ಬ್ರೇಕಿಂಗ್ ನ್ಯೂಸ್
06-11-22 10:52 pm Bangalore Correspondent ಕರ್ನಾಟಕ
ಬೆಂಗಳೂರು, ನ.6: ತಾನು ಶಾಸಕನಾಗಬೇಕು, ಸಚಿವನಾಗಬೇಕು, ಸಿಎಂ ಆಗಬೇಕು ಎಂದು ಕುರ್ಚಿಯ ಆಸೆ ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ಸೇರಬೇಡಿ. ಪಕ್ಷದ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಬನ್ನಿ ಎಂದು ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರಾಗಿ ಮೊದಲ ಬಾರಿಗೆ ತವರು ರಾಜ್ಯಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆಂಗಳೂರಿನಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಬೃಹತ್ ಸೇಬಿನ ಹಾರ ತೊಡಿಸಿ ಖರ್ಗೆ ಅವರನ್ನು ಸ್ವಾಗತಿಸಲಾಯಿತು. ಬಳಿಕ ಅರಮನೆ ಮೈದಾನದಲ್ಲಿ ನಡೆದ ಸರ್ವೋದಯ ಸಮಾವೇಶದಲ್ಲಿ ಮಾತನಾಡಿದ ಖರ್ಗೆ, ಯಾರಿಗೆ ಬದ್ಧತೆ, ನಂಬಿಕೆ ಇರುತ್ತದೆಯೋ ಅವರು ಎಂದಿಗೂ ಪಕ್ಷ ಬಿಡುವುದಿಲ್ಲ. ಹಲವು ಜನ ಮಂತ್ರಿ ಸ್ಥಾನ, ಅಧ್ಯಕ್ಷ ಸ್ಥಾನ ಸಿಕ್ಕಿಲ್ಲ ಎಂದು ಪಕ್ಷ ಬಿಡುತ್ತಾರೆ. ನಾವು ಕುರ್ಚಿಗಾಗಿ ಪಕ್ಷ ಸೇರಬಾರದು ಎಂದು ಪರೋಕ್ಷವಾಗಿ ಪಕ್ಷ ಬಿಟ್ಟು ಹೋಗುವವರಿಗೆ ಟಾಂಗ್ ನೀಡಿದರು.
![]()
ಕಳೆದ 70 ವರ್ಷಗಳಿಂದ ಏನು ಮಾಡಿದ್ದೀರೆಂದು ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ಕೇಳುತ್ತಾರೆ. ನಾವು ಕೆಲಸ ಮಾಡಿದ್ದರಿಂದಲೇ ದೇಶ ಈ ಹಂತಕ್ಕೆ ಬೆಳೆದು ನಿಂತಿದೆ. ಕಾಂಗ್ರೆಸ್ ಪಕ್ಷ ಸಂವಿಧಾನ, ಪ್ರಜಾಪ್ರಭುತ್ವ ಉಳಿಸಿದೆ. ದೇಶವನ್ನು ಒಗ್ಗಟ್ಟಾಗಿ ಇರಿಸಿದೆ. ನಾವು ಕಟ್ಟಿದ ಶಾಲೆಗಳಲ್ಲಿ ಕಲಿತು ಈಗ ನಮ್ಮನ್ನೇ ಏನೂ ಮಾಡಿಲ್ಲ ಅಂತ ಟೀಕಿಸುತ್ತಾರೆ. ಹಿಂದಿನ ಯಾವುದೇ ಸರ್ಕಾರ ಈ ರೀತಿ ಕೆಟ್ಟದಾಗಿ ನಡೆದುಕೊಂಡಿಲ್ಲ ಎಂದು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದರು.
ಪದೇ ಪದೆ ಕಾಂಗ್ರೆಸ್ ಪಕ್ಷದ ನಾಯಕರನ್ನು ಟೀಕೆ ಮಾಡುವುದು ಸರಿಯಲ್ಲ. ದೇಶಕ್ಕಾಗಿ ಗಾಂಧಿ ಕುಟುಂಬದ ತ್ಯಾಗ, ಕೊಡುಗೆ ಸಾಕಷ್ಟಿದೆ. ಇದರಲ್ಲಿ ಸ್ವಲ್ಪನಾದರೂ ನೀವು ಕೊಟ್ಟಿದ್ದರೆ ದೇಶ ಮತ್ತಷ್ಟು ಅಭಿವೃದ್ಧಿಯಾಗುತ್ತಿತ್ತು. ತಾಯಿ, ಮಕ್ಕಳ ಪಕ್ಷವೆಂದು ಪ್ರಧಾನಿ ಮೋದಿ ಕಾಂಗ್ರೆಸ್ನ್ನು ಟೀಕಿಸುತ್ತಾರೆ. ನಮ್ಮ ಪಕ್ಷದ ಆಂತರಿಕ ವಿಚಾರ ನಿಮಗೇಕೆ? ಜನ ನಿಮಗೆ ಅವಕಾಶ ಕೊಟ್ಟಿದ್ದಾರೆ, ದೇಶದ ಅಭಿವೃದ್ಧಿ ಕಡೆ ಗಮನ ಕೊಡಿ ಎಂದು ತಿರುಗೇಟು ನೀಡಿದರು.
ಭಾರತ್ ಜೋಡೋ ಯಾತ್ರೆಯಿಂದ ಬಿಜೆಪಿಯವರಿಗೆ ನಡುಕ ಹುಟ್ಟಿದೆ. ಭಾರತ್ ಜೋಡೋ ಯಾತ್ರೆ ಬಳಿಕ ಪ್ರಧಾನಿ ಮೋದಿ ಎಚ್ಚೆತ್ತಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶದ ಅಭಿವೃದ್ಧಿಯಲ್ಲಿ ಹಿನ್ನಡೆ ಆಗಿದೆ. ಹೀಗಾಗಿ ಒಗ್ಗಟ್ಟಾಗಿ ಕೆಲಸ ಮಾಡಿ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ತರೋಣ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.
Stressing upon the need to remain united to remove the BJP from power in 2023 elections, newly-elected president of All India Congress Committee Mallikarjun Kharge on Sunday urged his party leaders in Karnataka to bury their differences and work towards bringing the Congress back to power
24-12-25 11:20 pm
Bangalore Correspondent
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm