ಬ್ರೇಕಿಂಗ್ ನ್ಯೂಸ್
15-11-22 03:08 pm HK News Desk ಕರ್ನಾಟಕ
ಹುಬ್ಬಳ್ಳಿ,ನ 15: ಹುಬ್ಬಳ್ಳಿಯಿಂದ ದೆಹಲಿಗೆ ಇಂಡಿಗೋ ವಿಮಾನಯಾನ ಸೇವೆ ಸೋಮವಾರದಿಂದ ಆರಂಭವಾಗಿದೆ. ಈ ವಿಮಾನದಲ್ಲಿ ಉತ್ತರ ಕರ್ನಾಟಕ ಭಾಷೆ ಕಂಪು ಸೂಸಿದೆ. ಫ್ಲೈಟ್ ಅನೌನ್ಸ್ಮೆಂಟ್ಅನ್ನು ನಮ್ಮ ಉತ್ತರ ಕರ್ನಾಟಕ ಭಾಷೆಯಲ್ಲಿ ಮಾಡಿರುವುದು ತುಂಬಾ ವಿಶೇಷವಾಗಿದೆ.
ವಿಮಾನದಲ್ಲಿ ಭಾಷಾ ಸೊಗಡು:
ಮೊದಲ ದಿನವೇ ಅಚ್ಚ ಕನ್ನಡದಲ್ಲಿ,"ಎಲ್ಲರಿಗೂ ನಮಸ್ಕಾರ್ ರೀ..ಶರಣು, ನಾನು ಅಕ್ಷಯ್ ಪಾಟೀಲ್.. ಇಲ್ಲೇ ಬೈಲಹೊಂಗಲದವ"! ಎಂದು ಪೈಲಟ್ ಉತ್ತರ ಕರ್ನಾಟಕ ಭಾಷೆಯಲ್ಲಿ ಅನೌನ್ಸ್ ಮಾಡಿದ್ದಾರೆ. ವಿಮಾನಗಳ ಹಾರಾಟಕ್ಕೂ ಮೊದಲು ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಸೂಚನೆಗಳನ್ನು ನೀಡಲಾಗುತ್ತಿತ್ತು. ಅಂತದರಲ್ಲಿ ಕನ್ನಡ ಅದರಲ್ಲೂ ಉತ್ತರ ಕರ್ನಾಟಕದ ಜವಾರಿ ಭಾಷೆಯನ್ನು ಕೇಳುವುದು ಸಾಧ್ಯವಿರಲಿಲ್ಲ. ಬೈಲಹೊಂಗಲದ ಅಕ್ಷಯ ಪಾಟೀಲ್ ಇಂಡಿಗೋ ವಿಮಾನದ ಪೈಲಟ್ ಆಗಿದ್ದು, ತಮ್ಮ ಕನ್ನಡಾಭಿಮಾನವನ್ನು ಮೆರೆದಿದ್ದಾರೆ.
ಪೈಲಟ್ ಅಕ್ಷಯ್ ಪಾಟೀಲ್ ಕನ್ನಡದಲ್ಲಿ ಮಾತನಾಡುವ ವಿಡಿಯೋವನ್ನು ಟ್ವಿಟ್ಟರ್ನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶೇರ್ ಮಾಡಿದ್ದಾರೆ. ಜೊತೆಗೆ ಹುಬ್ಬಳ್ಳಿ-ದೆಹಲಿ ವಿಮಾನಯಾನಕ್ಕೆ ಕಾರಣರಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೂ ಪೈಲಟ್ ಅಭಿನಂದಿಸಿದರು. ಉಳಿಬೇಕು ನಮ್ಮ ಭಾಷಾ ಮತ್ತ ಸಂಸ್ಕೃತಿ ಅಂದ್ರ ಪಕ್ಕಾ ಆಗೇ ಆಗ್ತೈತಿ ಪ್ರಗತಿ ಎಂದು ಅಕ್ಷಯ್ ಹೇಳಿದ್ರು.
ದೆಹಲಿ ವಿಮಾನದಾಗ ಗಂಡುಮೆಟ್ಟಿದ ನಾಡಿನ ಭಾಷಾ ಸೊಗಡು
— Pralhad Joshi (@JoshiPralhad) November 14, 2022
ನಮ್ಮ ಹುಬ್ಬಳ್ಳಿಯಿಂದ ದೆಹಲಿಗೆ ವಿಮಾನ ಸೇವಾ ಚಾಲೂ ಆತು ಅನ್ನೋದ ಒಂದ ವಿಶೇಷ ಆದ್ರ, ಫ್ಲೈಟ್ ಅನೌನ್ಸ್ಮೆಂಟ್ ಸಹ ನಮ್ಮ ಉತ್ತರ ಕರ್ನಾಟಕ ಭಾಷಾದಾಗ ಆಗಿದ್ದು ಇನ್ನೊಂದ ವಿಶೇಷ. @IndiGo6E pic.twitter.com/WlrpmR6nSQ
Air passengers from Kittur Karnataka region (Bombay Karnataka) will now be able to fly directly to the national capital Delhi with IndiGo Airlines launching an exclusive direct flight service from Hubballi on Monday.The formal launch of the direct flight services was held at Hubballi Airport, with Union Minister for Parliamentary Affairs, Coal and Mines Pralhad Joshi inaugurating it and Union Minister for Civil Aviation Jyotiradhitya Scindia and R.K. Singha of IndiGo Airlines participating in the programme through virtual mode.
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
23-05-25 10:46 pm
Mangalore Correspondent
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
VHP, Mangalore, Suhas Shetty Murder: ಸುಹಾಸ್ ಶ...
22-05-25 10:29 pm
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm