ಬ್ರೇಕಿಂಗ್ ನ್ಯೂಸ್
17-11-22 02:33 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.17 : ಕಾಂಗ್ರೆಸ್ ನಾಯಕಿ, ಮಾಜಿ ಎಂಎಲ್ ಸಿ ಗಾಯತ್ರಿ ಶಾಂತೇಗೌಡ ಮತ್ತು ಅವರ ಅಳಿಯನ ನಿವಾಸ, ಕಚೇರಿಗಳ ಮೇಲೆ ಐಟಿ ದಾಳಿ ನಡೆದಿದೆ. ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡರ ನಿವಾಸಕ್ಕೆ ಬೆಳ್ಳಂಬೆಳಗ್ಗೆ ಅಧಿಕಾರಿಗಳು ನುಗ್ಗಿದ್ದು ಶಾಕ್ ನೀಡಿದ್ದಾರೆ.
ಹತ್ತಕ್ಕೂ ಹೆಚ್ಚು ವಾಹನಗಳಲ್ಲಿ ಐಟಿ ಅಧಿಕಾರಿಗಳು ಆಗಮಿಸಿದ್ದರು. ವಾಹನದ ಮುಂಭಾಗದಲ್ಲಿ ಮದುವೆ ದಿಬ್ಬಣದ ಕಾರಿನಂತೆ ಶೃಂಗರಿಸಿ ಸಂಶಯ ಬಾರದಂತೆ ಮಾಡಲಾಗಿತ್ತು. ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ಅಳಿಯ ಸಂತೋಷ್ ನಿವಾಸದ ಮೇಲೂ ಐಟಿ ಅಧಿಕಾರಿಗಳು ತೆರಳಿದ್ದು ತಪಾಸಣೆ ನಡೆಸಿದ್ದಾರೆ. ಬೇಲೂರು ಪಟ್ಟಣದ ಚನ್ನಕೇಶವಗೌಡ್ರು ಬೀದಿಯಲ್ಲಿ ಸಂತೋಷ್ ಮನೆಯಿದ್ದು ಅವರಿಗೆ ಸೇರಿದ ಕಲ್ಯಾಣ ಮಂಟಪದ ಮೇಲೂ ದಾಳಿ ನಡೆಸಲಾಗಿದೆ.
ಇದೇ ವೇಳೆ, ರಾಜ್ಯ ಸರ್ಕಾರ ಟಾರ್ಗೆಟ್ ಇಟ್ಟುಕೊಂಡು ಗಾಯಿತ್ರಿ ಶಾಂತೇಗೌಡರ ಮನೆಗೆ ಐಟಿ ದಾಳಿ ನಡೆಸಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಾಸಕ ಸಿ.ಟಿ.ರವಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ತೋರಿದ್ದಾರೆ. ಲೂಟಿ ರವಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದು ಐಟಿ ಇಲಾಖೆಯನ್ನು ದುರಪಯೋಗ ಮಾಡಿಕೊಳ್ಳುತ್ತಿರುವ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದರು.
ಚಿಕ್ಕಮಗಳೂರಿನ ಗಾಯತ್ರಿ ಶಾಂತೇಗೌಡರ ನಿವಾಸ, ಕಚೇರಿ ಅಲ್ಲದೆ, ಗಾಯಿತ್ರಿ ಶಾಂತೇಗೌಡ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರ ಮನೆಗಳ ಮೇಲೂ ದಾಳಿ ನಡೆಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಮರ್ಲೆ ಕಲ್ಲಿನ ಕ್ರಷರ್ ಸ್ಥಳಕ್ಕೂ ದಾಳಿಯಾಗಿದೆ. ಇದಲ್ಲದೆ, ಬೆಂಗಳೂರಿನ ನಾಗರಬಾವಿಯಲ್ಲಿರುವ ಗಾಯತ್ರಿ ಶಾಂತೇಗೌಡ ನಿವಾಸಕ್ಕೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Gayathri Shante Gowda, the leader of the Congress, was the target of income tax raids at her Chikmanglur, Karnataka, home. She is regarded as Siddaramaiah's aide. Just before the Karnataka elections, I-T pressure is increasing on the Congress leader. Income Tax officers searched Gayathri Shante Gowda's home early this morning. She is a former Congresswoman and currently a member of the Congress party.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm