ಬ್ರೇಕಿಂಗ್ ನ್ಯೂಸ್
09-11-22 01:56 pm Bangalore Correspondent ಕರ್ನಾಟಕ
ಬೆಂಗಳೂರು, ನ.9: ಪ್ರಧಾನಿ ನರೇಂದ್ರ ಮೋದಿ ನ.11ರಂದು ಬೆಂಗಳೂರಿಗೆ ಆಗಮಿಸಲಿದ್ದು ಆ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆತರುವಂತೆ ರಾಜ್ಯ ಶಿಕ್ಷಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ, ಅನುದಾನಿತ ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಿದ್ದು ತೀವ್ರ ಆಕ್ಷೇಪಕ್ಕೆ ಗುರಿಯಾಗಿದೆ. ಮೋದಿ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆತನ್ನಿ, ಇಲ್ಲದಿದ್ದರೆ ಪರಿಣಾಮ ಎದುರಿಸಿ ಎಂದು ಪರೋಕ್ಷವಾಗಿ ಬೆದರಿಸುವ ರೀತಿ ಸುತ್ತೋಲೆ ಕಳುಹಿಸಲಾಗಿದೆ.
ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಕರೆತರಬೇಕು ಎಂದು ಎಲ್ಲ ಕಾಲೇಜು ಪ್ರಾಂಶುಪಾಲರಿಗೆ ಸೂಚಿಸಿ ಹೊರಡಿಸಿದ್ದ ಶಿಕ್ಷಣ ಇಲಾಖೆಯ ಸುತ್ತೋಲೆ ವಿವಾದಕ್ಕೆ ಕಾರಣವಾಗಿದೆ. ನ.11ರಂದು ಪ್ರಧಾನ ಮಂತ್ರಿಯವರು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರಲು ನ. 2ರಂದು ನಡೆದ ಪ್ರಾಂಶುಪಾಲರ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿದ್ದು ಅದರಲ್ಲಿ ತೀರ್ಮಾನಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಸರ್ಕಾರಿ/ ಅನುದಾನಿತ/ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಕಾಲೇಜಿನಿಂದ ನಿಗದಿಪಡಿಸಿದಷ್ಟು ವಿದ್ಯಾರ್ಥಿಗಳನ್ನು ಕರೆತರಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ಇಂಥ ಕಾಲೇಜಿನಿಂದ ಇಷ್ಟೇ ವಿದ್ಯಾರ್ಥಿಗಳನ್ನೂ ಕರೆ ತರಬೇಕು ಎಂದು ಪಟ್ಟಿಯನ್ನೂ ನೀಡಲಾಗಿದೆ.
ಆಯಾ ಕಾಲೇಜುಗಳಿಗೆ ನೇಮಕ ಮಾಡಿರುವ ಬಸ್ನ ನೋಡಲ್ ಅಧಿಕಾರಿಗಳು ಹಾಗೂ ಪ್ರಾಂಶುಪಾಲರು ನಿಗದಿತ ಸಮಯಕ್ಕೆ ಸರಿಯಾಗಿ ಕಾಲೇಜಿನಿಂದ ಹೊರಡುವ ಬಸ್ನಲ್ಲಿ ಕಾರ್ಯಕ್ರಮಕ್ಕೆ ಕ್ಷೇಮವಾಗಿ ಕರೆತರಲು ಹಾಗೂ ಕಾರ್ಯಕ್ರಮ ಮುಗಿದ ನಂತರ ವಾಪಸ್ ಕರೆದುಕೊಂಡು ಹೋಗಲು ಸೂಚಿಸಿದೆ. ತಪ್ಪಿದ್ದಲ್ಲಿ ಮುಂದಿನ ಆಗು ಹೋಗುಗಳಿಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರೇ ಜವಾಬ್ದಾರರಾಗಿರುತ್ತಾರೆ ಎಂದೂ ಎಚ್ಚರಿಕೆ ನೀಡಿ ಪದವಿಪೂರ್ವ ಶಿಕ್ಷಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
Colleges across Bangalore issued circulars to get students to PM Modi program in Bangalore, sparks controversy. Or else the principal of the college should face the consequences says the education department circular to colleges.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm