ಬ್ರೇಕಿಂಗ್ ನ್ಯೂಸ್
06-11-22 12:38 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.6: ಮಂಗಳೂರಿನಲ್ಲಿ ನಾವು ಬಿಜೆಪಿಯನ್ನ ಎಲ್ಲಿಗೆ ತಂದು ನಿಲ್ಲಿಸುತ್ತೇವೆ ನೋಡಿ ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಬಿಜೆಪಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ.
ಬಿಜೆಪಿ ಜಾತಿ, ಧರ್ಮಕ್ಕೆ ದ್ರೋಹ ಮಾಡಿದ್ದು, ಆಜಾನ್ ನೆಪದಲ್ಲಿ ಕೂಗೆಬ್ಬಿಸಲು ಹೋಗಿ 80 ಪರ್ಸೆಂಟ್ ಹಿಂದೂಗಳಿಗೆ ಮೋಸ ಮಾಡಿದ್ದಾರೆ. ಈಗ ರಾತ್ರಿ ವೇಳೆ ಗಣೇಶ ಹಬ್ಬ ಮಾಡೋಕ್ಕಾಗುತ್ತಾ ಎಂದು ಮಧು ಪ್ರಶ್ನಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಬಿಜೆಪಿ, ಸಂಘ ಪರಿವಾರ ಹಾಗೂ ವಿ.ಎಚ್.ಪಿಯವರೇ ಮುಖ್ಯ ಪಾತ್ರಧಾರಿಗಳು. ಅಲ್ಲಿ ಪ್ರತಿ ಬಾರಿ ಬೆಂಕಿ ಹಚ್ಚುವವರು ಅವರೇ. ಆಜಾನ್ ಹೆಸರಲ್ಲಿ ಮುಸ್ಲಿಮರಿಗೆ ಮೋಸ ಮಾಡಿದ್ದು ಬಿಜೆಪಿಯವರು. ಆಜಾನ್ ಕೂಗಿನಿಂದ ಯಾರೂ ಹೃದಯಾಘಾತವಾಗಿ ಸತ್ತಿಲ್ಲ. ಯಾವತ್ತೋ ಕೋರ್ಟ್ ಆದೇಶ ಮಾಡಿತ್ತು. ಅದು ಜಾರಿಗೆ ಬಂದಿರಲಿಲ್ಲ. ಅದನ್ನು ಜಾರಿ ಮಾಡಲು ಹೋಗಿ ಹಿಂದುಗಳಿಗೂ ಮೋಸ ಮಾಡಿದ್ದಾರೆ ಎಂದರು.

ಹಿಂದೂಗಳಿಗೆ ಏಕೆ ಬಿಜೆಪಿ ಮೇಲೆ ಸಿಟ್ಟು, ದ್ವೇಷ ಅಂದರೆ, ಅವರದ್ದು ಆಫ್ ಮಾಡಿಸಲು ಹೋಗಿ ಹಿಂದೂಗಳ ಮೈಕ್ ಆಫ್ ಮಾಡಿಸಿದ್ದಾರೆ. ಜಾತಿ, ಧರ್ಮಕ್ಕೆ ದ್ರೋಹ ಮಾಡಿದವರು ಬಿಜೆಪಿಯವರು. ನಾನು ಹೇಳುವುದು ಇಷ್ಟೆ. ಮಂಗಳೂರಿನಲ್ಲಿ ಕಳೆದ ಬಾರಿ ಕಾಂಗ್ರೆಸ್ ಗೆದ್ದಿರುವುದು ಒಂದೇ ಒಂದು ಸೀಟು. ಆದರೆ, ಈ ಬಾರಿ ಮಂಗಳೂರಿನಲ್ಲಿ ಬಿಜೆಪಿಯವರನ್ನ ಎಲ್ಲಿಗೆ ತಂದು ನಿಲ್ಲಿಸುತ್ತೇವೆ ನೋಡಿ. ನಾನು ಈಗ ಹೇಳಕ್ಕೋಗುವುದಿಲ್ಲ. ಚುನಾವಣೆ ಬಂದಾಗ ಗೊತ್ತಾಗುತ್ತದೆ ಎಂದು ಮಧು ಬಂಗಾರಪ್ಪ ಬಿಜೆಪಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಏನಾಗಿತ್ತು. ಅಲ್ಲಿ ನಳಿನ್ ಕುಮಾರ್ ಕಾರಿನ ಟೈರ್ ಪಂಚರ್ ಮಾಡಿದ್ದು ಯಾರು? ಅಲ್ಲಿ ಕಾರನ್ನು ಅಲ್ಲಾಡಿಸಿದ್ದು ಯಾರು? ಇದೇ ಬಜರಂಗದಳ, ವಿಎಚ್ ಪಿಯವರು. ಬೇರೆ ಯಾರೂ ಅಲ್ಲ. ಇವರು ಅಧಿಕಾರಕ್ಕೆ ಬಂದು ಕೊಲೆ ರಾಜಕೀಯ ಮಾಡುತ್ತಿದ್ದಾರೆ ಅಂತ ಅವರಿಗೆ ಅರ್ಥ ಆಗಿದೆ. ಅದಕ್ಕಾಗಿ ಗೋ ಬ್ಯಾಕ್ ಸುನಿಲ್, ನಳಿನ್ ಅಂತ ಘೋಷಣೆ ಕೂಗಿದ್ದಾರೆ. ಆರೆಸ್ಸೆಸ್ ಮಂದಿಯೇ ಈ ಘೋಷಣೆ ಕೂಗಿದ್ದಾರೆ. ಇವರು ಅಧಿಕಾರಕ್ಕೆ ಬಂದು ಕೊಲೆ ರಾಜಕೀಯವನ್ನೇ ಮಾಡಿದ್ದು ಬೇರೇನೂ ಮಾಡಿಲ್ಲ. ಜನ ಪಾಠ ಕಲಿಸಲು ತಯಾರಾಗಿದ್ದಾರೆ ಎಂದರು.
See what will be the position of BJP in Mangalore in coming election challenges Madhu Bangarappa
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm