ಗುಂಬಜ್ ವಿವಾದ ; ಸಂಸದ ಪ್ರತಾಪಸಿಂಹ ಮನೆಗೆ ಜೆಸಿಬಿ ನುಗ್ಗಿಸಬೇಕು ಎಂದ ಕಾಂಗ್ರೆಸ್ 

16-11-22 04:51 pm       Bangalore Correspondent   ಕರ್ನಾಟಕ

ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ. ನಿರ್ಮಿಸಿದರೆ ಅದನ್ನು ಒಡೆಸಿ ಹಾಕೋದು ಗ್ಯಾರಂಟಿ ಎಂದು ಸಂಸದ ಪ್ರತಾಪಸಿಂಹ ಹೇಳಿಕೆ ನೀಡಿದ್ದಕ್ಕೆ ಕಾಂಗ್ರೆಸ್ ಗರಂ ಆಗಿದೆ. 

ಬೆಂಗಳೂರು, ನ.16 : ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ. ನಿರ್ಮಿಸಿದರೆ ಅದನ್ನು ಒಡೆಸಿ ಹಾಕೋದು ಗ್ಯಾರಂಟಿ ಎಂದು ಸಂಸದ ಪ್ರತಾಪಸಿಂಹ ಹೇಳಿಕೆ ನೀಡಿದ್ದಕ್ಕೆ ಕಾಂಗ್ರೆಸ್ ಗರಂ ಆಗಿದೆ. 

ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ಬಸ್ ನಿಲ್ದಾಣಕ್ಕೆ ಜೆಸಿಬಿ ನುಗ್ಗಿಸುತ್ತೇನೆ ಎನ್ನುವ ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ. ಹಿಂದೆ ಬ್ಯಾರಿಕೇಡ್ ಮುರಿದಿದ್ದ ಸಂಸದ ಪ್ರತಾಪ್ ಸಿಂಹ ಈಗ ಮೈಸೂರಿನ ಬಸ್ ನಿಲ್ದಾಣ ಒಡೆಯುತ್ತೇನೆ ಎನ್ನುತ್ತಿದ್ದಾರೆ. 

ಬಸ್ ನಿಲ್ದಾಣಕ್ಕೆ ಜೆಸಿಬಿ ನುಗ್ಗಿಸುತ್ತೇನೆ ಎನ್ನುವ ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು, ಏಕೆಂದರೆ, ಸಾರ್ವಜನಿಕ ಆಸ್ತಿ ಹಾನಿ ಪಡಿಸುವವರ ಆಸ್ತಿ ಮಟ್ಟುಗೋಲು ಹಾಗೂ ಜೆಸಿಬಿ ನುಗ್ಗಿಸುವುದು ಇವರದ್ದೇ ಪಕ್ಷದ ಆಗ್ರಹಗಳಲ್ಲವೇ? ಎಂದು ಕಾಂಗ್ರೆಸ್ ಕಿಡಿಕಾರಿದೆ.

After being warned by Hindu activists and the BJP MP for Mysuru Kodagu Pratap Simha, authorities in Karnataka have changed the shape of dome-like structures atop bus stops in the city.The activists and the MP claimed that the three domes, one big and two smaller ones, had given the bus stops the look of a mosque.