ಬ್ರೇಕಿಂಗ್ ನ್ಯೂಸ್
18-11-22 10:44 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.18 : ಮೂರು ದಶಕಗಳಿಂದ ವಿವಾದಕ್ಕೆ ತುತ್ತಾಗಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾಕ್ಕೆ ರಾಜ್ಯ ಸರ್ಕಾರ ಆಡಳಿತ ಮಂಡಳಿ ರಚಿಸಿ ಆದೇಶ ಹೊರಡಿಸಿದೆ.
ಬಾಬಾ ಬುಡನ್ ಗಿರಿಯ ವಿವಾದ ಬಗೆಹರಿಸಲು ರಾಜ್ಯ ಸರ್ಕಾರದಿಂದ ಮುಂದಡಿ ಇಟ್ಟಿದೆ ಎನ್ನಲಾಗುತ್ತಿದ್ದು ಅದರ ಪ್ರಯುಕ್ತ ಆಡಳಿತ ಮಂಡಳಿ ರಚಿಸಿ ಆದೇಶ ಹೊರಡಿಸಲಾಗಿದೆ. ಒಬ್ಬರು ಮುಸ್ಲಿಂ ಸದಸ್ಯ ಸೇರಿ ಎಂಟು ಜನರ ಆಡಳಿತ ಮಂಡಳಿಯನ್ನು ರಚನೆ ಮಾಡಲಾಗಿದೆ. ಅರ್ಚಕರ ನೇಮಕಾತಿ ಬಗ್ಗೆ ನಿರ್ಧರಿಸುವ ಅಧಿಕಾರವನ್ನು ಆಡಳಿತ ಮಂಡಳಿಗೆ ನೀಡಲಾಗಿದೆ.

ಆಡಳಿತ ಮಂಡಳಿ ರಚಿಸಿ ಅರ್ಚಕರ ನೇಮಕ ಮಾಡುವಂತೆ ಹೈಕೋರ್ಟ್ ಈ ಕುರಿತ ಅರ್ಜಿ ವಿಚಾರಣೆ ವೇಳೆ ಹೇಳಿತ್ತು. ಆದರೆ ಅದನ್ನು ರಾಜ್ಯ ಸರ್ಕಾರ ಪಾಲನೆ ಮಾಡಿರಲಿಲ್ಲ. ಇತ್ತೀಚೆಗೆ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಬಾಬಾ ಬುಡನ್ ಗಿರಿಗೆ ದತ್ತಮಾಲಾ ಅಭಿಯಾನ ನಡೆಸಿದ ವೇಳೆ, ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಸ್ಥಳೀಯ ಶಾಸಕ ಸಿಟಿ ರವಿ ವಿರುದ್ಧವೂ ಆಕ್ರೋಶ ತೋರಿದ್ದು ರಾಮ ಮಂದಿರ ವಿವಾದವನ್ನು 500 ವರ್ಷ ಒಯ್ದಿದ್ದಾಯಿತು. ಬಾಬಾ ಬುಡನ್ ಗಿರಿಯನ್ನೂ 500 ವರ್ಷ ಉದ್ದಕ್ಕೆ ಒಯ್ಯುತ್ತೀರಾ.. ನಿಮಗೆ ಕೋರ್ಟ್ ಆದೇಶ ಪಾಲನೆ ಮಾಡೋಕ್ಕೆ ಆಗಿಲ್ಲವೇ.. ನಾಚಿಕೆ ಮಾನ ಮರ್ಯಾದೆ ಇದೆಯಾ.. ಮುಸ್ಲಿಮರು ತಡೆ ತರುತ್ತಾರೆಂದು ಹೇಳುತ್ತೀರಲ್ಲಾ.. ನಿಮಗೆ ಇಚ್ಛಾಶಕ್ತಿ ಇದ್ದರೆ ಹಿಂದು ಅರ್ಚಕರನ್ನು ನೇಮಕ ಮಾಡಬಹುದಿತ್ತು ಎಂದು ಗುಡುಗಿದ್ದರು.
ಅಲ್ಲದೆ, ಇದೇ ವಿಚಾರವನ್ನು ಮುಂದಿಟ್ಟು ಚಿಕ್ಕಮಗಳೂರಿನಲ್ಲಿ ಚುನಾವಣೆ ಸ್ಪರ್ಧೆ ಮಾಡುವುದಾಗಿ ಹೇಳಿದ್ದರು. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಇದೀಗ ಆಡಳಿತ ಮಂಡಳಿ ರಚಿಸಿ ಆದೇಶ ಮಾಡಿದೆ.

ಹಿಂದುಗಳ 5 ದಶಕದ ಹೋರಾಟಕ್ಕೆ ಜಯ ; ಸಿಟಿ ರವಿ ಟ್ವೀಟ್
ಈ ಬಗ್ಗೆ ಟ್ವೀಟ್ ಮಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ದತ್ತಪೀಠಕ್ಕೆ ವ್ಯವಸ್ಥಾಪನಾ ಸಮಿತಿ ನೇಮಕ ಹಿಂದೂಗಳ 5 ದಶಕಗಳ ಹೋರಾಟಕ್ಕೆ ಸಂದ ಐತಿಹಾಸಿಕ ಜಯ. ಹಿಂದೂಗಳ ಪವಿತ್ರ ಕ್ಷೇತ್ರ ದತ್ತಪೀಠಕ್ಕೆ ಆಡಳಿತ ಮಂಡಳಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಬಿಜೆಪಿ ಸರ್ಕಾರಕ್ಕೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
BJP government awakens after Pramod muthalik Slams party on Datta peta issue.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm