ಬ್ರೇಕಿಂಗ್ ನ್ಯೂಸ್
07-11-22 11:03 pm HK News Desk ಕರ್ನಾಟಕ
ಚಿತ್ರದುರ್ಗ, ನ. 8 : ಮುರುಘಾ ಶರಣ ಸ್ವಾಮೀಜಿ ವಿರುದ್ಧ ಇಬ್ಬರು ಬಾಲಕಿಯರು ನೀಡಿದ್ದ ದೂರಿನ ಪ್ರಕರಣದಲ್ಲಿ ತನಿಖೆ ಭಾಗಶಃ ಪೂರ್ಣಗೊಂಡಿದ್ದು ಚಾರ್ಜ್ಶೀಟ್ ಸಲ್ಲಿಸಲಾಗಿದೆ ಎಂದು ಚಿತ್ರದುರ್ಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಹೇಳಿದ್ದಾರೆ.
ಅಕ್ಟೋಬರ್ 27ರಂದೇ ತನಿಖಾಧಿಕಾರಿ ಅನಿಲ್, ಚಿತ್ರದುರ್ಗ ಜಿಲ್ಲಾ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ಶೀಟ್ನ ಸಿಸಿ ನಂಬರ್ ಬರುವುದು ಬಾಕಿಯಿದೆ. ಎ1 ಡಾ. ಶಿವಮೂರ್ತಿ ಮುರುಘಾ ಶರಣರು, ಎ2 ವಾರ್ಡನ್ ರಶ್ಮಿ ಮತ್ತು ಎ4 ಪರಮಶಿವಯ್ಯ ವಿರುದ್ಧ ಆರೋಪಗಳು ದೃಢಪಟ್ಟಿವೆ ಎಂದು ಚಿತ್ರದುರ್ಗ ಎಸ್ಪಿ ಪರಶುರಾಮ್ ಹೇಳಿದ್ದಾರೆ.
ಆದರೆ, ಎ3 ಮಠದ ಉತ್ತರಾಧಿಕಾರಿ ಮತ್ತು ಎ5 ಗಂಗಾಧರಯ್ಯ – ಇವರಿಬ್ಬರ ವಿರುದ್ಧ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರ ಲಭ್ಯವಾಗಿಲ್ಲ. ತನಿಖೆ ಜಾರಿಯಲ್ಲಿದ್ದು ಸಾಕ್ಷ್ಯಾಧಾರ ಸಂಗ್ರಹ ಮಾಡುತ್ತಿದ್ದೇವೆ. ಬಳಿಕ ಅಂತಿಮ ಚಾರ್ಜ್ಶೀಟ್ ಸಲ್ಲಿಸುತ್ತೇವೆ ಎಂದವರು ಸ್ಪಷ್ಟಪಡಿಸಿದ್ದಾರೆ.

2ನೇ ಫೊಕ್ಸೋ ಪ್ರಕರಣ ತನಿಖೆ ನಡೆದಿದೆ
ಮುರುಘಾಶ್ರೀ ವಿರುದ್ಧ 2ನೇ ಫೊಕ್ಸೋ ಪ್ರಕರಣದಲ್ಲಿ ಸಂತ್ರಸ್ತರ ಹೇಳಿಕೆ ದಾಖಲಿಸಲಾಗಿದೆ. ಸಂತ್ರಸ್ತರ ಪೋಷಕರ ಹೇಳಿಕೆಗಳನ್ನೂ ದಾಖಲಿಸಲಾಗಿದೆ. ಎ1 ಮುರುಘಾಶ್ರೀ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿದೆ. ಸಂತ್ರಸ್ತರ ಹೇಳಿಕೆ ಆಧರಿಸಿ ಕೆಲವು ಬಾಲಕಿಯರ ಹೇಳಿಕೆ ಪಡೆದಿದ್ದೇವೆ ಎಂದವರು ಹೇಳಿದ್ದಾರೆ.
15ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ !
ಮುರುಘಾಶ್ರೀಗಳಿಂದ 15ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರನ್ನು ಕರೆಸಿ ಮಾಹಿತಿ ಕೇಳಿದ್ದೇವೆ. ಸಂತ್ರಸ್ತರ ಮಾಹಿತಿ ನೀಡಿದರೆ ತನಿಖೆ ನಡೆಸುತ್ತೇವೆಂದು ತಿಳಿಸಿದ್ದೇವೆ. ಒಡನಾಡಿ ಸಂಸ್ಥೆ, ಮಕ್ಕಳ ಕಲ್ಯಾಣ ಸಮಿತಿ ಸಹಯೋಗದಲ್ಲಿ ತನಿಖೆ ನಡೆಸುವುದಾಗಿ ಮನವಿ ಮಾಡಿದ್ದೇವೆ. ಕೆಲ ಮಾಹಿತಿಯನ್ನು ಒಡನಾಡಿ ಸಂಸ್ಥೆಯವರು ನೀಡಿದ್ದಾರೆ. ಸಂತ್ರಸ್ತೆಯರ ಮಾಹಿತಿ ಸಿಕ್ಕರೆ ಖಂಡಿತ ತನಿಖೆ ನಡೆಸುತ್ತೇವೆ ಎಂದು ದುರ್ಗದ ಎಸ್ಪಿ ಹೇಳಿದರು.
ಮೊದಲ ಪ್ರಕರಣದ ಸಂತ್ರಸ್ತರು ಓರ್ವ ಬಾಲಕಿಯ ರೇಪ್ ಅಂಡ್ ಮರ್ಡರ್ ಆಗಿದೆ ಎಂದಿದ್ದರು. ಆದರೆ ಆಂಧ್ರ ವ್ಯಾಪ್ತಿಯಲ್ಲಿ ಆಕಸ್ಮಿಕ ಸಾವು ಘಟಿಸಿದ್ದಾಗಿ ತಿಳಿದಿದೆ. ರೈಲಿನಿಂದ ಬಿದ್ದು ಸಾವನ್ನಪ್ಪಿರುವ ವರದಿ ಆಗಿದೆ. ಮಠದಲ್ಲಿ ಡ್ರಗ್ಸ್ ಬಳಕೆ ಆರೋಪ ವಿಚಾರ ಪ್ರಕರಣದ ತನಿಖೆ ನಡೆಯುತ್ತಿದೆ. ವೈದ್ಯಕೀಯ ಪರೀಕ್ಷೆಯ ಕೆಲ ವರದಿ ಬರಬೇಕಿದೆ ಎಂದವರು ಹೇಳಿದರು.
In a major development, Karnataka Police on Monday stated that the charges against rape accused, jailed Lingayat seer Shivamurthy Murugha Sharanaru have been held to stand during the course of investigation.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm