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ. ಇದರ ನಡುವಲ್ಲೇ ಮಲ್ಲೇಶ್ವರದಲ್ಲಿ ರಸ್ತೆ ಗುಂಡಿಯಿಂದಾಗಿ ಸಮಸ್ಯೆ ಅನುಭವಿಸಿದ ವೃದ್ಧ ದಂಪತಿ ತಾವೇ ಚೀಲದಲ್ಲಿ ಮಣ್ಣು ತಂದು ಗುಂಡಿ ಮುಚ್ಚಿದ್ದು, ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಮಲ್ಲೇಶ್ವರದಲ್ಲಿ ರಸ್ತೆ ಗುಂಡಿಗೆ ಬಿದ್ದು ಕೂದಲೆಳೆಯಲ್ಲಿ ತಮ್ಮ ಪತಿ ಬಚಾವ್ ಆಗಿದ್ದರು. ಇದರಿಂದ ಸಿಟ್ಟಿಗೆದ್ದ ಪತ್ನಿ ನಾಗಮಣಿ ಎಂಬ ಮಹಿಳೆ ತಾನೇ ಪತಿಯೊಂದಿಗೆ ಸೇರಿ ರಸ್ತೆ ಗುಂಡಿಗೆ ಮಣ್ಣು ಹಾಕಿ ಮುಚ್ಚಿದ್ದಾರೆ. ಅಲ್ಲದೆ, ಅದರ ವಿಡಿಯೋವನ್ನು ತಾವೇ ಫೇಸ್ಬುಕ್ ನಲ್ಲಿ ಹಾಕಿದ್ದು, ಸಾರ್ವಜನಿಕರು ಇನ್ನಾದ್ರೂ ರಸ್ತೆ ಗುಂಡಿ ಮುಚ್ಚಲು ಧ್ವನಿಯೆತ್ತಿ ಎಂದು ಹೇಳಿದ್ದಾರೆ. ಈ ವಿಡಿಯೋ ಭಾರೀ ಸಂಖ್ಯೆಯಲ್ಲಿ ಷೇರ್ ಆಗಿದ್ದು, ಸಾವಿರಾರು ಮಂದಿ ಲೈಕ್ಸ್ ಕೊಟ್ಟಿದ್ದಾರೆ.
ಮಲ್ಲೇಶ್ವರದ ಬಸ್ ನಿಲ್ದಾಣ ಮತ್ತು 18ನೇ ಕ್ರಾಸ್ ನಲ್ಲಿ ರಸ್ತೆ ಗುಂಡಿಯಿಂದಾಗಿ ತೊಂದರೆಯಾಗಿದೆ. ಈಗಷ್ಟೇ ನನ್ನ ಪತಿ ಗುಂಡಿಗೆ ಬಿದ್ದು ಅಪಾಯದಿಂದ ಪಾರಾಗಿ ಬಂದಿದ್ದಾರೆ. ಹಾಗಾಗಿ ಕಲ್ಲು, ಮಣ್ಣು ಮುಚ್ಚಿ ಬಂದಿದ್ದೇನೆ, ಇದರಿಂದ ಗುಂಡಿಗೆ ಬಿದ್ದರೂ ಪ್ರಾಣ ಹೋಗದಂತೆ ತಾತ್ಕಾಲಿಕ ದುರಸ್ತಿ ಮಾಡಿದ್ದೇನೆ. ರಸ್ತೆ ಗುಂಡಿ ಮುಚ್ಚಲು ಸಾರ್ವಜನಿಕರು ಧ್ವನಿಯೆತ್ತುವಂತೆ ನಾಗಮಣಿ ಹೇಳಿದ್ದು ಸರಕಾರಕ್ಕೆ ಚಾಟಿ ಬೀಸಿದಂತಾಗಿದೆ. ಕೆಲವರು ಇದೇ ವಿಡಿಯೋವನ್ನು ಟ್ವಿಟರ್ ನಲ್ಲಿ ಹಾಕಿದ್ದು, ಸಿಎಂ ಬೊಮ್ಮಾಯಿ ಮತ್ತು ಬಿಬಿಎಂಪಿ ಕಮಿಷನರ್ ಗೆ ಟ್ಯಾಗ್ ಮಾಡಿದ್ದಾರೆ. ರಸ್ತೆ ಗುಂಡಿ ಮುಚ್ಚಲು ಇನ್ನೆಷ್ಟು ದಿನ ಬೇಕು. ಎಷ್ಟು ಜನರ ಪ್ರಾಣ ಹೋಗಬೇಕು ಎಂದು ಪ್ರಶ್ನೆ ಮಾಡಿದ್ದಾರೆ.
This is from #Malleshwaram, #Bengaluru, #Karnataka.
— Hate Detector 🔍 (@HateDetectors) November 3, 2022
Today morning Nagamani’s husband escaped a near death because of the #Pothole. Both husband wife came to #Potholes & filled with soil for least, so that nobody gets injured or die. This is state of #NammaBengaluru roads. pic.twitter.com/uMeTAFYatY
A Bengaluru-based couple went viral on social media after a video of them filling up a pothole made rounds. The couple took the action as the husband had met with a serious accident and escaped death closely, a Twitter page said. The video shows them bringing a sack of soil to the accident spot and filling up the pothole.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm