ಬ್ರೇಕಿಂಗ್ ನ್ಯೂಸ್
04-11-22 11:00 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.4:ದತ್ತಮಾಲಾ ಅಭಿಯಾನದ ಹಿನ್ನೆಲೆಯಲ್ಲಿ ದತ್ತಪೀಠ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ನ.13 ಹಾಗೂ ನ.14 ರಂದು ಪ್ರವಾಸಿಗರ ಪ್ರವೇಶ ನಿಷೇಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಮಾಡಿದೆ.
ದತ್ತಮಾಲೆ ಅಭಿಯಾನ ಹಿನ್ನೆಲೆ ಶ್ರೀರಾಮ ಸೇನೆ ಕಾರ್ಯಕರ್ತರು ನ.13 ರಂದು ಶ್ರೀ ಗುರು ದತ್ತಾತ್ರೇಯ ಪೀಠಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ಪ್ರವಾಸಿಗರ ಭೇಟಿಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಆದೇಶ ಹೊರಡಿಸಿದ್ದಾರೆ.
ನವೆಂಬರ್ 13 ರ ಬೆಳಗ್ಗೆ 6 ರಿಂದ ನ.14 ರ ಬೆಳಗ್ಗೆ 10 ಗಂಟೆ ವರೆಗೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. ಆದ್ದರಿಂದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗರಿ, ದತ್ತಪೀಠಕ್ಕೆ ಬರಲು ಪ್ಲ್ಯಾನ್ ಹಾಕಿಕೊಂಡವರು ಈ ಎರಡು ದಿನ ಭೇಟಿ ನೀಡದಿರುವುದು ಒಳ್ಳೆಯದು.
ದತ್ತಪೀಠದಲ್ಲಿ ಹಿಂದು ಅರ್ಚಕರ ನೇಮಕಕ್ಕೆ ಗಡುವು
ಇದೇ ನವೆಂಬರ್ 13 ರೊಳಗೆ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ಮಾಡಬೇಕು, ಇಲ್ಲವಾದಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಶ್ರೀರಾಮಸೇನೆ ಎಚ್ಚರಿಕೆ ನೀಡಿದೆ. ನ.13 ರಂದು ದತ್ತಪೀಠ ಅಭಿಯಾನಕ್ಕೆ ದಿನಾಂಕ ನಿಗದಿಪಡಿಸಿದ್ದು ಆ ದಿನದ ಒಳಗೆ ದತ್ತಪೀಠಕ್ಕೆ ಹಿಂದು ಅರ್ಚಕರ ನೇಮಕವಾಗಬೇಕು, ಇಲ್ಲವಾದಲ್ಲಿ ಪರಿಣಾಮ ನೆಟ್ಟಗಿರಲ್ಲ ಎಂದು ಶ್ರೀರಾಮ ಸೇನೆ ರಾಜ್ಯ ಸಂಚಾಲಕ ಗಂಗಾಧರ್ ಕುಲಕರ್ಣಿ ಎಚ್ಚರಿಕೆ ನೀಡಿದ್ದಾರೆ.
ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ
ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದ ಪೂಜಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಎರಡೂ ಧರ್ಮದ ಸಂಪ್ರದಾಯಗಳ ಪ್ರಕಾರ ಪೂಜಾವಿಧಿ ನಡೆಸಲು ಮುಜಾವರ್ ಹಾಗೂ ಅರ್ಚಕರಿಗೆ ಅವಕಾಶ ನೀಡಲಾಗಿದೆ ಎಂದು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿತ್ತು. ಆದರೆ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸೈಯದ್ ಗೌಸ್ ಮೊಹಿಯುದ್ದೀನ್ ಶಾಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಾಲಯವು ಮೇಲಿನಂತೆ ಆದೇಶ ಹೊರಡಿಸಿತ್ತು.
Chikmagaluru Dattatreya peeta entry restricted after Nov 13 and 14, preparation for Datamale
24-12-25 11:20 pm
Bangalore Correspondent
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm