ಬ್ರೇಕಿಂಗ್ ನ್ಯೂಸ್
26-11-22 11:27 am Bangalore Correspondent ಕರ್ನಾಟಕ
ಬೆಂಗಳೂರು, ನ.26 : ಸ್ಯಾಂಡಲ್ ವುಡ್ ಹಿರಿಯ ನಟಿ ವಿನಯಾ ಪ್ರಸಾದ್ ಅವರ ಮನೆಯಲ್ಲಿ ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಯ್ಯಪ್ಪ ಅಲಿಯಾಸ್ ಮುರುಗ (36) ಹಾಗೂ ರವಿ ( 26) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ 13.53 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 261 ಗ್ರಾಂ ಚಿನ್ನಾಭರಣ ಹಾಗೂ 500 ಗ್ರಾಂ ಬೆಳ್ಳಿ ಸಾಮಗ್ರಿ ಜಪ್ತಿ ಮಾಡಲಾಗಿದೆ. ಇವರಿಬ್ಬರು ಠಾಣೆಯ ವ್ಯಾಪ್ತಿಯ 5 ಕಡೆ ಕಳ್ಳತನ ಎಸಗಿದ್ದರು ಎಂದು ತಿಳಿಸಿದ್ದಾರೆ.
ವಿನಯಾ ಪ್ರಸಾದ್ ಅವರ ನಂದಿನಿ ಲೇಔಟ್ 4ನೇ ಬ್ಲಾಕ್ ನ ರೈಲ್ವೇ ಮೈನ್ಸ್ ಕಾಲೋನಿ ನಿವಾಸದಲ್ಲಿ ದುಷ್ಕರ್ಮಿಗಳು ಕಳ್ಳತನ ಮಾಡಿದ್ದು, ಈ ಸಂಬಂಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಶೋಧ ಕಾರ್ಯ ನಡೆಸಿದ್ದರು.
ನಟಿ ವಿನಯಾ ಪ್ರಸಾದ್ ಹಾಗೂ ಅವರ ಪತಿ ಜ್ಯೋತಿ ಪ್ರಕಾಶ್ ಅವರು ಮನೆಗೆ ಬೀಗ ಹಾಕಿಕೊಂಡು ಕಾರ್ಯ ನಿಮಿತ್ತ ಅ.22 ರಂದು ಉಡುಪಿಗೆ ತೆರಳಿದ್ದರು. ಈ ವೇಳೆ ದುಷ್ಕರ್ಮಿಗಳು ಮನೆ ಬಾಗಿಲಿನ ಬೀಗವನ್ನು ಮುರಿದು ಮನೆ ಪ್ರವೇಶಿಸಿ 7 ಸಾವಿರ ರೂ. ನಗದು ಹಣ ದೋಚಿ ಪರಾರಿಯಾಗಿದ್ದರು.
The Nandini Layout police have arrested two accused who had stolen from the house of veteran actress Vinaya Prasad. Ayyappa alias Murugesh (36) and Ravi (26) of Channarayapatna in Hassan district were arrested. Investigation revealed that these two had committed theft in 5 places within the police station. 13.53 lakhs from the accused. Police said that 261 grams of gold jewelery and 500 grams of silver material were seized.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm