ಬ್ರೇಕಿಂಗ್ ನ್ಯೂಸ್
04-11-22 11:00 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.4:ದತ್ತಮಾಲಾ ಅಭಿಯಾನದ ಹಿನ್ನೆಲೆಯಲ್ಲಿ ದತ್ತಪೀಠ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ನ.13 ಹಾಗೂ ನ.14 ರಂದು ಪ್ರವಾಸಿಗರ ಪ್ರವೇಶ ನಿಷೇಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಮಾಡಿದೆ.
ದತ್ತಮಾಲೆ ಅಭಿಯಾನ ಹಿನ್ನೆಲೆ ಶ್ರೀರಾಮ ಸೇನೆ ಕಾರ್ಯಕರ್ತರು ನ.13 ರಂದು ಶ್ರೀ ಗುರು ದತ್ತಾತ್ರೇಯ ಪೀಠಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ಪ್ರವಾಸಿಗರ ಭೇಟಿಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಆದೇಶ ಹೊರಡಿಸಿದ್ದಾರೆ.
ನವೆಂಬರ್ 13 ರ ಬೆಳಗ್ಗೆ 6 ರಿಂದ ನ.14 ರ ಬೆಳಗ್ಗೆ 10 ಗಂಟೆ ವರೆಗೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. ಆದ್ದರಿಂದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗರಿ, ದತ್ತಪೀಠಕ್ಕೆ ಬರಲು ಪ್ಲ್ಯಾನ್ ಹಾಕಿಕೊಂಡವರು ಈ ಎರಡು ದಿನ ಭೇಟಿ ನೀಡದಿರುವುದು ಒಳ್ಳೆಯದು.
ದತ್ತಪೀಠದಲ್ಲಿ ಹಿಂದು ಅರ್ಚಕರ ನೇಮಕಕ್ಕೆ ಗಡುವು
ಇದೇ ನವೆಂಬರ್ 13 ರೊಳಗೆ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ಮಾಡಬೇಕು, ಇಲ್ಲವಾದಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಶ್ರೀರಾಮಸೇನೆ ಎಚ್ಚರಿಕೆ ನೀಡಿದೆ. ನ.13 ರಂದು ದತ್ತಪೀಠ ಅಭಿಯಾನಕ್ಕೆ ದಿನಾಂಕ ನಿಗದಿಪಡಿಸಿದ್ದು ಆ ದಿನದ ಒಳಗೆ ದತ್ತಪೀಠಕ್ಕೆ ಹಿಂದು ಅರ್ಚಕರ ನೇಮಕವಾಗಬೇಕು, ಇಲ್ಲವಾದಲ್ಲಿ ಪರಿಣಾಮ ನೆಟ್ಟಗಿರಲ್ಲ ಎಂದು ಶ್ರೀರಾಮ ಸೇನೆ ರಾಜ್ಯ ಸಂಚಾಲಕ ಗಂಗಾಧರ್ ಕುಲಕರ್ಣಿ ಎಚ್ಚರಿಕೆ ನೀಡಿದ್ದಾರೆ.
ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ
ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದ ಪೂಜಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಎರಡೂ ಧರ್ಮದ ಸಂಪ್ರದಾಯಗಳ ಪ್ರಕಾರ ಪೂಜಾವಿಧಿ ನಡೆಸಲು ಮುಜಾವರ್ ಹಾಗೂ ಅರ್ಚಕರಿಗೆ ಅವಕಾಶ ನೀಡಲಾಗಿದೆ ಎಂದು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿತ್ತು. ಆದರೆ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸೈಯದ್ ಗೌಸ್ ಮೊಹಿಯುದ್ದೀನ್ ಶಾಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಾಲಯವು ಮೇಲಿನಂತೆ ಆದೇಶ ಹೊರಡಿಸಿತ್ತು.
Chikmagaluru Dattatreya peeta entry restricted after Nov 13 and 14, preparation for Datamale
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm