ಬ್ರೇಕಿಂಗ್ ನ್ಯೂಸ್
11-11-22 02:51 pm HK News Desk ಕರ್ನಾಟಕ
ಹುಬ್ಬಳ್ಳಿ, ನ.11 : ಕಾಂಗ್ರೆಸ್ ಶಾಸಕ ತನ್ವೀರ್ ಶೇಠ್ ಹೇಳಿಕೆಯಂತೆ ಮೈಸೂರಿನಲ್ಲಿ 100 ಅಡಿ ಎತ್ತರದ ಟಿಪ್ಪು ಪ್ರತಿಮೆ ಸ್ಥಾಪಿಸಿದ್ದೇ ಆದರೆ, ಬಾಬರಿ ಮಸೀದಿಯಂತೆ ಅದನ್ನು ಧ್ವಂಸ ಮಾಡಲಾಗುವುದು ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ಈದ್ಗಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕನಕದಾಸ ಜಯಂತಿಯಲ್ಲಿ ಪಾಲ್ಗೊಂಡು, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಟಿಪ್ಪು ಕರ್ನಾಟಕಕ್ಕೇ ಕಳಂಕ. ಮೈಸೂರು ಮಹಾರಾಜರಿಗೆ ಅವಮಾನವಾಗುವಂತೆ ಅಲ್ಲಿಯೇ ಆಡಳಿತ ನಡೆಸಿದ್ದ. ಒಂದು ವೇಳೆ ಅವನ ಮೂರ್ತಿ ಪ್ರತಿಷ್ಠಾಪಿಸಿದ್ದೇ ಆದರೆ, ಅದನ್ನು ಒಡೆದು ಹಾಕುತ್ತೇವೆ. ಅವನ ಮೂರ್ತಿ ಪ್ರತಿಷ್ಠಾಪಿಸುವಂಥ ಕೆಟ್ಟ ಕೆಲಸಕ್ಕೆ ಯಾರೂ ಕೈ ಹಾಕಬಾರದು. ಬೇಕಾದರೆ, ಸಂತ ಶಿಶುನಾಳ ಷರೀಫ್, ಅಬ್ದುಲ್ ಕಲಾಂ ಅಂಥವರ ಮೂರ್ತಿ ಪ್ರತಿಷ್ಠಾಪಿಸಿ ಎಂದು ಸಲಹೆ ನೀಡಿದರು.
![]()
ಸಾವಿರಾರು ಹಿಂದುಗಳ ದೇವಾಲಯಗಳನ್ನು ಧ್ವಂಸ ಮಾಡಿದ, ಹಿಂದುಗಳನ್ನು ಇಸ್ಲಾಂಗೆ ಮತಾಂತರ ಮಾಡಿದ ಟಿಪ್ಪುವಿನ ಜಯಂತಿಗೆ ಈದ್ಗಾ ಮೈದಾನದಲ್ಲಿ ಆಚರಿಸಲು ಅವಕಾಶ ಕೊಟ್ಟಿದ್ದು ಅಕ್ಷಮ್ಯ ಅಪರಾಧ. ಟಿಪ್ಪು ಜಯಂತಿ ಆಚರಿಸಿ ಮೈದಾನವನ್ನು ಅಪವಿತ್ರಗೊಳಿಸಲಾಗಿತ್ತು. ಇದೀಗ ನಾವು ಗೋಮೂತ್ರದಿಂದ ಶುದ್ಧ ಮಾಡಿ, ಕನಕ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಿದ್ದೇವೆ ಎಂದರು.
ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಿಸಬೇಕು ಎನ್ನುವುದು ವಿಫಲವಾಗಿದೆ. ಆದರೆ, ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಆಚರಿಸಲು ಅನುಮತಿ ನೀಡಬೇಕೆಂದು ಮುಂದಾಗಿದ್ದ ಸಂಘಟನೆಯಲ್ಲಿಯೇ ಒಡಕು ಉಂಟಾಗಿತ್ತು. ಅವರಲ್ಲಿದ್ದ ಬಹುತೇಕರು ಬಂದಿಲ್ಲ, ಮುಸ್ಲಿಮರು ಸಹ ಬಂದಿಲ್ಲ. ಒಟ್ಟಾರೆ ಟಿಪ್ಪು ಜಯಂತಿ ಆಚರಣೆ ವೈಫಲ್ಯ ಕಂಡಿದೆ ಎಂದರು.
ಹುಬ್ಬಳ್ಳಿ ನಗರಪಾಲಿಕೆಯ ವಿರೋಧ ಪಕ್ಷದ ನಾಯಕರು ಪಾಲಿಕೆ ಕಟ್ಟಡದಲ್ಲಿ ಟಿಪ್ಪು ಜಯಂತಿ ಆಚರಿಸಿದ್ದು ಸರಿಯಲ್ಲ. ಸರ್ಕಾರಿ ಕಚೇರಿಯಲ್ಲಿ ಜಯಂತಿ ಆಚರಿಸಿರುವ ಅವರ ಮೇಲೆ ಕ್ರಮ ಕೈಗೊಂಡು, ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ನಾವೇ ಪೊಲೀಸ್ ದೂರು ನೀಡುತ್ತೇವೆ ಎಂದರು.
We will destroy tippus statue in case the government agrees to establish it slams Muthalik.
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm