ಬ್ರೇಕಿಂಗ್ ನ್ಯೂಸ್
19-11-22 10:58 pm Bangalore Correspondent ಕರ್ನಾಟಕ
ಬೆಂಗಳೂರು, ನ.19: ಮತದಾರರ ಮಾಹಿತಿ ಸಂಗ್ರಹ ಹಗರಣ ಆರೋಪ ಪ್ರಕರಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರ ನಡುವಿನ ಆರೋಪ, ಪ್ರತ್ಯಾರೋಪಗಳು ತಾರಕಕ್ಕೇರಿವೆ. ಕಾಂಗ್ರೆಸ್ ನ ಆರೋಪಗಳಿಗೆ ಬಿಜೆಪಿ ತಿರುಗೇಟು ನೀಡುತ್ತಲ್ಲೇ ಇದೆ.
ಕಾಂಗ್ರೆಸ್ ಪಕ್ಷಕ್ಕೆ ಇದು ತಿರುಗುಬಾಣವಾಗಲಿದೆ ಎಂಬ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ‘ತಿರುಗುಬಾಣವಲ್ಲ, ಈ ವಿಚಾರದಲ್ಲಿ ನಾವು ತಪ್ಪು ಮಾಡಿದ್ದರೆ ನೇಣು ಹಾಕಲಿ’ ಎಂದಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಮಾನನಷ್ಟ ಮೊಕದ್ದಮೆ ಸಲ್ಲಿಸುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, ಈ ಮೊಕದ್ದಮೆ ಸಲ್ಲಿಸಲು ತಡ ಯಾಕೆ? ಕೂಡಲೇ ಸಲ್ಲಿಸಲಿ. ಈ ಕೇಸ್ ಎದುರಿಸುವುದು ಹೇಗೆ ಎಂದು ನಮಗೂ ಗೊತ್ತಿದೆ ಎಂದು ಹೇಳಿದ್ದಾರೆ.

ಬಮ್ಮಾಯಿ ಅವರು ಹಾಗೂ ಅವರ ಹಿಂಬಾಲಕರಿಂದ ಕನ್ನಡಿಗರ ಮತದಾನದ ಹಕ್ಕನ್ನು ಕಸಿಯುವ ಪ್ರಯತ್ನವಾಗಿದೆ. ಚಿಲುಮೆ ಈ ಅಕ್ರಮದ ಸಾಧನವಾಗಿದೆ. ಈ ವಿಚಾರವನ್ನು ನಾವು ವಿಧಾನಮಂಡಲದ ಉಭಯ ಸದನಗಳಲ್ಲಿ ಪ್ರಶ್ನಿಸುತ್ತೇವೆ. ಜನತಾ ನ್ಯಾಯಾಲಯದ ಮುಂದೆ ಇಡುತ್ತೇವೆ. ಪ್ರಜಾಪ್ರಭುತ್ವದ ರಕ್ಷಕರಾಗಿ ಕನ್ನಡಿಗರ ಮತದಾನದ ಹಕ್ಕನ್ನು ಕಸಿಯಲು ಅವಕಾಶ ನೀಡುವುದಿಲ್ಲ ಎಂದು ಸುರ್ಜೇವಾಲ ಅವರು ತಿಳಿಸಿದ್ದಾರೆ.
ಈ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ, ‘ಈ ಸಮರದಲ್ಲಿ ಬೊಮ್ಮಾಯಿ ಅವರು ಸೋಲಲಿದ್ದಾರೆ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಮಾತ್ರವಲ್ಲ. ಅವರು ಜೈಲಿಗೂ ಹೋಗುತ್ತಾರೆ. ಹೀಗಾಗಿ ಅವರ ಮೇಲೆ ಎಫ್ಐಆರ್ ದಾಖಲಾಗಬೇಕು. ಭಾಗಿಯಾಗಿರುವ ಇತರ ಎಲ್ಲ ಅಧಿಕಾರಿಗಳು ಬಂಧನವಾಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಪ್ಪು ಮಾಡಿದವರು ಶಿಕ್ಷೆ ಅನುಭವಿಸದೇ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನನಗೆ ಕರ್ನಾಟಕ ರಾಜ್ಯದ ಜನರ ಮೇಲೆ ನಂಬಿಕೆ ಇದೆ. ಬೊಮ್ಮಾಯಿ ಅವರ ಪ್ರಕಾರ ಈ ಆರೋಪ ನಿರಾಧಾರವಾಗಿದ್ದರೆ ತನಿಖೆಗೆ ಆದೇಶ ನೀಡಿದ್ದು ಯಾಕೆ?’ ಎಂದರು ಎಂದು ಪ್ರಶ್ನಿಸಿದ್ದಾರೆ.
Karnataka Pradesh Congress Committee president DK Shivakumar alleged that minister Ashwath Narayan and his team are behind the voter data theft case in Bengaluru, news agency ANI reported. DK Shivakumar alleged the minister's team even deleted lakhs of votes using illegally collected data.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm