ಬ್ರೇಕಿಂಗ್ ನ್ಯೂಸ್
10-11-22 07:15 pm Bangalore Correspondent ಕರ್ನಾಟಕ
ಬೆಂಗಳೂರು, ನ.10: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜನವರಿ ಒಂದರಿಂದಲೇ ಕುಚಲಕ್ಕಿ ಪಡಿತರ ಇಲಾಖೆಯಿಂದ ಪೂರೈಕೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಸುದ್ದಿಗಾರರಿಗೆ ಮಾಹಿತಿ ನೀಡಿದ ಸಚಿವರು, ಈ ಮೂರು ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಿಸಲು ಒಟ್ಟು 13 ಲಕ್ಷ ಕ್ವಿಂಟಾಲ್ ಅಕ್ಕಿಯ ಅಗತ್ಯವಿದೆ ಎಂದು ಹೇಳಿದರು. ಇದಕ್ಕಾಗಿ ಡಿಸೆಂಬರ್ 1ರಿಂದಲೇ ಕರಾವಳಿ ಜಿಲ್ಲೆಗಳಲ್ಲಿ ಭತ್ತ ಖರೀದಿಗೆ ತೊಡಗಲಾಗುವುದು. ಸ್ಥಳೀಯವಾಗಿ ಕೆಂಪಕ್ಕಿ ಭತ್ತ ಖರೀದಿಸಿ ಸಂಸ್ಕರಣೆ ಮಾಡಲಾಗುವುದು. ಇದಕ್ಕಾಗಿ ಭತ್ತ ಖರೀದಿ ಕೇಂದ್ರ ತೆರೆಯಲಿದ್ದು, 2540 ರೂ. ಬೆಂಬಲ ಬೆಲೆಗೆ ಭತ್ತ ಖರೀದಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರತಿ ಕುಟುಂಬಕ್ಕೆ ಐದು ಕಿಲೋ ಕುಚಲಕ್ಕಿ ಪಡಿತರ ಮೂಲಕ ವಿತರಿಸಲಾಗುವುದು. ನಮ್ಮಲ್ಲಿ ಸಿಗುವ ಕುಚಲಕ್ಕಿ ಪಡಿತರ ಇಲಾಖೆಯಿಂದ ನೀಡುವುದಕ್ಕೆ ಸಾಕಾಗದು. ಅದಕ್ಕಾಗಿ ಬೇರೆ ರಾಜ್ಯಗಳಿಂದಲೂ ಕುಚಲಕ್ಕಿ ಖರೀದಿ ಮಾಡಲಾಗುವುದು ಎಂದರು. ನಾವು ಊಟ ಮಾಡುವ ಅಕ್ಕಿಯನ್ನು ಪಡಿತರದಲ್ಲಿ ನೀಡಬೇಕೆಂದು ಕರಾವಳಿ ಜಿಲ್ಲೆಗಳ ಜನರು ಬೇಡಿಕೆ ಇರಿಸಿದ್ದರು. ನಾನಾ ಕಾರಣಗಳಿಂದ ಅಕ್ಕಿ ಪೂರೈಕೆ ಸಾಧ್ಯವಾಗಿರಲಿಲ್ಲ. ಮುಖ್ಯಮಂತ್ರಿ ಕುಚಲಕ್ಕಿ ಬೇಡಿಕೆಗೆ ಒಪ್ಪಿಗೆ ನೀಡಿದ್ದು, ಕೂಡಲೇ ಭತ್ತ ಖರೀದಿಯನ್ನು ಮಾಡಲಾಗುವುದು. ಬೆಂಬಲ ಬೆಲೆ ಕೊಟ್ಟು ಭತ್ತ ಖರೀದಿಸಿ, ಸರಕಾರದ ಕಡೆಯಿಂದಲೇ ಸಂಸ್ಕರಿಸಿ ಪಡಿತರ ನೀಡಲಾಗುವುದು ಎಂದು ಹೇಳಿದರು.
ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ 13 ಲಕ್ಷ ಕ್ವಿಂಟಾಲ್ ಭತ್ತ ಖರೀದಿಸುವ ಗುರಿಯಿದ್ದು, ಅದರಲ್ಲಿ 8.50 ಲಕ್ಷ ಕ್ವಿಂಟಾಲ್ ಅಕ್ಕಿ ಸಂಗ್ರಹದ ಅಂದಾಜಿದೆ. ಕೇಂದ್ರ ಸರಕಾರ ಕೊಡುವ ಬೆಂಬಲ ಬೆಲೆಗೆ ಭತ್ತ ಸಿಗದೇ ಇರುವುದರಿಂದ ಪ್ರತೀ ಕ್ವಿಂಟಾಲ್ ಗೆ 500 ರೂ. ಹೆಚ್ಚುವರಿ ಕೊಟ್ಟು ರಾಜ್ಯ ಸರಕಾರದಿಂದ ಖರೀದಿಸಲಾಗುವುದು. ಇದಕ್ಕೆ 132 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಈ ಕುರಿತು ಆಹಾರ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
Boiled rice supply in Karvalai districts from Jan 1st 2023, 2450 per quintal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm