ಬ್ರೇಕಿಂಗ್ ನ್ಯೂಸ್
11-11-22 02:51 pm HK News Desk ಕರ್ನಾಟಕ
ಹುಬ್ಬಳ್ಳಿ, ನ.11 : ಕಾಂಗ್ರೆಸ್ ಶಾಸಕ ತನ್ವೀರ್ ಶೇಠ್ ಹೇಳಿಕೆಯಂತೆ ಮೈಸೂರಿನಲ್ಲಿ 100 ಅಡಿ ಎತ್ತರದ ಟಿಪ್ಪು ಪ್ರತಿಮೆ ಸ್ಥಾಪಿಸಿದ್ದೇ ಆದರೆ, ಬಾಬರಿ ಮಸೀದಿಯಂತೆ ಅದನ್ನು ಧ್ವಂಸ ಮಾಡಲಾಗುವುದು ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ಈದ್ಗಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕನಕದಾಸ ಜಯಂತಿಯಲ್ಲಿ ಪಾಲ್ಗೊಂಡು, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಟಿಪ್ಪು ಕರ್ನಾಟಕಕ್ಕೇ ಕಳಂಕ. ಮೈಸೂರು ಮಹಾರಾಜರಿಗೆ ಅವಮಾನವಾಗುವಂತೆ ಅಲ್ಲಿಯೇ ಆಡಳಿತ ನಡೆಸಿದ್ದ. ಒಂದು ವೇಳೆ ಅವನ ಮೂರ್ತಿ ಪ್ರತಿಷ್ಠಾಪಿಸಿದ್ದೇ ಆದರೆ, ಅದನ್ನು ಒಡೆದು ಹಾಕುತ್ತೇವೆ. ಅವನ ಮೂರ್ತಿ ಪ್ರತಿಷ್ಠಾಪಿಸುವಂಥ ಕೆಟ್ಟ ಕೆಲಸಕ್ಕೆ ಯಾರೂ ಕೈ ಹಾಕಬಾರದು. ಬೇಕಾದರೆ, ಸಂತ ಶಿಶುನಾಳ ಷರೀಫ್, ಅಬ್ದುಲ್ ಕಲಾಂ ಅಂಥವರ ಮೂರ್ತಿ ಪ್ರತಿಷ್ಠಾಪಿಸಿ ಎಂದು ಸಲಹೆ ನೀಡಿದರು.
![]()
ಸಾವಿರಾರು ಹಿಂದುಗಳ ದೇವಾಲಯಗಳನ್ನು ಧ್ವಂಸ ಮಾಡಿದ, ಹಿಂದುಗಳನ್ನು ಇಸ್ಲಾಂಗೆ ಮತಾಂತರ ಮಾಡಿದ ಟಿಪ್ಪುವಿನ ಜಯಂತಿಗೆ ಈದ್ಗಾ ಮೈದಾನದಲ್ಲಿ ಆಚರಿಸಲು ಅವಕಾಶ ಕೊಟ್ಟಿದ್ದು ಅಕ್ಷಮ್ಯ ಅಪರಾಧ. ಟಿಪ್ಪು ಜಯಂತಿ ಆಚರಿಸಿ ಮೈದಾನವನ್ನು ಅಪವಿತ್ರಗೊಳಿಸಲಾಗಿತ್ತು. ಇದೀಗ ನಾವು ಗೋಮೂತ್ರದಿಂದ ಶುದ್ಧ ಮಾಡಿ, ಕನಕ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಿದ್ದೇವೆ ಎಂದರು.
ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಿಸಬೇಕು ಎನ್ನುವುದು ವಿಫಲವಾಗಿದೆ. ಆದರೆ, ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಆಚರಿಸಲು ಅನುಮತಿ ನೀಡಬೇಕೆಂದು ಮುಂದಾಗಿದ್ದ ಸಂಘಟನೆಯಲ್ಲಿಯೇ ಒಡಕು ಉಂಟಾಗಿತ್ತು. ಅವರಲ್ಲಿದ್ದ ಬಹುತೇಕರು ಬಂದಿಲ್ಲ, ಮುಸ್ಲಿಮರು ಸಹ ಬಂದಿಲ್ಲ. ಒಟ್ಟಾರೆ ಟಿಪ್ಪು ಜಯಂತಿ ಆಚರಣೆ ವೈಫಲ್ಯ ಕಂಡಿದೆ ಎಂದರು.
ಹುಬ್ಬಳ್ಳಿ ನಗರಪಾಲಿಕೆಯ ವಿರೋಧ ಪಕ್ಷದ ನಾಯಕರು ಪಾಲಿಕೆ ಕಟ್ಟಡದಲ್ಲಿ ಟಿಪ್ಪು ಜಯಂತಿ ಆಚರಿಸಿದ್ದು ಸರಿಯಲ್ಲ. ಸರ್ಕಾರಿ ಕಚೇರಿಯಲ್ಲಿ ಜಯಂತಿ ಆಚರಿಸಿರುವ ಅವರ ಮೇಲೆ ಕ್ರಮ ಕೈಗೊಂಡು, ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ನಾವೇ ಪೊಲೀಸ್ ದೂರು ನೀಡುತ್ತೇವೆ ಎಂದರು.
We will destroy tippus statue in case the government agrees to establish it slams Muthalik.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 03:25 pm
HK News Staffer
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am