ಬ್ರೇಕಿಂಗ್ ನ್ಯೂಸ್
12-11-22 10:44 pm Bangalore Correspondent ಕರ್ನಾಟಕ
ಬೆಂಗಳೂರು, ನ.12: ವಿವಾದಕ್ಕೆ ಒಳಗಾಗಿದ್ದ ಕಾಂತಾರಂ ಚಿತ್ರದ ವರಾಹ ರೂಪಂ ಹಾಡನ್ನು ಯೂಟ್ಯೂಬ್ ನಿಂದ ತೆಗೆದು ಹಾಕಲಾಗಿದೆ. ಕೇರಳದ ಮ್ಯೂಸಿಕ್ ಬ್ಯಾಂಡ್ ತೈಕ್ಕುಡಂ ಬ್ರಿಡ್ಜ್ ತಮ್ಮ ಹಾಡಿನ ಟ್ಯೂನ್ ಕಾಪಿ ಮಾಡಲಾಗಿದೆ ಎಂದು ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್ ತಡೆಯಾಜ್ಞೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಹಾಡನ್ನ ತೆರವು ಮಾಡಲಾಗಿದೆ.
ಹಾಡು ಜಗತ್ತಿನಾದ್ಯಂತ ವೈರಲ್ ಆಗಿದ್ದ ಯೂಟ್ಯೂಬ್ ನಿಂದ ಡಿಲೀಟ್ ಮಾಡಲಾಗಿದೆ. ನವೆಂಬರ್ 11ರಿಂದ ಹಲವಾರು ಸೋಷಿಯಲ್ ಮೀಡಿಯಾದ ಅಕೌಂಟ್ಗಳಿಂದ ಈ ಹಾಡು ಡಿಲೀಟ್ ಆಗಿದ್ದು ಕೋರ್ಟ್ ಆದೇಶಕ್ಕೆ ಕಾಂತಾರ ತಂಡ ಈ ಕ್ರಮ ಕೈಗೊಂಡಿದೆ ಎನ್ನಲಾಗುತ್ತಿದೆ.
ಮ್ಯೂಸಿಕ್ ಆ್ಯಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಕಾಪಿ ರೈಟ್ ಎನ್ನುವುದು ಸೂಕ್ಷ್ಮ ಸಂಗತಿ. ಹಾಡು, ಕಂಟೆಂಟ್ಗಳು ಕಾಪಿ ಆದಾಗ ಅದರ ಬಗ್ಗೆ ಎಚ್ಚರಿಕೆಯನ್ನೂ ನೀಡಲಾಗುತ್ತದೆ. ಇದೇ ರೀತಿ ವರಾಹರೂಪಂ ಹಾಡನ್ನು ಪ್ಲೇ ಮಾಡದಂತೆ ಕೋಜಿಕ್ಕೋಡ್ ಕೋರ್ಟ್ ಆದೇಶ ಮಾಡಿತ್ತು.
ಕಾಂತಾರ ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ 'ಹೊಂಬಾಳೆ ಫಿಲ್ಮ್ಸ್ ತಂಡವು ಯೂಟ್ಯೂಬ್ ಚಾನೆಲ್ಗಳಲ್ಲಿ ವರಾಹ ರೂಪಂ ಸಾಂಗ್ ಅಪ್ಲೋಡ್ ಮಾಡಲಾಗಿತ್ತು. ಈಗ 'ಹೊಂಬಾಳೆ ಫಿಲ್ಮ್ಸ್' ಯೂಟ್ಯೂಬ್ ಚಾನೆಲ್ನಿಂದ ಹಾಡನ್ನು ಡಿಲೀಟ್ ಮಾಡಲಾಗಿದೆ. ಮ್ಯೂಸಿಕ್ ಆ್ಯಪ್ ಜಿಯೊ ಸಾವನ್ನಲ್ಲಿಯೂ ಈ ಹಾಡು ಕೇಳಲು ಲಭ್ಯವಿಲ್ಲ.
ಟ್ಯೂನ್ ಕದ್ದಿಲ್ಲ ಎಂದಿದ್ದ ಅಜನೀಶ್
ಅಜನೀಶ್ ಅವರು ಹಾಡಿನ ಆರೋಪದ ಬಗ್ಗೆ ಪ್ರತಿಕ್ರಿಯಿಸಿ ಈ ಹಾಡನ್ನು ಕಾಪಿ ಮಾಡಿಲ್ಲ ಎಂದು ಹೇಳಿದ್ದರು. ಈ ರಾಗಗಳು ಭಿನ್ನವಾಗಿದೆ, ಆದರೆ ಅದರಿಂದ ಪ್ರೇರಣೆ ಪಡೆದಿದ್ದೆವು ಎಂದು ಹೇಳಿದ್ದರು. ಕೇರಳದ ಮ್ಯೂಸಿಕ್ ಬ್ಯಾಂಡ್ ತೈಕ್ಕುಡಂ ಬ್ರಿಡ್ಜ್ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳನ್ನು ಹೊಂದಿದ್ದು ಪ್ರಸಿದ್ಧಿ ಪಡೆದಿವೆ. ಇದೇ ತಂಡ ನವರಸಂ ಎನ್ನುವ ಹಾಡನ್ನು ತಯಾರಿಸಿತ್ತು. ಈ ಹಾಡು ವರಾಹ ರೂಪಂ ಸಾಂಗ್ನ ಅದೇ ಟ್ಯೂನ್ ಹೋಲುತ್ತಿದ್ದು ಈ ಕಾರಣದಿಂದ ವಿವಾದ ತಲೆದೋರಿದೆ.
Rishabh Shetty starrer and director 'Kantara', which has created a new atmosphere not only in Karnataka but also in the country and abroad, has now again come to the fore as a matter of plagiarism.Rishabh Shetty starrer and director 'Kantara', which has created a new atmosphere not only in Karnataka but also abroad for the past few days, has now again come to the fore as a matter of plagiarism.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm