ಬ್ರೇಕಿಂಗ್ ನ್ಯೂಸ್
11-11-22 02:51 pm HK News Desk ಕರ್ನಾಟಕ
ಹುಬ್ಬಳ್ಳಿ, ನ.11 : ಕಾಂಗ್ರೆಸ್ ಶಾಸಕ ತನ್ವೀರ್ ಶೇಠ್ ಹೇಳಿಕೆಯಂತೆ ಮೈಸೂರಿನಲ್ಲಿ 100 ಅಡಿ ಎತ್ತರದ ಟಿಪ್ಪು ಪ್ರತಿಮೆ ಸ್ಥಾಪಿಸಿದ್ದೇ ಆದರೆ, ಬಾಬರಿ ಮಸೀದಿಯಂತೆ ಅದನ್ನು ಧ್ವಂಸ ಮಾಡಲಾಗುವುದು ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ಈದ್ಗಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕನಕದಾಸ ಜಯಂತಿಯಲ್ಲಿ ಪಾಲ್ಗೊಂಡು, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಟಿಪ್ಪು ಕರ್ನಾಟಕಕ್ಕೇ ಕಳಂಕ. ಮೈಸೂರು ಮಹಾರಾಜರಿಗೆ ಅವಮಾನವಾಗುವಂತೆ ಅಲ್ಲಿಯೇ ಆಡಳಿತ ನಡೆಸಿದ್ದ. ಒಂದು ವೇಳೆ ಅವನ ಮೂರ್ತಿ ಪ್ರತಿಷ್ಠಾಪಿಸಿದ್ದೇ ಆದರೆ, ಅದನ್ನು ಒಡೆದು ಹಾಕುತ್ತೇವೆ. ಅವನ ಮೂರ್ತಿ ಪ್ರತಿಷ್ಠಾಪಿಸುವಂಥ ಕೆಟ್ಟ ಕೆಲಸಕ್ಕೆ ಯಾರೂ ಕೈ ಹಾಕಬಾರದು. ಬೇಕಾದರೆ, ಸಂತ ಶಿಶುನಾಳ ಷರೀಫ್, ಅಬ್ದುಲ್ ಕಲಾಂ ಅಂಥವರ ಮೂರ್ತಿ ಪ್ರತಿಷ್ಠಾಪಿಸಿ ಎಂದು ಸಲಹೆ ನೀಡಿದರು.
![]()
ಸಾವಿರಾರು ಹಿಂದುಗಳ ದೇವಾಲಯಗಳನ್ನು ಧ್ವಂಸ ಮಾಡಿದ, ಹಿಂದುಗಳನ್ನು ಇಸ್ಲಾಂಗೆ ಮತಾಂತರ ಮಾಡಿದ ಟಿಪ್ಪುವಿನ ಜಯಂತಿಗೆ ಈದ್ಗಾ ಮೈದಾನದಲ್ಲಿ ಆಚರಿಸಲು ಅವಕಾಶ ಕೊಟ್ಟಿದ್ದು ಅಕ್ಷಮ್ಯ ಅಪರಾಧ. ಟಿಪ್ಪು ಜಯಂತಿ ಆಚರಿಸಿ ಮೈದಾನವನ್ನು ಅಪವಿತ್ರಗೊಳಿಸಲಾಗಿತ್ತು. ಇದೀಗ ನಾವು ಗೋಮೂತ್ರದಿಂದ ಶುದ್ಧ ಮಾಡಿ, ಕನಕ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಿದ್ದೇವೆ ಎಂದರು.
ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಿಸಬೇಕು ಎನ್ನುವುದು ವಿಫಲವಾಗಿದೆ. ಆದರೆ, ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಆಚರಿಸಲು ಅನುಮತಿ ನೀಡಬೇಕೆಂದು ಮುಂದಾಗಿದ್ದ ಸಂಘಟನೆಯಲ್ಲಿಯೇ ಒಡಕು ಉಂಟಾಗಿತ್ತು. ಅವರಲ್ಲಿದ್ದ ಬಹುತೇಕರು ಬಂದಿಲ್ಲ, ಮುಸ್ಲಿಮರು ಸಹ ಬಂದಿಲ್ಲ. ಒಟ್ಟಾರೆ ಟಿಪ್ಪು ಜಯಂತಿ ಆಚರಣೆ ವೈಫಲ್ಯ ಕಂಡಿದೆ ಎಂದರು.
ಹುಬ್ಬಳ್ಳಿ ನಗರಪಾಲಿಕೆಯ ವಿರೋಧ ಪಕ್ಷದ ನಾಯಕರು ಪಾಲಿಕೆ ಕಟ್ಟಡದಲ್ಲಿ ಟಿಪ್ಪು ಜಯಂತಿ ಆಚರಿಸಿದ್ದು ಸರಿಯಲ್ಲ. ಸರ್ಕಾರಿ ಕಚೇರಿಯಲ್ಲಿ ಜಯಂತಿ ಆಚರಿಸಿರುವ ಅವರ ಮೇಲೆ ಕ್ರಮ ಕೈಗೊಂಡು, ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ನಾವೇ ಪೊಲೀಸ್ ದೂರು ನೀಡುತ್ತೇವೆ ಎಂದರು.
We will destroy tippus statue in case the government agrees to establish it slams Muthalik.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm