ಬ್ರೇಕಿಂಗ್ ನ್ಯೂಸ್
26-11-22 02:05 pm HK News Desk ಕರ್ನಾಟಕ
ಶಿವಮೊಗ್ಗ, ನ.26: ಹುಡುಗರಿಗೆ ಸೂಕ್ತ ಹುಡುಗಿ ಸಿಗುತ್ತಿಲ್ಲ ಎನ್ನುವ ಕೊರಗಿನ ಮಧ್ಯೆ ಇಲ್ಲೊಬ್ಬ ಯುವಕ ತನಗೆ ಮದುವೆಯಾಗಲು ಹೆಣ್ಣು ಹುಡುಕಿ ಕೊಡಿ ಎಂದು ಜಿಲ್ಲಾ ಪೊಲೀಸ್ ವರಿಷ್ಠರಿಗೆ ಪತ್ರ ಬರೆದಿದ್ದಾನೆ.
ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಹೀಗೆ ಪತ್ರ ಬರೆದಿದ್ದು, ಅದರ ಪ್ರತಿ ವೈರಲ್ ಆಗಿದೆ. ಭದ್ರಾವತಿ ತಾಲೂಕಿನ ಹೊಸಮನೆ ನಿವಾಸಿಯಾಗಿರುವ ಪ್ರವೀಣ್ ಹೀಗೆ ಪತ್ರ ಬರೆದಿರುವಾತ. ತೋಟಗಾರಿಕೆ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಸಣ್ಣಸಂಗಪ್ಪ ಅವರ ಪುತ್ರ ಪ್ರವೀಣ್ ಮದುವೆಗೆ ಹೆಣ್ಣು ಹುಡುಕಿ ಕೊಡುವಂತೆ ಎಸ್ಪಿಗೆ ಪತ್ರ ಬರೆದು ಸುದ್ದಿಯಾಗಿದ್ದಾನೆ.

ಈ ಹಿಂದೆ ಸಾಫ್ಟ್ ವೇರ್ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದ್ದ ಪ್ರವೀಣ್ ಒ.ಎಸ್., ಸದ್ಯ ತಮ್ಮ ಜಮೀನಿನಲ್ಲಿ ಕೃಷಿ ಕೆಲಸ ನಡೆಸುತ್ತಿದ್ದಾನೆ. ಸಣ್ಣಸಂಗಪ್ಪ ಆಂಧ್ರ ಮೂಲದವರಾಗಿದ್ದು, ಸರಕಾರಿ ಸೇವೆಯಲ್ಲಿ ನಿವೃತ್ತರಾಗಿ ಶಿವಮೊಗ್ಗದಲ್ಲಿಯೇ ನೆಲೆಸಿದ್ದಾರೆ. ಆದರೆ ಕುಟುಂಬಸ್ಥರು ಆಂಧ್ರದಲ್ಲಿಯೇ ಇದ್ದು, ಹೆಚ್ಚು ಸಂಪರ್ಕದಲ್ಲಿ ಇಲ್ಲ ಎನ್ನಲಾಗುತ್ತಿದೆ. ಈ ನಡುವೆ, ಮಗ ಪ್ರವೀಣ್ ತನಗೊಂದು ಹೆಣ್ಣು ಹುಡುಕಿಕೊಡಿ ಎಂದು ಎಸ್ಪಿಗೆ ಪತ್ರ ಬರೆದಿದ್ದಾನೆ.
ಪ್ರವೀಣ್ ಪತ್ರವನ್ನು ನೋಡಿದ ಎಸ್ಪಿ ಮಿಥುನ್ ಕುಮಾರ್, ಈ ಬಗ್ಗೆ ಚೆಕ್ ಮಾಡುವಂತೆ ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ನಿಜಕ್ಕೂ ಆತನಿಗೆ ಹೆಣ್ಣು ಸಿಗದೆ ಸಮಸ್ಯೆಗೀಡಾಗಿದ್ದಾನೆಯೇ ಅಥವಾ ಸುಮ್ಮನೆ ಪೊಲೀಸರಿಗೆ ಪತ್ರ ಬರೆದಿದ್ದಾನೆಯೇ ಎಂಬ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಸದ್ಯ ಪತ್ರ ಬರೆದ ವ್ಯಕ್ತಿಯ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಕೃಷಿ ಕೆಲಸ ನಡೆಸುವ ಮಂದಿಯನ್ನು ಕಲಿತ ಹುಡುಗಿಯರು ಮದುವೆಯಾಗುತ್ತಿಲ್ಲ ಎನ್ನುವ ಕೊರಗು ಒಂದೆಡೆಯಾಗಿದ್ದರೆ, ಕೆಲವರಿಗೆ ಸಂಬಂಧಿಕರನ್ನೆಲ್ಲ ಬಿಟ್ಟು ದೂರದಲ್ಲಿ ತನ್ನ ಪಾಡಿಗೆ ಕುಳಿತ ಕುಟುಂಬದ ವ್ಯಕ್ತಿಗಳಿಗೆ ಹೆಣ್ಣು ಸಿಗದೆ ಪರಿತಪಿಸುವಂತಾಗಿದೆ.
Man writes letter to SP of Shivamogga seeking help for good proposal for marriage.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm