ಮಂಗಳೂರಿನ ಆಟೋ ಸ್ಫೋಟ ಪ್ರಕರಣ ; ಶಂಕಿತ ಆರೋಪಿ ಬಳಿ ನಕಲಿ ಆಧಾರ್ ಕಾರ್ಡ್, ತುಮಕೂರಿನ ರೈಲ್ವೇ ಸಿಬ್ಬಂದಿ ಹೆಸರಲ್ಲಿತ್ತು ಆಧಾರ್ ! 

20-11-22 01:05 pm       HK News Desk   ಕರ್ನಾಟಕ

ಮಂಗಳೂರಿನ ಆಟೋ ಸ್ಫೋಟ ಪ್ರಕರಣ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿಯಲ್ಲಿ ಪತ್ತೆಯಾದ ಆಧಾರ್​ ಕಾರ್ಡ್​ ನಕಲಿ ಅನ್ನುವುದು ಗೊತ್ತಾಗಿದೆ.

ತುಮಕೂರು, ನ.20  : ಮಂಗಳೂರಿನ ಆಟೋ ಸ್ಫೋಟ ಪ್ರಕರಣ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿಯಲ್ಲಿ ಪತ್ತೆಯಾದ ಆಧಾರ್​ ಕಾರ್ಡ್​ ನಕಲಿ ಅನ್ನುವುದು ಗೊತ್ತಾಗಿದೆ. ಈ ಆಧಾರ್ ಕಾರ್ಡ್ ತುಮಕೂರಿನಲ್ಲಿ ರೈಲ್ವೇ ಇಲಾಖೆಯಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿಯದ್ದು ಅನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. 

ಹುಬ್ಬಳಿ ಮೂಲದ ಪ್ರೇಮರಾಜ್ ಹುಟಗಿ ಎಂಬುವವರು ತುಮಕೂರಿನಲ್ಲಿ ರೈಲ್ವೆ ಸಿಬ್ಬಂದಿಯಾಗಿದ್ದು ರೈಲ್ವೆ ಟ್ರ್ಯಾಕ್ ಮೆನ್ ಆಗಿ ಕೆಲಸ ಮಾಡ್ತಿದ್ದಾರೆ. ಪ್ರೇಮರಾಜ್ ಹುಟಗಿ, ಸದ್ಯ ತುಮಕೂರಿನ ಹಿರೇಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ. ಕಳೆದ ಎರಡು ವರ್ಷದಲ್ಲಿ ಎರಡು ಬಾರಿ ಆಧಾರ್ ಕಾರ್ಡ್ ಕಳೆದುಕೊಂಡಿದ್ದರು. ಒಮ್ಮೆ ಧಾರವಾಡದಿಂದ ಬೆಳಗಾವಿಗೆ ಬಸ್​ನಲ್ಲಿ ಹೋಗುವಾಗ ಆಧಾರ್ ಕಾರ್ಡ್ ಕಳೆದುಕೊಂಡಿದ್ದರು. ಬಳಿಕ ಮತ್ತೊಂದು ಆಧಾರ್ ಕಾರ್ಡ್ ಪಡೆದಿದ್ದರು. ಕಳೆದ ಆರು ತಿಂಗಳ ಹಿಂದೆ ಹುಬ್ಬಳ್ಳಿಯಿಂದ ಬಸ್​ನಲ್ಲಿ ಬರುವಾಗ ಮತ್ತೊಮ್ಮೆ ಆಧಾರ್ ಕಾರ್ಡ್ ಕಳೆದುಕೊಂಡಿದ್ದರು. ಇದೀಗ ಇದೇ ವ್ಯಕ್ತಿಯ ಹೆಸರಲ್ಲಿದ್ದ ಆಧಾರ್​ ಕಾರ್ಡ್​ ಸ್ಫೋಟಗೊಂಡ ಆಟೋದಲ್ಲಿ ಸಿಕ್ಕಿದ್ದು ಭಾರೀ ಅನುಮಾನಕ್ಕೆ ಕಾರಣವಾಗಿದೆ. ‌

ಈ ಕುರಿತು ಪ್ರೇಮರಾಜ್​ ಹುಟಗಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು ನಿನ್ನೆ ರಾತ್ರಿ ವಿಷಯ ಗೊತ್ತಾದ ಕೂಡಲೇ ತುಮಕೂರು ಎಸ್​ಪಿ ಅವರನ್ನ ಸಂಪರ್ಕಿಸಲು ಪೊಲೀಸರು ಸೂಚಿಸಿದ್ದರು. ಅದರಂತೆ ತುಮಕೂರು ಎಸ್​​ಪಿ ರಾಹುಲ್ ಕುಮಾರ್ ಅವರನ್ನ ಸಂಪರ್ಕಿಸಿದ್ದು, ನನಗೂ ಸ್ಫೋಟ ಘಟನೆಗೂ ಯಾವುದೇ ಸಂಬಂಧ ಇಲ್ಲ. ನನ್ನ ಹೆಸರಲ್ಲಿ ಈ ರೀತಿಯಾಗಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದೇನೆ. ನಿನ್ನೆಯೇ ನಮ್ಮ ಮನೆಗೆ ಪೊಲೀಸರು ಬಂದು ಪರಿಶೀಲನೆ ಮಾಡಿದ್ದರು ಎಂದು ಹೇಳಿದ್ದಾರೆ.

ಆಟೋದಲ್ಲಿ ನಿಗೂಢ ಸ್ಫೋಟ ; ಸ್ಥಳದಲ್ಲಿ ಹಳೆಯ ಕುಕ್ಕರ್ ಪತ್ತೆ, ಸ್ಫೋಟಕದ ಬಗ್ಗೆ ಶಂಕೆ

ಕುಕ್ಕರ್ ಬ್ಲಾಸ್ಟ್ ಬಗ್ಗೆ ಪೊಲೀಸ್ ಹೈಎಲರ್ಟ್ ; ಸ್ಫೋಟದ ಹಿಂದೆ ಪ್ರಬಲ ಸಂಚು ಸಾಧ್ಯತೆ, ಸ್ಫೋಟಕದ ಬಗ್ಗೆ ಪರಿಶೀಲನೆ 

ಆಟೋ ಸ್ಫೋಟ ಆಕಸ್ಮಿಕ ಘಟನೆಯಲ್ಲ, ಭಯೋತ್ಪಾದಕ ಕೃತ್ಯ ; ಡಿಜಿಪಿ ಪ್ರವೀಣ್ ಸೂದ್ ಟ್ವೀಟ್

Autorickshaw blast at Naguri in Mangalore, accused terrorists carry fake Aadhar card. Identifies himself as a Hindu man though he was a Muslim. The autorickshaw blast in coastal Karnataka's Mangaluru Saturday was not accidental but an "act of terror with the intention to cause serious damage", the state police chief said today. Karnataka top cop Praveen Sood added that the police is probing the incident along with central agencies.