ಬ್ರೇಕಿಂಗ್ ನ್ಯೂಸ್
06-11-22 12:38 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.6: ಮಂಗಳೂರಿನಲ್ಲಿ ನಾವು ಬಿಜೆಪಿಯನ್ನ ಎಲ್ಲಿಗೆ ತಂದು ನಿಲ್ಲಿಸುತ್ತೇವೆ ನೋಡಿ ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಬಿಜೆಪಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ.
ಬಿಜೆಪಿ ಜಾತಿ, ಧರ್ಮಕ್ಕೆ ದ್ರೋಹ ಮಾಡಿದ್ದು, ಆಜಾನ್ ನೆಪದಲ್ಲಿ ಕೂಗೆಬ್ಬಿಸಲು ಹೋಗಿ 80 ಪರ್ಸೆಂಟ್ ಹಿಂದೂಗಳಿಗೆ ಮೋಸ ಮಾಡಿದ್ದಾರೆ. ಈಗ ರಾತ್ರಿ ವೇಳೆ ಗಣೇಶ ಹಬ್ಬ ಮಾಡೋಕ್ಕಾಗುತ್ತಾ ಎಂದು ಮಧು ಪ್ರಶ್ನಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಬಿಜೆಪಿ, ಸಂಘ ಪರಿವಾರ ಹಾಗೂ ವಿ.ಎಚ್.ಪಿಯವರೇ ಮುಖ್ಯ ಪಾತ್ರಧಾರಿಗಳು. ಅಲ್ಲಿ ಪ್ರತಿ ಬಾರಿ ಬೆಂಕಿ ಹಚ್ಚುವವರು ಅವರೇ. ಆಜಾನ್ ಹೆಸರಲ್ಲಿ ಮುಸ್ಲಿಮರಿಗೆ ಮೋಸ ಮಾಡಿದ್ದು ಬಿಜೆಪಿಯವರು. ಆಜಾನ್ ಕೂಗಿನಿಂದ ಯಾರೂ ಹೃದಯಾಘಾತವಾಗಿ ಸತ್ತಿಲ್ಲ. ಯಾವತ್ತೋ ಕೋರ್ಟ್ ಆದೇಶ ಮಾಡಿತ್ತು. ಅದು ಜಾರಿಗೆ ಬಂದಿರಲಿಲ್ಲ. ಅದನ್ನು ಜಾರಿ ಮಾಡಲು ಹೋಗಿ ಹಿಂದುಗಳಿಗೂ ಮೋಸ ಮಾಡಿದ್ದಾರೆ ಎಂದರು.

ಹಿಂದೂಗಳಿಗೆ ಏಕೆ ಬಿಜೆಪಿ ಮೇಲೆ ಸಿಟ್ಟು, ದ್ವೇಷ ಅಂದರೆ, ಅವರದ್ದು ಆಫ್ ಮಾಡಿಸಲು ಹೋಗಿ ಹಿಂದೂಗಳ ಮೈಕ್ ಆಫ್ ಮಾಡಿಸಿದ್ದಾರೆ. ಜಾತಿ, ಧರ್ಮಕ್ಕೆ ದ್ರೋಹ ಮಾಡಿದವರು ಬಿಜೆಪಿಯವರು. ನಾನು ಹೇಳುವುದು ಇಷ್ಟೆ. ಮಂಗಳೂರಿನಲ್ಲಿ ಕಳೆದ ಬಾರಿ ಕಾಂಗ್ರೆಸ್ ಗೆದ್ದಿರುವುದು ಒಂದೇ ಒಂದು ಸೀಟು. ಆದರೆ, ಈ ಬಾರಿ ಮಂಗಳೂರಿನಲ್ಲಿ ಬಿಜೆಪಿಯವರನ್ನ ಎಲ್ಲಿಗೆ ತಂದು ನಿಲ್ಲಿಸುತ್ತೇವೆ ನೋಡಿ. ನಾನು ಈಗ ಹೇಳಕ್ಕೋಗುವುದಿಲ್ಲ. ಚುನಾವಣೆ ಬಂದಾಗ ಗೊತ್ತಾಗುತ್ತದೆ ಎಂದು ಮಧು ಬಂಗಾರಪ್ಪ ಬಿಜೆಪಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಏನಾಗಿತ್ತು. ಅಲ್ಲಿ ನಳಿನ್ ಕುಮಾರ್ ಕಾರಿನ ಟೈರ್ ಪಂಚರ್ ಮಾಡಿದ್ದು ಯಾರು? ಅಲ್ಲಿ ಕಾರನ್ನು ಅಲ್ಲಾಡಿಸಿದ್ದು ಯಾರು? ಇದೇ ಬಜರಂಗದಳ, ವಿಎಚ್ ಪಿಯವರು. ಬೇರೆ ಯಾರೂ ಅಲ್ಲ. ಇವರು ಅಧಿಕಾರಕ್ಕೆ ಬಂದು ಕೊಲೆ ರಾಜಕೀಯ ಮಾಡುತ್ತಿದ್ದಾರೆ ಅಂತ ಅವರಿಗೆ ಅರ್ಥ ಆಗಿದೆ. ಅದಕ್ಕಾಗಿ ಗೋ ಬ್ಯಾಕ್ ಸುನಿಲ್, ನಳಿನ್ ಅಂತ ಘೋಷಣೆ ಕೂಗಿದ್ದಾರೆ. ಆರೆಸ್ಸೆಸ್ ಮಂದಿಯೇ ಈ ಘೋಷಣೆ ಕೂಗಿದ್ದಾರೆ. ಇವರು ಅಧಿಕಾರಕ್ಕೆ ಬಂದು ಕೊಲೆ ರಾಜಕೀಯವನ್ನೇ ಮಾಡಿದ್ದು ಬೇರೇನೂ ಮಾಡಿಲ್ಲ. ಜನ ಪಾಠ ಕಲಿಸಲು ತಯಾರಾಗಿದ್ದಾರೆ ಎಂದರು.
See what will be the position of BJP in Mangalore in coming election challenges Madhu Bangarappa
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm