ಬ್ರೇಕಿಂಗ್ ನ್ಯೂಸ್
09-11-22 06:32 pm Bangalore Correspondent ಕರ್ನಾಟಕ
ಬೆಂಗಳೂರು, ನ.9 : ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಪ್ತರಾಗಿದ್ದ ಮಾಜಿ ಶಾಸಕ ಯು.ಬಿ ಬಣಕಾರ್ ಅವರು ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಮಾಜಿ ಶಾಸಕ ಯು.ಬಿ ಬಣಕಾರ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅದೇ ರೀತಿ ಹಾಲಿ ಇದ್ದ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನ, ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನಕ್ಕೂ ಯು.ಬಿ ಬಣಕಾರ್ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯದ ರಾಜಕೀಯ ಬೆಳವಣಿಗೆಗೆ ಬೇಸತ್ತು ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಪ್ತರಲ್ಲಿ ಒಬ್ಬರಾಗಿದ್ದ ಯು.ಬಿ ಬಣಕಾರ್ ಹಾವೇರಿ, ಬಾಗಲಕೋಟ ಭಾಗದಲ್ಲಿ ವೀರಶೈವ- ಲಿಂಗಾಯತರಲ್ಲಿ ಪ್ರಮುಖ ನಾಯಕರಾಗಿದ್ದರು. ಇದೀಗ ದಿಢೀರ್ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನೀಡಿದ್ದು ರಾಜ್ಯ ಬಿಜೆಪಿಗೆ ಶಾಕ್ ನೀಡಿದ್ದಾರೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ಹಾಗೂ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದು ಪಕ್ಷ ಮತ್ತು ಸರ್ಕಾರದ ಬಗ್ಗೆ ಬೇಸತ್ತು ಈ ನಡೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಹಾವೇರಿಯ ಹಿರೇಕೆರೂರು ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇತ್ತೀಚೆಗೆ ಆ ಭಾಗದಲ್ಲಿ ನಡೆದಿದ್ದ ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿಯೂ ಭಾಗವಹಿಸಿದ್ದರು. ಇದೀಗ ದಿಢೀರ್ ಆಗಿ ಬಿಜೆಪಿಗೆ ಗುಡ್ ಬೈ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗಲ್ಲವೆಂದು ಬೇರೆ ಪಕ್ಷದತ್ತ ಮುಖ ಮಾಡಿದ್ದಾರೆಯೇ ಎನ್ನುವ ವದಂತಿ ಹರಡಿದೆ.
Ex MLA U B Banakar resigns from BJP party, shocks party.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm