ಬ್ರೇಕಿಂಗ್ ನ್ಯೂಸ್
25-11-22 09:25 pm Bangalore Correspondent ಕರ್ನಾಟಕ
ಬೆಂಗಳೂರು, ನ.25 : ರಾಜ್ಯದಲ್ಲಿ 25 ಬಿಜಪಿ ಸಂಸದರಿದ್ದರೂ, ಕೇಂದ್ರದಲ್ಲಿ ಬಿಜೆಪಿ ಸರಕಾರಕ್ಕೆ ಒತ್ತಡ ಹೇರಿ ಮಂಗಳೂರಿನಲ್ಲಿ ಎನ್ಐಎ ಕಚೇರಿ ಸ್ಥಾಪನೆಗೆ ಸಾಧ್ಯವಾಗಿಲ್ಲ. ಬಿಜೆಪಿಯವರದ್ದು ಕೇವಲ ಭಾಷಣ ಮಾತ್ರ ಎಂದು ಕರ್ನಾಟಕ ಕಾಂಗ್ರೆಸ್ ಟೀಕಿಸಿದೆ.
ರಾಜ್ಯ ಕಾಂಗ್ರೆಸ್, ಬಿಜೆಪಿ ಸರಕಾರಕ್ಕೆ ನಿರಂತರ ಪ್ರಶ್ನೆಗಳನ್ನು ಮಾಡುತ್ತಿದ್ದು, ಪಕ್ಷದ ಪ್ರಣಾಳಿಕೆಯಿಂದ ಹಿಡಿದು ಜ್ವಲಂತ ಸಮಸ್ಯೆ, ಸನ್ನಿವೇಶಗಳ ಬಗ್ಗೆ ಟ್ವೀಟ್ ಮೂಲಕ ಪ್ರಶ್ನೆ ಮುಂದಿಡುತ್ತಿದೆ. ಮಂಗಳೂರಿನಲ್ಲಿ ಬಾಂಬ್ ಸ್ಫೋಟ ಆಗಿರುವ ಹಿನ್ನೆಲೆಯಲ್ಲಿ ಎನ್ಐಎ ಕಚೇರಿ ಸ್ಥಾಪನೆ ಯಾಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನೆ ಮಾಡಿದೆ. ಬಿಜೆಪಿಯವರು ಬರೀ ಭಾಷಣದಲ್ಲಿ ಮಾತ್ರ ಹೇಳುತ್ತಾರೆ. ಕಾರ್ಯದಲ್ಲಿ ತೋರಿಸೋದಿಲ್ಲ ಎಂದು ಟೀಕಿಸಿದೆ.
ನ.19ರಂದು ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡು ಆಟೋ ಚಾಲಕ ಸೇರಿದಂತೆ ಉಗ್ರ ಮೊಹಮ್ಮದ್ ಶಾರೀಕ್ ಗಂಭೀರ ಗಾಯಗೊಂಡಿದ್ದಾರೆ. ಭಯೋತ್ಪಾದಕ ಕೃತ್ಯ ದೇಶದ ಗಮನ ಸೆಳೆದಿದ್ದು, ಮಂಗಳೂರಿನಲ್ಲಿ ಬಹುಕಾಲದ ಬೇಡಿಕೆಯಾಗಿದ್ದ ಎನ್ಐಎ ಕಚೇರಿ ಸ್ಥಾಪನೆ ಸಾಧ್ಯವಾಗದೇ ಇರುವುದೇ ಇಂಥ ಘಟನೆಗಳಿಗೆ ಕಾರಣ ಎನ್ನುವ ಟೀಕೆ ಕೇಳಿಬಂದಿತ್ತು. ಮಂಗಳೂರು ಸೇರಿದಂತೆ ರಾಜ್ಯದಲ್ಲಿ 25 ಬಿಜೆಪಿ ಸಂಸದರು ಇದ್ದರೂ, ಎನ್ಐಎ ಕಚೇರಿ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗಿಲ್ಲ ಎಂಬ ಕಾಂಗ್ರೆಸ್ ಟೀಕೆ ಸಾರ್ವಜನಿಕರ ಗಮನ ಸೆಳೆದಿದೆ.
ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ ಕಚೇರಿಯನ್ನು ಸ್ಥಾಪಿಸುತ್ತೇವೆ ಎಂದಿದ್ದ ಬಿಜೆಪಿ ಇಷ್ಟು ವರ್ಷಗಳ ಕಾಲ ಮಾಡಿದ್ದೇನು?
— Karnataka Congress (@INCKarnataka) November 25, 2022
ಡಬಲ್ ಇಂಜಿನ್ ಸರ್ಕಾರ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿದ್ದೇಕೆ?
ಬಿಜೆಪಿಯ 25 ಸಂಸದರಿದ್ದೂ NIA ಕಚೇರಿ ತರಲು ಸಾಧ್ಯವಾಗಿಲ್ಲವೇಕೆ?#NimHatraIdyaUttara pic.twitter.com/G6A6lswVu8
Mangalore autorickshaw bomb blast, why BJP has failed to bring NIA office in Mangalore being in power slams Karnataka congres on twitter
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm