ಬ್ರೇಕಿಂಗ್ ನ್ಯೂಸ್
26-11-22 02:05 pm HK News Desk ಕರ್ನಾಟಕ
ಶಿವಮೊಗ್ಗ, ನ.26: ಹುಡುಗರಿಗೆ ಸೂಕ್ತ ಹುಡುಗಿ ಸಿಗುತ್ತಿಲ್ಲ ಎನ್ನುವ ಕೊರಗಿನ ಮಧ್ಯೆ ಇಲ್ಲೊಬ್ಬ ಯುವಕ ತನಗೆ ಮದುವೆಯಾಗಲು ಹೆಣ್ಣು ಹುಡುಕಿ ಕೊಡಿ ಎಂದು ಜಿಲ್ಲಾ ಪೊಲೀಸ್ ವರಿಷ್ಠರಿಗೆ ಪತ್ರ ಬರೆದಿದ್ದಾನೆ.
ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಹೀಗೆ ಪತ್ರ ಬರೆದಿದ್ದು, ಅದರ ಪ್ರತಿ ವೈರಲ್ ಆಗಿದೆ. ಭದ್ರಾವತಿ ತಾಲೂಕಿನ ಹೊಸಮನೆ ನಿವಾಸಿಯಾಗಿರುವ ಪ್ರವೀಣ್ ಹೀಗೆ ಪತ್ರ ಬರೆದಿರುವಾತ. ತೋಟಗಾರಿಕೆ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಸಣ್ಣಸಂಗಪ್ಪ ಅವರ ಪುತ್ರ ಪ್ರವೀಣ್ ಮದುವೆಗೆ ಹೆಣ್ಣು ಹುಡುಕಿ ಕೊಡುವಂತೆ ಎಸ್ಪಿಗೆ ಪತ್ರ ಬರೆದು ಸುದ್ದಿಯಾಗಿದ್ದಾನೆ.

ಈ ಹಿಂದೆ ಸಾಫ್ಟ್ ವೇರ್ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದ್ದ ಪ್ರವೀಣ್ ಒ.ಎಸ್., ಸದ್ಯ ತಮ್ಮ ಜಮೀನಿನಲ್ಲಿ ಕೃಷಿ ಕೆಲಸ ನಡೆಸುತ್ತಿದ್ದಾನೆ. ಸಣ್ಣಸಂಗಪ್ಪ ಆಂಧ್ರ ಮೂಲದವರಾಗಿದ್ದು, ಸರಕಾರಿ ಸೇವೆಯಲ್ಲಿ ನಿವೃತ್ತರಾಗಿ ಶಿವಮೊಗ್ಗದಲ್ಲಿಯೇ ನೆಲೆಸಿದ್ದಾರೆ. ಆದರೆ ಕುಟುಂಬಸ್ಥರು ಆಂಧ್ರದಲ್ಲಿಯೇ ಇದ್ದು, ಹೆಚ್ಚು ಸಂಪರ್ಕದಲ್ಲಿ ಇಲ್ಲ ಎನ್ನಲಾಗುತ್ತಿದೆ. ಈ ನಡುವೆ, ಮಗ ಪ್ರವೀಣ್ ತನಗೊಂದು ಹೆಣ್ಣು ಹುಡುಕಿಕೊಡಿ ಎಂದು ಎಸ್ಪಿಗೆ ಪತ್ರ ಬರೆದಿದ್ದಾನೆ.
ಪ್ರವೀಣ್ ಪತ್ರವನ್ನು ನೋಡಿದ ಎಸ್ಪಿ ಮಿಥುನ್ ಕುಮಾರ್, ಈ ಬಗ್ಗೆ ಚೆಕ್ ಮಾಡುವಂತೆ ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ನಿಜಕ್ಕೂ ಆತನಿಗೆ ಹೆಣ್ಣು ಸಿಗದೆ ಸಮಸ್ಯೆಗೀಡಾಗಿದ್ದಾನೆಯೇ ಅಥವಾ ಸುಮ್ಮನೆ ಪೊಲೀಸರಿಗೆ ಪತ್ರ ಬರೆದಿದ್ದಾನೆಯೇ ಎಂಬ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಸದ್ಯ ಪತ್ರ ಬರೆದ ವ್ಯಕ್ತಿಯ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಕೃಷಿ ಕೆಲಸ ನಡೆಸುವ ಮಂದಿಯನ್ನು ಕಲಿತ ಹುಡುಗಿಯರು ಮದುವೆಯಾಗುತ್ತಿಲ್ಲ ಎನ್ನುವ ಕೊರಗು ಒಂದೆಡೆಯಾಗಿದ್ದರೆ, ಕೆಲವರಿಗೆ ಸಂಬಂಧಿಕರನ್ನೆಲ್ಲ ಬಿಟ್ಟು ದೂರದಲ್ಲಿ ತನ್ನ ಪಾಡಿಗೆ ಕುಳಿತ ಕುಟುಂಬದ ವ್ಯಕ್ತಿಗಳಿಗೆ ಹೆಣ್ಣು ಸಿಗದೆ ಪರಿತಪಿಸುವಂತಾಗಿದೆ.
Man writes letter to SP of Shivamogga seeking help for good proposal for marriage.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm