ಬ್ರೇಕಿಂಗ್ ನ್ಯೂಸ್
13-10-20 12:55 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 13: ಆರ್.ಆರ್. ನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ತುದಿಗಾಲಲ್ಲಿ ನಿಂತಿದ್ದ ಮಾಜಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ. ನಕಲಿ ಮತದಾನ ಪ್ರಕರಣದಲ್ಲಿ ಪ್ರತಿವಾದಿ ಬಿಜೆಪಿಯ ಅಭ್ಯರ್ಥಿ ಮುನಿರಾಜು ಗೌಡ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದ್ದು, ಮುನಿರತ್ನ ಮತ್ತೆ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ.
2018ರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದ ಕಾಂಗ್ರೆಸಿನ ಮುನಿರತ್ನ ವಿರುದ್ಧ ಬಿಜೆಪಿ ಅಭ್ಯರ್ಥಿ ಮುನಿರಾಜು, ಚುನಾವಣಾ ಆಯೋಗ ಮತ್ತು ಸುಪ್ರೀಂ ಕೋರ್ಟಿಗೆ ದೂರು ಸಲ್ಲಿಸಿದ್ದರು. ಮುನಿರತ್ನ 25 ಸಾವಿರ ನಕಲಿ ಮತಗಳ ಮೂಲಕ ಗೆದ್ದಿದ್ದಾಗಿ ಆರೋಪಿಸಿ ಬಿಜೆಪಿ ದಾವೆ ಹೂಡಿತ್ತು. ಈ ನಡುವೆ, 2019ರ ಮಾರ್ಚ್ ವೇಳೆಗೆ ಮುನಿರತ್ನ ಮತ್ತು ಇತರೇ 15 ಮಂದಿ ಕಾಂಗ್ರೆಸ್, ಜೆಡಿಎಸ್ ಶಾಸಕರ ಜೊತೆಗೆ ಬಿಜೆಪಿ ಬೆಂಬಲಿಸಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ವಿಧಾನಸಭೆ ಸ್ಪೀಕರ್ ಅವರನ್ನು ಅನರ್ಹಗೊಳಿಸಿದ್ದರು. ಅನರ್ಹ ಪ್ರಕರಣ ಮತ್ತೆ ಕೋರ್ಟ್ ಮೆಟ್ಟಿಲೇರಿ, ಇತ್ಯರ್ಥಗೊಂಡು ಇತರೇ ಶಾಸಕರು ಮತ್ತೆ ಚುನಾವಣೆ ಸ್ಪರ್ಧಿಸಿ ಗೆದ್ದು ಸಚಿವರಾಗಿದ್ದೂ ಆಗಿತ್ತು. ಆದರೆ ಮುನಿರತ್ನ ವಿರುದ್ಧ ಬಿಜೆಪಿಯೇ ಪ್ರಕರಣ ದಾಖಲಿಸಿದ್ದರಿಂದ ಆರ್.ಆರ್. ನಗರದ ಉಪ ಚುನಾವಣೆ ಕಗ್ಗಂಟಾಗಿತ್ತು.
ಇದೀಗ ಚುನಾವಣಾ ಆಯೋಗ ಆರ್.ಆರ್. ನಗರದ ಉಪ ಚುನಾವಣೆಗೆ ನ.3ರ ದಿನಾಂಕ ಘೋಷಿಸಿದ್ದರೂ, ಕೋರ್ಟ್ ತಗಾದೆ ಮುನಿರತ್ನ ಅವರನ್ನು ಕಂಗಾಲು ಮಾಡಿತ್ತು. ಇದೀಗ ಬಿಜೆಪಿಯೇ ಮುನಿರಾಜು ಗೌಡ ಅರ್ಜಿ ವಜಾ ಆಗುವಂತೆ ನೋಡಿಕೊಂಡಿದ್ದು, ಮುನಿರತ್ನ ಸ್ಪರ್ಧೆಗೆ ಪರೋಕ್ಷವಾಗಿ ಸಹಕರಿಸಿದೆ. ಈ ಮೂಲಕ ಮುನಿರತ್ನ ಮತ್ತೆ ಬಿಜೆಪಿಯಿಂದ ಸ್ಪರ್ಧಿಸುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.


ಈ ನಡುವೆ ಕಳೆದ ಬಾರಿ ಬಿಜೆಪಿಯಿಂದ ಆರ್.ಆರ್. ನಗರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ತುಳಸಿ ಮುನಿರಾಜು ಗೌಡ ಅವರನ್ನು ಪಕ್ಷ ನಿರ್ದೇಶನ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಈವರೆಗೂ ಬಿ.ಎಲ್. ಸಂತೋಷ್ ಬಣದ ಮೂಲಕ ಮುನಿರಾಜು ಮತ್ತೆ ಟಿಕೆಟ್ ಪಡೆಯಲು ಲಾಬಿ ನಡೆಸಿದ್ದರು. ಆದರೆ, ಸಿಎಂ ಯಡಿಯೂರಪ್ಪ ಮಾತ್ರ ಮತ್ತೆ ಮುನಿರತ್ನಗೇ ಟಿಕೆಟ್ ನೀಡಲು ಹೈಕಮಾಂಡ್ ಮಟ್ಟದಲ್ಲಿ ಒತ್ತಡ ಹಾಕಿದ್ದರು. ಇದೀಗ ನಕಲಿ ಮತ ಪ್ರಕರಣದಲ್ಲಿ ಬಿಜೆಪಿ ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಮುನಿರತ್ನಗೆ ಸ್ಪರ್ಧೆಗೆ ಹಾದಿ ಸುಗಮ ಆದಂತಾಗಿದೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am