ಕೋಟ, ಸುನಿಲ್ ತಮ್ಮ ಸ್ಥಾನ ಉಳಿಸಲು ಸಮುದಾಯ ಬಲಿ ಕೊಟ್ಟಿದ್ದಾರೆ ; ಪ್ರಣವಾನಂದ ಸ್ವಾಮೀಜಿ 

28-11-22 11:04 pm       HK News Desk   ಕರ್ನಾಟಕ

ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸುನಿಲ್ ಕುಮಾರ್ ತಮ್ಮ ಸ್ಥಾನಮಾನ‌ಕ್ಕಾಗಿ ಇಡೀ ಸಮುದಾಯವನ್ನು ಬಲಿ ಕೊಟ್ಟಿದ್ದಾರೆ. ಈಡಿಗ, ಬಿಲ್ಲವ ಸಮಾಜಕ್ಕೆ ರಿಸರ್ವೇಶನ್ ಒದಗಿಸಲು ಧ್ವನಿ ಎತ್ತುವಲ್ಲಿ ಸಮುದಾಯದ ಸಚಿವರು ಹಾಗೂ ಇತರ ಶಾಸಕರು ವಿಫಲರಾಗಿದ್ದಾರೆ ಎಂದು ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಲ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಕಿಡಿಕಾರಿದ್ದಾರೆ. 

ಕಾರವಾರ, ನ.28 : ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸುನಿಲ್ ಕುಮಾರ್ ತಮ್ಮ ಸ್ಥಾನಮಾನ‌ಕ್ಕಾಗಿ ಇಡೀ ಸಮುದಾಯವನ್ನು ಬಲಿ ಕೊಟ್ಟಿದ್ದಾರೆ. ಈಡಿಗ, ಬಿಲ್ಲವ ಸಮಾಜಕ್ಕೆ ರಿಸರ್ವೇಶನ್ ಒದಗಿಸಲು ಧ್ವನಿ ಎತ್ತುವಲ್ಲಿ ಸಮುದಾಯದ ಸಚಿವರು ಹಾಗೂ ಇತರ ಶಾಸಕರು ವಿಫಲರಾಗಿದ್ದಾರೆ ಎಂದು ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಲ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಕಿಡಿಕಾರಿದ್ದಾರೆ. 

ಶಿರಸಿ ತಾಲೂಕಿನ ಸಿದ್ಧಾಪುರದಲ್ಲಿ ಮಾತನಾಡಿದ ಸ್ವಾಮೀಜಿ, ಬಿಜೆಪಿ ಸರಕಾರದ ಯಾವ ಕೊಡುಗೆ ಕೂಡ ಈಡಿಗ, ಬಿಲ್ಲವ ಸಮುದಾಯದ ಮೇಲಿಲ್ಲ.‌ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹಲವೆಡೆ ನಾರಾಯಣ ಗುರು ವಸತಿ ಶಾಲೆ ಪ್ರಾರಂಭಿಸಿದ್ದೇವೆ ಅಂತಾರೆ. ಆದರೆ, ಈ ವಸತಿ ಶಾಲೆಗಳಲ್ಲಿ ಈಡಿಗ ಸಮುದಾಯ ಮಕ್ಕಳಿಗೂ ಶಿಕ್ಷಣಕ್ಕೆ ರಿಸರ್ವೇಶನ್ ಇಲ್ಲ. ರಾಜ್ಯದಲ್ಲಿರುವ ಈಡಿಗ, ಬಿಲ್ಲವ ಸಮುದಾಯದ ಶಾಸಕರಿಂದ ಯಾವುದೇ ನ್ಯಾಯ ಸಿಗುತ್ತದೆಂಬ ನಂಬಿಕೆಯಿಲ್ಲ. ಈ ಸಮುದಾಯದ ಯುವಕರು, ಮಹಿಳೆಯರು ಬೀದಿಗೆ ಬರುತ್ತಿದ್ದಾರೆ. 

ಜನಾಭಿಪ್ರಾಯಕ್ಕೆ ಮಾನ್ಯತೆ ನೀಡುವುದು ಸರ್ಕಾರದ ಜವಾಬ್ದಾರಿ' | Minister Kota Srinivas  Poojary React On CM Lockdown Decision - Kannada Oneindia

ಸಮುದಾಯದ ರಾಜಕಾರಣಿಗಳಿಂದಲೇ ನಮಗೆ ಅನ್ಯಾಯವಾಗಿದೆ. ನಾರಾಯಣ ಗುರು ನಿಗಮವನ್ನು ಘೋಷಣೆ ಮಾಡುವುದರಲ್ಲಿ ಸಮುದಾಯದ ಶಾಸಕರ ನಿಲುವೇನು ?‌ ಅವರ ಸ್ವಾರ್ಥ ರಾಜಕಾರಣಕ್ಕಾಗಿ ಸಮುದಾಯವನ್ನು ಬಳಸುತ್ತಿದ್ದಾರೆ. ಗೌಡ ಸಮುದಾಯದ ರಾಜಕಾರಣಿಗಳು ಸರಕಾರಕ್ಕೆ ಸೌಲಭ್ಯಕ್ಕಾಗಿ ಒತ್ತಾಯಿಸಿದ್ದಾರೆ.‌ ಆದರೆ, ಈಡಿಗ, ಬಿಲ್ಲವ ಸಮುದಾಯದ ನಾಯಕರಿಗೆ ನಾಚಿಗೆಯಾಗಬೇಕು. ಸುನಿಲ್ ಕುಮಾರ್ ಅವರಂತೂ ಒಮ್ಮೆಯೂ ವಿಧಾನಸಭೆಯಲ್ಲಿ ಸಮುದಾಯದ ಪರ ಧ್ವನಿ ಎತ್ತಿಲ್ಲ. 2023ರಲ್ಲಿ ನಡೆಯುವ ಚುನಾವಣೆ ವೇಳೆ ಸಮುದಾಯದ ಮತ‌ ನಿಮಗೆ ಬೇಡವೆಂದಲ್ಲಿ ಹೇಳಿಬಿಡಿ. 

BJP is 'people-centric' unlike Congress being 'person-centric': Minister  Sunil Kumar | udayavani

ಇದೇ ಕಾರಣಗಳಿಂದ ಮುಂದಿನ ಜ.6ರಂದು ಮಂಗಳೂರು- ಬೆಂಗಳೂರು ಪಾದಯಾತ್ರೆ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಈಡಿಗ, ಬಿಲ್ಲವ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಬೇಕೆಂದು ನಮ್ಮ ಒತ್ತಾಯವಿದೆ.‌ ಮೀಸಲಾತಿ, ಕುಲಕಸುಬು, ನಿಗಮ ನೀಡುವಲ್ಲಿ ಸಮುದಾಯಕ್ಕೆ ವಂಚನೆಯಾಗಿದೆ. ರಾಜ್ಯ ಸರಕಾರ ಹಿಂದುಳಿದ ವರ್ಗದಲ್ಲಿರುವ ಈಡಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಬೇಕು.‌ ಇಲ್ಲವಾದಲ್ಲಿ ಮುಂದಿನ‌ ಚುನಾವಣೆ ವೇಳೆ‌ ಪರಿಣಾಮ ಎದುರಿಸಬೇಕಾದೀತು ಎಂದು ಪ್ರಣವಾನಂದ ಸ್ವಾಮೀಜಿ ಎಚ್ಚರಿಸಿದ್ದಾರೆ.

Ministers Kota Srinivasa Poojary and Sunil Kumar have sacrificed the community to save their status. Shri Pranavananda Swamiji, President of Arya Eediga Rashtriya Mahamandal, said that community ministers and other MLAs have failed to raise their voices to provide reservation to Eediga and Billava Samaj.  Shri Pranavananda Swamiji, who spoke in Siddhapura of Uttara Kannada district, said that none of the contribution of the BJP government is on the Idiga and Billava communities.