ಬ್ರೇಕಿಂಗ್ ನ್ಯೂಸ್
27-11-22 04:47 pm HK News Desk ಕರ್ನಾಟಕ
ಮೈಸೂರು, ನ.27: ವಿವಾದಕ್ಕೊಳಗಾಗಿದ್ದ ಬಸ್ ತಂಗುದಾಣದ ಗುಂಬಜ್ ಮಾದರಿಯನ್ನು ರಾತ್ರೋರಾತ್ರಿ ತೆರವು ಮಾಡಲಾಗಿದೆ. ಮೈಸೂರು ಊಟಿ ರಸ್ತೆಯಲ್ಲಿ ನಿರ್ಮಾಣವಾಗಿದ್ದ ಗುಂಬಜ್ ಮಾದರಿ ಬಸ್ ತಂಗುದಾಣದ ವಿರುದ್ಧ ಸಂಸದ ಪ್ರತಾಪಸಿಂಹ ಆಕ್ರೋಶ ವ್ಯಕ್ತಪಡಿಸಿದ್ದರು.
ಬಸ್ ತಂಗುದಾಣ ಮೇಲಿದ್ದ ಎರಡು ಚಿಕ್ಕ ಗೋಪುರಗಳನ್ನು ಶನಿವಾರ ರಾತ್ರಿ ತೆರವು ಮಾಡಲಾಗಿದೆ. ಶಾಸಕ ರಾಮದಾಸ್ ಅಣತಿ ಮೇರೆಗೆ ಚಿಕ್ಕ ಗೋಪುರಗಳ ತೆರವುಗೊಳಿಸಲಾಗಿದೆ. ಮಧ್ಯೆ ಇದ್ದ ದೊಡ್ಡ ಗೋಪುರಗಳನ್ನು ಮಾತ್ರ ಉಳಿಸಿ ಚಿಕ್ಕ ಗೋಪುರವನ್ನು ಒಡೆದು ಹಾಕಲಾಗಿದೆ.

ಬಸ್ ತಂಗುದಾಣ ಗುಂಬಜ್ ಮಾದರಿ ಇದೆ ಎಂದು ಸಂಸದ ಪ್ರತಾಪಸಿಂಹ ಆಕ್ಷೇಪವೆತ್ತಿದ್ದರು. ಆದರೆ ಶಾಸಕ ರಾಮದಾಸ್ ಬಸ್ ತಂಗುದಾಣ ಅರಮನೆ ಮಾದರಿಯಲ್ಲಿದೆ ಎಂದು ಸಮರ್ಥಿಸಿಕೊಂಡಿದ್ದರು. ಇದೇ ವಿಚಾರ ಸಂಸದ ಹಾಗೂ ಶಾಸಕರ ನಡುವೆ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿತ್ತು. ಈಗ ಗೋಪುರ ತೆರವುಗೊಳಿಸಿ ವಿವಾದಕ್ಕೆ ಇತಿಶ್ರೀ ಹಾಕಲು ಯತ್ನಿಸಲಾಗಿದೆ.
ಈ ಬಗ್ಗೆ ಶಾಸಕ ರಾಮದಾಸ್ ಸ್ಪಷ್ಟನೆ ನೀಡಿದ್ದು ಗುಂಬಜ್ ಮಾದರಿಯಿದ್ದ ಬಸ್ ನಿಲ್ದಾಣದ ಗೋಪುರ ತೆರವಾಗಿದೆ. ವಿವಾದಿತ ಕೇಂದ್ರವಾಗಬಾರದು ಅನ್ನೋ ಕಾರಣಕ್ಕೆ ತೆರವುಗೊಳಿಸಲಾಗಿದೆ. 12 ಬಸ್ ನಿಲ್ದಾಣದ ಶೆಲ್ಟರ್ ಇದೇ ಮಾದರಿಯಲ್ಲಿ ನಿರ್ಮಿಸಲಾಗುವುದು. ಅರಮನೆ ಮಾದರಿ ನಿರ್ಮಾಣ ನನ್ನ ಉದ್ದೇಶವಾಗಿತ್ತು. ಅನವಶ್ಯಕವಾಗಿ ಧರ್ಮದ ಲೇಪನ ನೀಡಿದ್ದು ನನಗೆ ನೋವಾಗಿದೆ. ಹಿರಿಯರ ಸಲಹೆಯಂತೆ ನಿರ್ಧಾರ ಮಾಡಿದ್ದೇನೆ. ದೊಡ್ಡ ಡೂಮ್ ಉಳಿಸಿಕೊಂಡು ಎರಡು ಚಿಕ್ಕ ಡೂಮ್ ಗಳನ್ನು ತೆರವು ಮಾಡಲಾಗಿದೆ. ಯಾರೂ ಅನ್ಯಥಾ ಭಾವಿಸಬಾರದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಶಾಸಕ ಎಸ್.ಎ. ರಾಮದಾಸ್ ಮನವಿ ಮಾಡಿದ್ದಾರೆ.
Two of the three controversial domes atop a bus stop in Mysuru, which had turned into a friction point between BJP leaders of the district, were removed late on Saturday. The domes atop the bus stop near JSS College, Ooty Road, which according to local MLA S A Ramdas was modelled along the lines of Mysuru Palace, had attracted the wrath of Mysuru-Kodagu MP Prathap Simha who had threatened to demolish them.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm