ಬ್ರೇಕಿಂಗ್ ನ್ಯೂಸ್
25-11-22 06:53 pm Bangalore Correspondent ಕರ್ನಾಟಕ
ಬೆಂಗಳೂರು, ನ.25 : ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಎನ್ಐಎ ತನಿಖೆಗೆ ಶಿಫಾರಸ್ಸು ಮಾಡಿತ್ತು. ಇದರ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯ ಬಾಂಬ್ ಸ್ಫೋಟ ಪ್ರಕರಣವನ್ನು ಎನ್ಐಎ ತನಿಖೆಗೆ ವರ್ಗಾಯಿಸಿ ಆದೇಶಿಸಿದೆ.
ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದ್ದು, ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿದೆ. ಎರಡು ದಿನಗಳ ಹಿಂದೆ ಮಂಗಳೂರಿಗೆ ತೆರಳಿದ್ದ ಡಿಜಿಪಿ ಪ್ರವೀಣ್ ಸೂದ್, ನಾವು ಯಾವುದೇ ಕಡೆ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಾದರೂ ಅದನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳಿಸಿಕೊಡುತ್ತೇವೆ. ಅಗತ್ಯ ಎನಿಸಿದರೆ ಕೇಂದ್ರವೇ ಎನ್ಐಎ ತನಿಖೆ ನಡೆಸುತ್ತದೆ. ಮಂಗಳೂರಿನ ಪ್ರಕರಣದಲ್ಲಿ ಮೊದಲ ದಿನದಿಂದಲೇ ಎನ್ಐಎ ಮತ್ತು ಇಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದಿದ್ದರು.
ಮರುದಿನ ಗುರುವಾರ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, ನಾವು ಎನ್ಐಎ ತನಿಖೆಗೆ ಶಿಫಾರಸು ಮಾಡಿದ್ದೇವೆ ಎಂದು ಹೇಳಿದ್ದರು. ಇದೀಗ ಕೇಂದ್ರ ಸರಕಾರವೇ ಬಾಂಬ್ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ಆದೇಶ ಮಾಡಿದೆ. ಸ್ಥಳೀಯ ಪೊಲೀಸರು ಸಂಗ್ರಹಿಸಿದ ಸಾಕ್ಷ್ಯಗಳು, ತನಿಖಾ ಮಾಹಿತಿಗಳನ್ನು ಎನ್ಐಎ ಅಧಿಕಾರಿಗಳಿಗೆ ವಹಿಸಬೇಕಾಗುತ್ತದೆ. ಅಲ್ಲದೆ, ಘಟನೆ ಬಗ್ಗೆ ಎನ್ಐಎ ತನಿಖಾ ದಳ ಪ್ರತ್ಯೇಕವಾಗಿ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸುತ್ತದೆ.
The Karnataka government has handed over the investigation of Mangaluru cooker blast case to the National Investigation Agency (NIA). Karnataka Home Minister Araga Jnanendra on Thursday said that the state government has taken a decision to hand over the case to NIA and passed the order in this regard.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm