ಬ್ರೇಕಿಂಗ್ ನ್ಯೂಸ್
09-11-22 01:56 pm Bangalore Correspondent ಕರ್ನಾಟಕ
ಬೆಂಗಳೂರು, ನ.9: ಪ್ರಧಾನಿ ನರೇಂದ್ರ ಮೋದಿ ನ.11ರಂದು ಬೆಂಗಳೂರಿಗೆ ಆಗಮಿಸಲಿದ್ದು ಆ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆತರುವಂತೆ ರಾಜ್ಯ ಶಿಕ್ಷಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ, ಅನುದಾನಿತ ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಿದ್ದು ತೀವ್ರ ಆಕ್ಷೇಪಕ್ಕೆ ಗುರಿಯಾಗಿದೆ. ಮೋದಿ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆತನ್ನಿ, ಇಲ್ಲದಿದ್ದರೆ ಪರಿಣಾಮ ಎದುರಿಸಿ ಎಂದು ಪರೋಕ್ಷವಾಗಿ ಬೆದರಿಸುವ ರೀತಿ ಸುತ್ತೋಲೆ ಕಳುಹಿಸಲಾಗಿದೆ.
ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಕರೆತರಬೇಕು ಎಂದು ಎಲ್ಲ ಕಾಲೇಜು ಪ್ರಾಂಶುಪಾಲರಿಗೆ ಸೂಚಿಸಿ ಹೊರಡಿಸಿದ್ದ ಶಿಕ್ಷಣ ಇಲಾಖೆಯ ಸುತ್ತೋಲೆ ವಿವಾದಕ್ಕೆ ಕಾರಣವಾಗಿದೆ. ನ.11ರಂದು ಪ್ರಧಾನ ಮಂತ್ರಿಯವರು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರಲು ನ. 2ರಂದು ನಡೆದ ಪ್ರಾಂಶುಪಾಲರ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿದ್ದು ಅದರಲ್ಲಿ ತೀರ್ಮಾನಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಸರ್ಕಾರಿ/ ಅನುದಾನಿತ/ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಕಾಲೇಜಿನಿಂದ ನಿಗದಿಪಡಿಸಿದಷ್ಟು ವಿದ್ಯಾರ್ಥಿಗಳನ್ನು ಕರೆತರಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ಇಂಥ ಕಾಲೇಜಿನಿಂದ ಇಷ್ಟೇ ವಿದ್ಯಾರ್ಥಿಗಳನ್ನೂ ಕರೆ ತರಬೇಕು ಎಂದು ಪಟ್ಟಿಯನ್ನೂ ನೀಡಲಾಗಿದೆ.
ಆಯಾ ಕಾಲೇಜುಗಳಿಗೆ ನೇಮಕ ಮಾಡಿರುವ ಬಸ್ನ ನೋಡಲ್ ಅಧಿಕಾರಿಗಳು ಹಾಗೂ ಪ್ರಾಂಶುಪಾಲರು ನಿಗದಿತ ಸಮಯಕ್ಕೆ ಸರಿಯಾಗಿ ಕಾಲೇಜಿನಿಂದ ಹೊರಡುವ ಬಸ್ನಲ್ಲಿ ಕಾರ್ಯಕ್ರಮಕ್ಕೆ ಕ್ಷೇಮವಾಗಿ ಕರೆತರಲು ಹಾಗೂ ಕಾರ್ಯಕ್ರಮ ಮುಗಿದ ನಂತರ ವಾಪಸ್ ಕರೆದುಕೊಂಡು ಹೋಗಲು ಸೂಚಿಸಿದೆ. ತಪ್ಪಿದ್ದಲ್ಲಿ ಮುಂದಿನ ಆಗು ಹೋಗುಗಳಿಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರೇ ಜವಾಬ್ದಾರರಾಗಿರುತ್ತಾರೆ ಎಂದೂ ಎಚ್ಚರಿಕೆ ನೀಡಿ ಪದವಿಪೂರ್ವ ಶಿಕ್ಷಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
Colleges across Bangalore issued circulars to get students to PM Modi program in Bangalore, sparks controversy. Or else the principal of the college should face the consequences says the education department circular to colleges.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am