ಬ್ರೇಕಿಂಗ್ ನ್ಯೂಸ್
25-11-22 10:36 pm Bangalore Correspondent ಕರ್ನಾಟಕ
ಬೆಂಗಳೂರು, ನ.25: ಬೆಂಗಳೂರಿನಲ್ಲಿ ನಡೆದ ಮತದಾರರ ಐಡಿ ಕಾರ್ಡ್ ಪರಿಷ್ಕರಣೆ ಅಕ್ರಮ ಪ್ರಕರಣದಲ್ಲಿ ಕೇಂದ್ರ ಚುನಾವಣಾ ಆಯೋಗ ಮಧ್ಯ ಪ್ರವೇಶ ಮಾಡಿದೆ. ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಸಂಗ್ರಹಿಸಿದ ಆರೋಪದಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಲ್ಲದೆ, ಪ್ರಕರಣದ ಬಗ್ಗೆ ಸಮಗ್ರ ತನಿಖೆಗೆ ಆದೇಶ ಮಾಡಿದೆ.
ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಹಾಗೂ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರನ್ನು ಅಮಾನತಾದವರು. ಬಿಬಿಎಂಪಿ ವಿಶೇಷ ಆಯುಕ್ತ ಎಸ್.ರಂಗಪ್ಪ ಅವರು ಶಿವಾಜಿನಗರ, ಚಿಕ್ಕಪೇಟೆ ಕ್ಷೇತ್ರದ ಉಸ್ತುವಾರಿ ಸಹ ಆಗಿದ್ದರು. ಬೆಂಗಳೂರು ನಗರ ಜಿಲ್ಲಾಧಿಕಾರಿ ಆಗಿದ್ದ ಕೆ.ಶ್ರೀನಿವಾಸ್ ಅವರು ಮಹದೇವಪುರ ಕ್ಷೇತ್ರದ ಉಸ್ತುವಾರಿ ಅಧಿಕಾರಿ ಆಗಿದ್ದರು. ಇದೀಗ ಈ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತು ಮಾಡಿರುವ ಕೇಂದ್ರ ಚುನಾವಣಾ ಆಯೋಗ, ರಂಗಪ್ಪ ಹಾಗೂ ಕೆ.ಶ್ರೀನಿವಾಸ್ ವಿರುದ್ಧ ಇಲಾಖಾ ವಿಚಾರಣೆಗೆ ರಾಜ್ಯ ಚುನಾವಣಾ ಆಯುಕ್ತರಿಗೆ ನಿರ್ದೇಶನ ನೀಡಿದೆ.
ಇದಲ್ಲದೆ, ವೋಟರ್ ಐಡಿ ಪರಿಷ್ಕರಣೆಗೆ ವಿಶೇಷ ಅಧಿಕಾರಿ ನೇಮಕಕ್ಕೆ ಸೂಚನೆ ನೀಡಿದೆ. ಈವರೆಗೆ ಸಂಗ್ರಹಿಸಿರುವ ಡೇಟಾ ಬಳಸದಂತೆಯೂ ಸೂಚಿಸಿದ್ದು, ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿ ಮತ್ತೊಮ್ಮೆ ಶೇ. 100ರಷ್ಟು ಮತದಾರರ ಪರಿಷ್ಕರಣೆ ನಡೆಯಬೇಕು ಎಂದು ಹೇಳಿದೆ. ಮತದಾರರ ಪರಿಷ್ಕರಣೆಗೆ ಡಿ.24 ರ ವರೆಗೆ ಸಮಯ ವಿಸ್ತರಣೆ ಮಾಡಿದೆ.
ಬಿಬಿಎಂಪಿಯ ಹೊರಗಿನ ವಿಶೇಷ ಅಧಿಕಾರಿಗಳನ್ನು ಮೇಲ್ವಿಚಾರಣೆಗೆ ನೇಮಿಸಬೇಕು. ಮತದಾರರ ಪಟ್ಟಿಗಳ ಪರಿಶೀಲನೆಯನ್ನು ಅಧಿಕಾರಿಗಳು ನಡೆಸಬೇಕು. ಅಕ್ರಮವಾಗಿ ಯಾವುದೇ ನೇರ ಅಥವಾ ಪರೋಕ್ಷ ಬಳಕೆಯನ್ನು ಖಚಿತಪಡಿಸಿಕೊಳ್ಳಬೇಕು. ರಾಜಕೀಯ ಪಕ್ಷಗಳು ದಾಖಲೆ ಸಂಗ್ರಹಿಸಿರುವ ಬಗ್ಗೆ ಪತ್ತೆಹಚ್ಚಬೇಕು ಎಂದು ಅಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ ಕೊಟ್ಟಿದೆ.
ಇದಲ್ಲದೆ, ಹೊಸತಾಗಿ ವೋಟರ್ ಐಡಿ ಪರಿಷ್ಕರಣೆ ಬಗ್ಗೆ ನಿಗಾ ವಹಿಸಲು ಏಳು ಜನ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿದೆ. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತನಿಖೆಗೆ ಐಎಎಸ್ ಅಧಿಕಾರಿ ವಿಶಾಲ್ ಅವರನ್ನು ನೇಮಕ ಮಾಡಲಾಗಿದೆ. ಮಹಾದೇವಪುರ ವಲಯಕ್ಕೆ ಅಜಯ್ ನಾಗಭೂಷಣ್ ಹಾಗೂ ಶಿವಾಜಿನಗರ ಕ್ಷೇತ್ರಕ್ಕೆ ಪ್ರಿಯಾಂಕಾ ಮೇರಿ ಅವರನ್ನು ನೇಮಿಸಿದೆ.
Voter ID scam BBMP Commissioner and Bengaluru DC Suspend, Probe ordered by Election commission.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm