ಬ್ರೇಕಿಂಗ್ ನ್ಯೂಸ್
06-11-22 12:38 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.6: ಮಂಗಳೂರಿನಲ್ಲಿ ನಾವು ಬಿಜೆಪಿಯನ್ನ ಎಲ್ಲಿಗೆ ತಂದು ನಿಲ್ಲಿಸುತ್ತೇವೆ ನೋಡಿ ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಬಿಜೆಪಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ.
ಬಿಜೆಪಿ ಜಾತಿ, ಧರ್ಮಕ್ಕೆ ದ್ರೋಹ ಮಾಡಿದ್ದು, ಆಜಾನ್ ನೆಪದಲ್ಲಿ ಕೂಗೆಬ್ಬಿಸಲು ಹೋಗಿ 80 ಪರ್ಸೆಂಟ್ ಹಿಂದೂಗಳಿಗೆ ಮೋಸ ಮಾಡಿದ್ದಾರೆ. ಈಗ ರಾತ್ರಿ ವೇಳೆ ಗಣೇಶ ಹಬ್ಬ ಮಾಡೋಕ್ಕಾಗುತ್ತಾ ಎಂದು ಮಧು ಪ್ರಶ್ನಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಬಿಜೆಪಿ, ಸಂಘ ಪರಿವಾರ ಹಾಗೂ ವಿ.ಎಚ್.ಪಿಯವರೇ ಮುಖ್ಯ ಪಾತ್ರಧಾರಿಗಳು. ಅಲ್ಲಿ ಪ್ರತಿ ಬಾರಿ ಬೆಂಕಿ ಹಚ್ಚುವವರು ಅವರೇ. ಆಜಾನ್ ಹೆಸರಲ್ಲಿ ಮುಸ್ಲಿಮರಿಗೆ ಮೋಸ ಮಾಡಿದ್ದು ಬಿಜೆಪಿಯವರು. ಆಜಾನ್ ಕೂಗಿನಿಂದ ಯಾರೂ ಹೃದಯಾಘಾತವಾಗಿ ಸತ್ತಿಲ್ಲ. ಯಾವತ್ತೋ ಕೋರ್ಟ್ ಆದೇಶ ಮಾಡಿತ್ತು. ಅದು ಜಾರಿಗೆ ಬಂದಿರಲಿಲ್ಲ. ಅದನ್ನು ಜಾರಿ ಮಾಡಲು ಹೋಗಿ ಹಿಂದುಗಳಿಗೂ ಮೋಸ ಮಾಡಿದ್ದಾರೆ ಎಂದರು.

ಹಿಂದೂಗಳಿಗೆ ಏಕೆ ಬಿಜೆಪಿ ಮೇಲೆ ಸಿಟ್ಟು, ದ್ವೇಷ ಅಂದರೆ, ಅವರದ್ದು ಆಫ್ ಮಾಡಿಸಲು ಹೋಗಿ ಹಿಂದೂಗಳ ಮೈಕ್ ಆಫ್ ಮಾಡಿಸಿದ್ದಾರೆ. ಜಾತಿ, ಧರ್ಮಕ್ಕೆ ದ್ರೋಹ ಮಾಡಿದವರು ಬಿಜೆಪಿಯವರು. ನಾನು ಹೇಳುವುದು ಇಷ್ಟೆ. ಮಂಗಳೂರಿನಲ್ಲಿ ಕಳೆದ ಬಾರಿ ಕಾಂಗ್ರೆಸ್ ಗೆದ್ದಿರುವುದು ಒಂದೇ ಒಂದು ಸೀಟು. ಆದರೆ, ಈ ಬಾರಿ ಮಂಗಳೂರಿನಲ್ಲಿ ಬಿಜೆಪಿಯವರನ್ನ ಎಲ್ಲಿಗೆ ತಂದು ನಿಲ್ಲಿಸುತ್ತೇವೆ ನೋಡಿ. ನಾನು ಈಗ ಹೇಳಕ್ಕೋಗುವುದಿಲ್ಲ. ಚುನಾವಣೆ ಬಂದಾಗ ಗೊತ್ತಾಗುತ್ತದೆ ಎಂದು ಮಧು ಬಂಗಾರಪ್ಪ ಬಿಜೆಪಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಏನಾಗಿತ್ತು. ಅಲ್ಲಿ ನಳಿನ್ ಕುಮಾರ್ ಕಾರಿನ ಟೈರ್ ಪಂಚರ್ ಮಾಡಿದ್ದು ಯಾರು? ಅಲ್ಲಿ ಕಾರನ್ನು ಅಲ್ಲಾಡಿಸಿದ್ದು ಯಾರು? ಇದೇ ಬಜರಂಗದಳ, ವಿಎಚ್ ಪಿಯವರು. ಬೇರೆ ಯಾರೂ ಅಲ್ಲ. ಇವರು ಅಧಿಕಾರಕ್ಕೆ ಬಂದು ಕೊಲೆ ರಾಜಕೀಯ ಮಾಡುತ್ತಿದ್ದಾರೆ ಅಂತ ಅವರಿಗೆ ಅರ್ಥ ಆಗಿದೆ. ಅದಕ್ಕಾಗಿ ಗೋ ಬ್ಯಾಕ್ ಸುನಿಲ್, ನಳಿನ್ ಅಂತ ಘೋಷಣೆ ಕೂಗಿದ್ದಾರೆ. ಆರೆಸ್ಸೆಸ್ ಮಂದಿಯೇ ಈ ಘೋಷಣೆ ಕೂಗಿದ್ದಾರೆ. ಇವರು ಅಧಿಕಾರಕ್ಕೆ ಬಂದು ಕೊಲೆ ರಾಜಕೀಯವನ್ನೇ ಮಾಡಿದ್ದು ಬೇರೇನೂ ಮಾಡಿಲ್ಲ. ಜನ ಪಾಠ ಕಲಿಸಲು ತಯಾರಾಗಿದ್ದಾರೆ ಎಂದರು.
See what will be the position of BJP in Mangalore in coming election challenges Madhu Bangarappa
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 11:48 am
HK News Staffer
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm