ಬ್ರೇಕಿಂಗ್ ನ್ಯೂಸ್
18-11-22 04:44 pm HK News Desk ಕರ್ನಾಟಕ
ಮೈಸೂರು, ನ.18 : ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮಾಹಿತಿ ಕಳ್ಳತನ ಆಗಿದೆ. ಈ ಬಗ್ಗೆ ಪೊಲೀಸ್ ದೂರು ನೀಡಿದ್ದು ತನಿಖೆ ನಡೆಸಲು ಒತ್ತಾಯಿಸಿದ್ದೇವೆ. ಈ ಬಗ್ಗೆ ನಾಳೆ(ನ.19) ಚುನಾವಣಾ ಆಯೋಗದ ಕಚೇರಿ ಮುಂದೆ ಧರಣಿ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮತದಾರ ಪಟ್ಟಿ ಪರಿಷ್ಕರಣೆ ಕೆಲಸವನ್ನು ಬಿಬಿಎಂಪಿ ಆಯುಕ್ತರು ಖಾಸಗಿ ಕಂಪೆನಿಗೆ ವಹಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿಗೆ ಗೊತ್ತಿದ್ದೇ ಈ ಕೆಲಸ ಆಗಿದೆ. ಚುನಾವಣಾ ಆಯೋಗ ಸ್ವೀಪ್ ಹೆಸರಿನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಆದರೆ ಇವರು ಕಾಂಪಿಟೇಟಿವ್ ಬಿಡ್ ಕರೆಯಬೇಕಿತ್ತು. ಉಚಿತವಾಗಿ ಪರಿಷ್ಕರಣೆ ಮಾಡುತ್ತೇವೆ ಎಂದಿದ್ದಕ್ಕೆ ಚಿಲುಮೆ ಮತ್ತು ಹೊಂಬಾಳೆ ಕಂಪನಿಗೆ ಕೊಟ್ಟಿದ್ದಾರೆ. ಇದಕ್ಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ. ಆ ಕಂಪನಿ ಲಾಭ ಇಲ್ಲದೆ ಇದನ್ನು ಮಾಡುತ್ತದೆಯೇ ? ಅಲ್ಪಸಂಖ್ಯಾತ, ದಲಿತರು, ಹಿಂದುಳಿದವರು ಕಾಂಗ್ರೆಸ್ ಪರ ಇರುತ್ತಾರೆ. ಮತಪಟ್ಟಿಯಿಂದ ಅಂತಹ ಮತದಾರರ ಮಾಹಿತಿಯನ್ನು ಡಿಲೀಟ್ ಮಾಡಿ ಬಿಜೆಪಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ನಾವು ಆರೋಪ ಮಾಡಿದ ಮೇಲೆ ಬಿಬಿಎಂಪಿ ಆಯುಕ್ತರು ರಕ್ಷಣಾತ್ಮಕವಾಗಿ ಹೇಳಿಕೆ ನೀಡುತ್ತಿದ್ದಾರೆ. ಇಲ್ಲಿ ಮಾಹಿತಿ ಕಳ್ಳತನ ಆಗಿರುವುದು ನಿಜ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಎಲ್ಓಗಳು ಯಾವಾಗಲೂ ಸರ್ಕಾರಿ ಅರೆ, ಸರ್ಕಾರಿ ನೌಕರರಾಗಬೇಕು. ಇವರು ತಮಗೆ ಬೇಕಾದವರನ್ನು ಬಿಎಲ್ಒ ಮಾಡಿಕೊಂಡಿದ್ದಾರೆ. ಇದು ಕಾನೂನು ಬಾಹಿರ ಕೆಲಸ. ಖಾಸಗಿಯವರನ್ನ ಬಿಎಲ್ಒಗಳಾಗಿ ನೇಮಕ ಮಾಡುತ್ತಿರುವುದಕ್ಕೆ ನಿಮಗೆ ಅಧಿಕಾರ ಕೊಟ್ಟವರು ಯಾರು ಎಂದು ಪ್ರಶ್ನಿಸಿದ್ದಾರೆ.
ಮತದಾರ ಪಟ್ಟಿ ಪರಿಷ್ಕರಣೆ ಅಕ್ರಮವೂ ಆಪರೇಷನ್ ಕಮಲ ಮತ್ತು ಭ್ರಷ್ಟಾಚಾರದ ಭಾಗ. ಚುನಾವಣೆಯಲ್ಲಿ ಗೆಲ್ಲೋಕೆ ಏನೆಲ್ಲ ಆಟ ಆಡ್ತಾರೆ ಅನ್ನೋದಕ್ಕೆ ಇದೂ ಒಂದು ಉದಾಹರಣೆ. ಬಿಜೆಪಿಯವರೂ ಏನೂ ಬೇಕಾದ್ರೂ ಮಾಡುತ್ತಾರೆ ಎಂಬುದಕ್ಕೆ ಇದು ಸಾಕ್ಷಿ ಎಂದು ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸ್ಪರ್ಧಿಸುವುದು ಬೇಡ, ಇಡೀ ರಾಜ್ಯದಲ್ಲಿ ಪ್ರಚಾರ ನಡೆಸಲಿ ಎಂಬ ಮಾಜಿ ಸಚಿವ ಸಂತೋಷ್ ಲಾಡ್ ಹೇಳಿಕೆ ಬಗ್ಗೆ ಕೇಳಿದ್ದಕ್ಕೆ, ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅದನ್ನೂ ಪರಿಗಣನೆಗೆ ತೆಗೆದುಕೊಳ್ಳೋಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Election process corrupted by ruling govt Karnataka Congress Siddaramaiah attacks BJP, CM Bommai
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm