ಬ್ರೇಕಿಂಗ್ ನ್ಯೂಸ್
06-11-22 07:31 pm HK News Desk ಕರ್ನಾಟಕ
ಗದಗ, ನ.6: ದೇವಸ್ಥಾನದಲ್ಲಿ ಕೊಡುವ ತೀರ್ಥವನ್ನು ಕುಡಿಯುವುದರಿಂದ ರೋಗಗಳು ಹರಡುತ್ತವೆ. ತೀರ್ಥ ಕೊಡುವವರು ತಮ್ಮ ಕೈಯನ್ನು ಶುದ್ಧವಾಗಿ ಕೈ ಇಟ್ಟುಕೊಂಡಿರುವುದಿಲ್ಲ. ಇದರಿಂದ ಎಷ್ಟೋ ಜನರು ವಾಂತಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವೆ, ವಿಚಾರವಾದಿ ಬಿ.ಟಿ.ಲಲಿತಾ ನಾಯಕ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಎಲ್ಲರ ಮನೆಯಲ್ಲಿಯೂ ನೀರು ಇದೆ. ಹೀಗಿದ್ದಾಗ ತೀರ್ಥ ಯಾಕೆ ಕುಡಿಯಬೇಕು. ಹೆಣ ಸುಟ್ಟು ಗಂಗಾ ನದಿಗೆ ಎಸೆಯುತ್ತಾರೆ. ಇದರಿಂದ ನದಿಯಲ್ಲಿ ಹೆಣಗಳು ತೇಲಿ ಬರುತ್ತವೆ. ಇಂತಹ ಜಲವನ್ನು ಗಂಗಾಜಲವೆಂದು ಯಾಕೆ ಕುಡಿಯಬೇಕು ಎಂದು ಲಲಿತಾ ನಾಯಕ್ ಪ್ರಶ್ನಿಸಿದ್ದಾರೆ.
ಕಾಣದ ದೇವರಿಗೆ ಪೂಜೆ ಮಾಡುವಾಗ ಹೂವು, ಬಟ್ಟೆ ಯಾಕೆ ಹಾಕಬೇಕು. ದೇವಸ್ಥಾನದಲ್ಲಿ ಯಾರೋ ಹೇಳಿದರೆಂದು ದುಡ್ಡು ಹಾಕುತ್ತಾರೆ. ಜನರು ಅನಗತ್ಯವಾಗಿ ಹಣ ಪೋಲು ಮಾಡಬಾರದು. ಆದರೆ ಈಗ ಜನರಿಗೂ ತಿಳುವಳಿಕೆ ಬಂದಿದೆ. ಜನರು ದೇವಸ್ಥಾನದಲ್ಲಿ ದುಡ್ಡು ಹಾಕುತ್ತಿಲ್ಲ ಎಂದು ಹೇಳಿದರು.
ಪೂಜೆ ಎಂದರೆ ದೇಹ, ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳುವುದು ಎಂದರ್ಥ. ಇದನ್ನು ಸರ್ಕಾರಗಳು, ಸಂಘ- ಸಂಸ್ಥೆಗಳು ಜನರಿಗೆ ಮನವರಿಕೆ ಮಾಡಬೇಕಾಗಿದೆ. ವೈಜ್ಞಾನಿಕ ಸತ್ಯ ಏನಿವೆಯೋ ಅದನ್ನು ಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ ಎಂದು ಲಲಿತಾ ನಾಯಕ್ ಅಭಿಪ್ರಾಯಪಟ್ಟಿದ್ದಾರೆ.
ಕಾಂತಾರ ಸಿನಿಮಾ ಮತ್ತು ದೈವ ನರ್ತಕರ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಿದ್ದ ಲಲಿತಾ ನಾಯಕ್ ಭಾರೀ ಟೀಕೆಗೆ ಒಳಗಾಗಿದ್ದರು.
Theertham in the temple will cause many diseases another controversy by activist Lalitha Naik
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm