ಬ್ರೇಕಿಂಗ್ ನ್ಯೂಸ್
13-10-20 01:00 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್.13 : ಖಾತೆ ಬದಲಾವಣೆಯಿಂದ ಪಕ್ಷದಲ್ಲಿ ಉಂಟಾಗಿದ್ದ ಅಸಮಾಧಾನವನ್ನ ಶಮನಗೊಳಿಸುವಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇಂದು ಸಚಿವ ಸುಧಾಕರ್ ಮತ್ತು ಶ್ರೀರಾಮುಲು ಇಬ್ಬರನ್ನ ಕಾವೇರಿ ನಿವಾಸಕ್ಕೆ ಕರೆಸಿಕೊಂಡಿದ್ದರು. ಈ ವೇಳೆ ಇಬ್ಬರು ಸಚಿವರ ಜೊತೆಗೆ ಮಾತುಕತೆ ನಡೆಸಿ ಸಂಪುಟ ವಿಸ್ತರಣೆ ವೇಳೆ ನೋಡಿಕೊಳ್ಳೋಣ ಎಂದ ಸಿಎಂ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಸಿಎಂ ಭರವಸೆ ಹಿನ್ನೆಲೆ ಶ್ರೀರಾಮುಲು ಸಮಾಜ ಕಲ್ಯಾಣ ಇಲಾಖೆ ಖಾತೆ ಒಪ್ಪಿಕೊಂಡಿದ್ದಾರೆ.
ಸಿಎಂ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀರಾಮುಲು, ಈ ಹಿಂದೆ ನನಗೆ ಸಮಾಜ ಕಲ್ಯಾಣ ಖಾತೆ ನೀಡಬೇಕೆಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡಿದ್ದೆ. ಅದರಂತೆ ಸಿಎಂ ಆ ಖಾತೆಯನ್ನ ನೀಡಿದ್ದಾರೆ. ಮಾಧ್ಯಮಗಳಲ್ಲಿ ಬಿತ್ತರವಾಗಿರುವಂತೆ ಯಾವುದೇ ಅಸಮಾಧಾನ ಇಲ್ಲ. ಕೊರೊನಾ ಕಾಲದಲ್ಲಿ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಒಬ್ಬರೇ ಬಳಿ ಇರೋದು ಉತ್ತಮ. ಹಾಗಾಗಿ ಆರೋಗ್ಯ ಇಲಾಖೆ ಖಾತೆಯನ್ನ ಸೋದರರಾಗಿರುವ ಸುಧಾಕರ್ ಅವರಿಗೆ ನೀಡಲಾಗಿದೆ. ಸುಧಾಕರ್ ವೈದ್ಯರಾಗಿದ್ದು, ಆರೋಗ್ಯ ಇಲಾಖೆಯನ್ನ ಉತ್ತಮವಾಗಿ ನಿರ್ವಹಿಸಲಿದ್ದಾರೆ ಎಂದು ಹೇಳಿದರು
ಇದೇ ವೇಳೆ ಮಾತನಾಡಿದ ಸುಧಾಕರ್, ಬಿಹಾರ ಮತ್ತು ಉಪ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಈ ಹಿನ್ನೆಲೆ ಕೆಲ ತಾಂತ್ರಿಕೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಖಾತೆಗಳ ಬದಲಾವಣೆಯಾಗಿದೆ. ಶ್ರೀರಾಮುಲು ಅಣ್ಣನವರು ರಾಜಕೀಯದಲ್ಲಿ ನನಗಿಂತ ಹಿರಿಯರು. ಸಮಾಜ ಕಲ್ಯಾಣ ಅನ್ನೋದು ಪ್ರಬಲ ಖಾತೆ. ಮುಖ್ಯಮಂತ್ರಿಗಳ ಖಾತೆಯ ಬದಲಾವಣೆ ಬಗ್ಗೆ ಒಂದು ತಿಂಗಳಿನಿಂದ ನಮ್ಮೊಂದಿಗೆ ಚರ್ಚೆ ನಡೆಸಿದ್ದರು. ಸಮಾಜದ ಸ್ವಾಸ್ಥ್ಯವನ್ನ ಚೆನ್ನಾಗಿ ಮಾಡಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಹೊಣೆಯನ್ನ ಶ್ರೀರಾಮುಲು ಅವರಿಗೆ ನೀಡಲಾಗಿದೆ ಎಂದು ತಿಳಿಸಿದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm