ಬ್ರೇಕಿಂಗ್ ನ್ಯೂಸ್
25-11-22 09:25 pm Bangalore Correspondent ಕರ್ನಾಟಕ
ಬೆಂಗಳೂರು, ನ.25 : ರಾಜ್ಯದಲ್ಲಿ 25 ಬಿಜಪಿ ಸಂಸದರಿದ್ದರೂ, ಕೇಂದ್ರದಲ್ಲಿ ಬಿಜೆಪಿ ಸರಕಾರಕ್ಕೆ ಒತ್ತಡ ಹೇರಿ ಮಂಗಳೂರಿನಲ್ಲಿ ಎನ್ಐಎ ಕಚೇರಿ ಸ್ಥಾಪನೆಗೆ ಸಾಧ್ಯವಾಗಿಲ್ಲ. ಬಿಜೆಪಿಯವರದ್ದು ಕೇವಲ ಭಾಷಣ ಮಾತ್ರ ಎಂದು ಕರ್ನಾಟಕ ಕಾಂಗ್ರೆಸ್ ಟೀಕಿಸಿದೆ.
ರಾಜ್ಯ ಕಾಂಗ್ರೆಸ್, ಬಿಜೆಪಿ ಸರಕಾರಕ್ಕೆ ನಿರಂತರ ಪ್ರಶ್ನೆಗಳನ್ನು ಮಾಡುತ್ತಿದ್ದು, ಪಕ್ಷದ ಪ್ರಣಾಳಿಕೆಯಿಂದ ಹಿಡಿದು ಜ್ವಲಂತ ಸಮಸ್ಯೆ, ಸನ್ನಿವೇಶಗಳ ಬಗ್ಗೆ ಟ್ವೀಟ್ ಮೂಲಕ ಪ್ರಶ್ನೆ ಮುಂದಿಡುತ್ತಿದೆ. ಮಂಗಳೂರಿನಲ್ಲಿ ಬಾಂಬ್ ಸ್ಫೋಟ ಆಗಿರುವ ಹಿನ್ನೆಲೆಯಲ್ಲಿ ಎನ್ಐಎ ಕಚೇರಿ ಸ್ಥಾಪನೆ ಯಾಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನೆ ಮಾಡಿದೆ. ಬಿಜೆಪಿಯವರು ಬರೀ ಭಾಷಣದಲ್ಲಿ ಮಾತ್ರ ಹೇಳುತ್ತಾರೆ. ಕಾರ್ಯದಲ್ಲಿ ತೋರಿಸೋದಿಲ್ಲ ಎಂದು ಟೀಕಿಸಿದೆ.
ನ.19ರಂದು ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡು ಆಟೋ ಚಾಲಕ ಸೇರಿದಂತೆ ಉಗ್ರ ಮೊಹಮ್ಮದ್ ಶಾರೀಕ್ ಗಂಭೀರ ಗಾಯಗೊಂಡಿದ್ದಾರೆ. ಭಯೋತ್ಪಾದಕ ಕೃತ್ಯ ದೇಶದ ಗಮನ ಸೆಳೆದಿದ್ದು, ಮಂಗಳೂರಿನಲ್ಲಿ ಬಹುಕಾಲದ ಬೇಡಿಕೆಯಾಗಿದ್ದ ಎನ್ಐಎ ಕಚೇರಿ ಸ್ಥಾಪನೆ ಸಾಧ್ಯವಾಗದೇ ಇರುವುದೇ ಇಂಥ ಘಟನೆಗಳಿಗೆ ಕಾರಣ ಎನ್ನುವ ಟೀಕೆ ಕೇಳಿಬಂದಿತ್ತು. ಮಂಗಳೂರು ಸೇರಿದಂತೆ ರಾಜ್ಯದಲ್ಲಿ 25 ಬಿಜೆಪಿ ಸಂಸದರು ಇದ್ದರೂ, ಎನ್ಐಎ ಕಚೇರಿ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗಿಲ್ಲ ಎಂಬ ಕಾಂಗ್ರೆಸ್ ಟೀಕೆ ಸಾರ್ವಜನಿಕರ ಗಮನ ಸೆಳೆದಿದೆ.
ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ ಕಚೇರಿಯನ್ನು ಸ್ಥಾಪಿಸುತ್ತೇವೆ ಎಂದಿದ್ದ ಬಿಜೆಪಿ ಇಷ್ಟು ವರ್ಷಗಳ ಕಾಲ ಮಾಡಿದ್ದೇನು?
— Karnataka Congress (@INCKarnataka) November 25, 2022
ಡಬಲ್ ಇಂಜಿನ್ ಸರ್ಕಾರ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿದ್ದೇಕೆ?
ಬಿಜೆಪಿಯ 25 ಸಂಸದರಿದ್ದೂ NIA ಕಚೇರಿ ತರಲು ಸಾಧ್ಯವಾಗಿಲ್ಲವೇಕೆ?#NimHatraIdyaUttara pic.twitter.com/G6A6lswVu8
Mangalore autorickshaw bomb blast, why BJP has failed to bring NIA office in Mangalore being in power slams Karnataka congres on twitter
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm