ಬ್ರೇಕಿಂಗ್ ನ್ಯೂಸ್
25-11-22 06:53 pm Bangalore Correspondent ಕರ್ನಾಟಕ
ಬೆಂಗಳೂರು, ನ.25 : ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಎನ್ಐಎ ತನಿಖೆಗೆ ಶಿಫಾರಸ್ಸು ಮಾಡಿತ್ತು. ಇದರ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯ ಬಾಂಬ್ ಸ್ಫೋಟ ಪ್ರಕರಣವನ್ನು ಎನ್ಐಎ ತನಿಖೆಗೆ ವರ್ಗಾಯಿಸಿ ಆದೇಶಿಸಿದೆ.
ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದ್ದು, ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿದೆ. ಎರಡು ದಿನಗಳ ಹಿಂದೆ ಮಂಗಳೂರಿಗೆ ತೆರಳಿದ್ದ ಡಿಜಿಪಿ ಪ್ರವೀಣ್ ಸೂದ್, ನಾವು ಯಾವುದೇ ಕಡೆ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಾದರೂ ಅದನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳಿಸಿಕೊಡುತ್ತೇವೆ. ಅಗತ್ಯ ಎನಿಸಿದರೆ ಕೇಂದ್ರವೇ ಎನ್ಐಎ ತನಿಖೆ ನಡೆಸುತ್ತದೆ. ಮಂಗಳೂರಿನ ಪ್ರಕರಣದಲ್ಲಿ ಮೊದಲ ದಿನದಿಂದಲೇ ಎನ್ಐಎ ಮತ್ತು ಇಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದಿದ್ದರು.

ಮರುದಿನ ಗುರುವಾರ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, ನಾವು ಎನ್ಐಎ ತನಿಖೆಗೆ ಶಿಫಾರಸು ಮಾಡಿದ್ದೇವೆ ಎಂದು ಹೇಳಿದ್ದರು. ಇದೀಗ ಕೇಂದ್ರ ಸರಕಾರವೇ ಬಾಂಬ್ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ಆದೇಶ ಮಾಡಿದೆ. ಸ್ಥಳೀಯ ಪೊಲೀಸರು ಸಂಗ್ರಹಿಸಿದ ಸಾಕ್ಷ್ಯಗಳು, ತನಿಖಾ ಮಾಹಿತಿಗಳನ್ನು ಎನ್ಐಎ ಅಧಿಕಾರಿಗಳಿಗೆ ವಹಿಸಬೇಕಾಗುತ್ತದೆ. ಅಲ್ಲದೆ, ಘಟನೆ ಬಗ್ಗೆ ಎನ್ಐಎ ತನಿಖಾ ದಳ ಪ್ರತ್ಯೇಕವಾಗಿ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸುತ್ತದೆ.
The Karnataka government has handed over the investigation of Mangaluru cooker blast case to the National Investigation Agency (NIA). Karnataka Home Minister Araga Jnanendra on Thursday said that the state government has taken a decision to hand over the case to NIA and passed the order in this regard.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm