ಸಿದ್ದರಾಮಯ್ಯಗೆ ಡಿಕೆಶಿ ತನ್ನ ಸೋಲಿಸುತ್ತಾರೆಂಬ ಭಯ ಕಾಡುತ್ತಿದೆ ; ಬಿಜೆಪಿ ವ್ಯಂಗ್ಯ 

13-11-22 09:39 pm       Bangalore Correspondent   ಕರ್ನಾಟಕ

ಮುಂದಿನ ಚುನಾವಣೆಗೆ ಕ್ಷೇತ್ರ ಹುಡುಕಲು ಇಷ್ಟೊಂದು ಕಸರತ್ತು ನಡೆಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಪರಿಸ್ಥಿತಿ ನೋಡಿದರೆ, ಯಾವ ಕ್ಷೇತ್ರದಲ್ಲಿ ನಿಂತರೂ ಡಿಕೆಶಿ ಸೋಲಿಸುತ್ತಾರೆ ಎಂಬ ಭಯ ಕಾಡುತ್ತಿರುವ ಹಾಗಿದೆ ಎಂದು ಬಿಜೆಪಿ ಕರ್ನಾಟಕ ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯ ಮಾಡಿದೆ. 

ಬೆಂಗಳೂರು, ನ.13 : ಮುಂದಿನ ಚುನಾವಣೆಗೆ ಕ್ಷೇತ್ರ ಹುಡುಕಲು ಇಷ್ಟೊಂದು ಕಸರತ್ತು ನಡೆಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಪರಿಸ್ಥಿತಿ ನೋಡಿದರೆ, ಯಾವ ಕ್ಷೇತ್ರದಲ್ಲಿ ನಿಂತರೂ ಡಿಕೆಶಿ ಸೋಲಿಸುತ್ತಾರೆ ಎಂಬ ಭಯ ಕಾಡುತ್ತಿರುವ ಹಾಗಿದೆ ಎಂದು ಬಿಜೆಪಿ ಕರ್ನಾಟಕ ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯ ಮಾಡಿದೆ. 

ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಕಳೆದ ಚುನಾವಣೆಯಲ್ಲಿ ಗೆಲ್ಲಿಸಿ ಮಾನ ಕಾಪಾಡಿದ ಬಾದಾಮಿ ಕ್ಷೇತ್ರದ ಜನತೆಗೆ ಕೈ ಕೊಡುವುದು ಜನನಾಯಕನ ಲಕ್ಷಣವೇ? ರಾಜಕೀಯ ಸಂದಿಗ್ಧ ಕಾಲದಲ್ಲಿ ಮಾನ ಕಾಪಾಡಿದ ಜನತೆಗಿಂತ ಮುಂದಿನ ಚುನಾವಣೆ ಗೆಲ್ಲುವುದೇ ಸಿದ್ಧರಾಮಯ್ಯ ಅವರಿಗೆ ಮುಖ್ಯವಾಯಿತೇ? ಎಂದು ಪ್ರಶ್ನಿಸಿದೆ.

ಸಿದ್ದರಾಮಯ್ಯ ಅವರೇ, ನೀವು ನಿಜವಾದ ಜನಪರ ನಾಯಕರಾದರೆ ಬಾದಾಮಿಯಿಂದಲೇ ಸ್ಪರ್ಧಿಸಿ ಅಲ್ಲಿನ ಜನರ ಋಣ ತೀರಿಸಿ. ಬಾದಾಮಿ ಮತದಾರರ ಮೇಲೆ ಅನುಮಾನ ಪಟ್ಟು ಅವರಿಗೆ ಅವಮಾನ ಮಾಡುತ್ತಿರುವುದು ಎಷ್ಟು ಸರಿ? ಎಂದು ಕೇಳಿದೆ.

Siddaramaiah in fear of losing against DK Shivakumar, BJP mocks.