ಬ್ರೇಕಿಂಗ್ ನ್ಯೂಸ್
17-11-22 02:33 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.17 : ಕಾಂಗ್ರೆಸ್ ನಾಯಕಿ, ಮಾಜಿ ಎಂಎಲ್ ಸಿ ಗಾಯತ್ರಿ ಶಾಂತೇಗೌಡ ಮತ್ತು ಅವರ ಅಳಿಯನ ನಿವಾಸ, ಕಚೇರಿಗಳ ಮೇಲೆ ಐಟಿ ದಾಳಿ ನಡೆದಿದೆ. ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡರ ನಿವಾಸಕ್ಕೆ ಬೆಳ್ಳಂಬೆಳಗ್ಗೆ ಅಧಿಕಾರಿಗಳು ನುಗ್ಗಿದ್ದು ಶಾಕ್ ನೀಡಿದ್ದಾರೆ.
ಹತ್ತಕ್ಕೂ ಹೆಚ್ಚು ವಾಹನಗಳಲ್ಲಿ ಐಟಿ ಅಧಿಕಾರಿಗಳು ಆಗಮಿಸಿದ್ದರು. ವಾಹನದ ಮುಂಭಾಗದಲ್ಲಿ ಮದುವೆ ದಿಬ್ಬಣದ ಕಾರಿನಂತೆ ಶೃಂಗರಿಸಿ ಸಂಶಯ ಬಾರದಂತೆ ಮಾಡಲಾಗಿತ್ತು. ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ಅಳಿಯ ಸಂತೋಷ್ ನಿವಾಸದ ಮೇಲೂ ಐಟಿ ಅಧಿಕಾರಿಗಳು ತೆರಳಿದ್ದು ತಪಾಸಣೆ ನಡೆಸಿದ್ದಾರೆ. ಬೇಲೂರು ಪಟ್ಟಣದ ಚನ್ನಕೇಶವಗೌಡ್ರು ಬೀದಿಯಲ್ಲಿ ಸಂತೋಷ್ ಮನೆಯಿದ್ದು ಅವರಿಗೆ ಸೇರಿದ ಕಲ್ಯಾಣ ಮಂಟಪದ ಮೇಲೂ ದಾಳಿ ನಡೆಸಲಾಗಿದೆ.
ಇದೇ ವೇಳೆ, ರಾಜ್ಯ ಸರ್ಕಾರ ಟಾರ್ಗೆಟ್ ಇಟ್ಟುಕೊಂಡು ಗಾಯಿತ್ರಿ ಶಾಂತೇಗೌಡರ ಮನೆಗೆ ಐಟಿ ದಾಳಿ ನಡೆಸಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಾಸಕ ಸಿ.ಟಿ.ರವಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ತೋರಿದ್ದಾರೆ. ಲೂಟಿ ರವಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದು ಐಟಿ ಇಲಾಖೆಯನ್ನು ದುರಪಯೋಗ ಮಾಡಿಕೊಳ್ಳುತ್ತಿರುವ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದರು.
ಚಿಕ್ಕಮಗಳೂರಿನ ಗಾಯತ್ರಿ ಶಾಂತೇಗೌಡರ ನಿವಾಸ, ಕಚೇರಿ ಅಲ್ಲದೆ, ಗಾಯಿತ್ರಿ ಶಾಂತೇಗೌಡ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರ ಮನೆಗಳ ಮೇಲೂ ದಾಳಿ ನಡೆಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಮರ್ಲೆ ಕಲ್ಲಿನ ಕ್ರಷರ್ ಸ್ಥಳಕ್ಕೂ ದಾಳಿಯಾಗಿದೆ. ಇದಲ್ಲದೆ, ಬೆಂಗಳೂರಿನ ನಾಗರಬಾವಿಯಲ್ಲಿರುವ ಗಾಯತ್ರಿ ಶಾಂತೇಗೌಡ ನಿವಾಸಕ್ಕೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Gayathri Shante Gowda, the leader of the Congress, was the target of income tax raids at her Chikmanglur, Karnataka, home. She is regarded as Siddaramaiah's aide. Just before the Karnataka elections, I-T pressure is increasing on the Congress leader. Income Tax officers searched Gayathri Shante Gowda's home early this morning. She is a former Congresswoman and currently a member of the Congress party.
06-02-25 07:55 pm
Bangalore Correspondent
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
06-02-25 05:37 pm
HK News Desk
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
06-02-25 10:16 pm
Mangalore Correspondent
Prasad Attavar, Saloon Attack, Mangalore: ಮಸಾ...
05-02-25 10:51 pm
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
06-02-25 09:32 pm
HK News Desk
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm
Ullal Police Station, Mangalore, Crime: ಪಿಎಸ್...
03-02-25 05:46 pm