ಬಾಬಾ ಬುಡನ್ ಗಿರಿಯಲ್ಲಿ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ 

30-11-22 05:24 pm       HK News Desk   ಕರ್ನಾಟಕ

ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್ ಗಿರಿಯಲ್ಲಿ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. 

ಚಿಕ್ಕಮಗಳೂರು, ನ.30: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್ ಗಿರಿಯಲ್ಲಿ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. 

ಈ ಹಿಂದೆ ಬಾಬಾ ಬುಡನ್ ಗಿರಿಯ ದತ್ತಪೀಠದಲ್ಲಿ ಪೂಜೆ ಸಲ್ಲಿಸಲು ಹಿಂದು ಮತ್ತು ಮುಸ್ಲಿಮರಿಗೆ ಅವಕಾಶ ಕಲ್ಪಿಸುವ ಮೂಲಕ 50 ವರ್ಷಗಳ ವಿವಾದಕ್ಕೆ 'ಸೌಹಾರ್ದಯುತ ಪರಿಹಾರ' ಮಾರ್ಗವನ್ನು ಕಂಡುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತ್ತು. ಅಲ್ಲದೆ, ಈ ಬಗ್ಗೆ ರಾಜ್ಯ ಸರ್ಕಾರವೇ ಸೌಹಾರ್ದ ಪರಿಹಾರ ಮಾಡಿಕೊಳ್ಳಲು ಇತ್ತೀಚೆಗೆ ಜಂಟಿ ಕಮಿಟಿಯನ್ನು ನೇಮಕ ಮಾಡಿತ್ತು. 

Karnataka CM Basavaraj Bommai finally allocates cabinet portfolios - The  Economic Times

ಆದರೆ ಹೈಕೋರ್ಟ್ ಸೂಚನೆ ನೀಡಿದ್ದರೂ ರಾಜ್ಯ ಸರಕಾರ ದತ್ತಪೀಠಕ್ಕೆ ಹಿಂದು ಅರ್ಚಕರ ನೇಮಕ ಮಾಡದೇ ಇರುವುದನ್ನು ಶ್ರೀರಾಮ ಸೇನೆ ನಾಯಕರು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಶ್ರೀರಾಮ ಸೇನೆ ರಾಜ್ಯ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ರಾಜ್ಯದಲ್ಲಿ ಮುಂದಿನ ಬಾರಿಯೂ ಅಧಿಕಾರಕ್ಕೆ ಬರಬೇಕೆಂಬ ಆಸೆ ನಿಮಗಿದ್ದರೆ ಕೂಡಲೇ ದತ್ತಪೀಠವನ್ನು ಹಿಂದುಗಳಿಗೆ ಒಪ್ಪಿಸಿ, ಅರ್ಚಕರನ್ನು ನೇಮಿಸಿ ಎಂದು ಹೇಳಿದ್ದರು. 

Dattatreya Jayanti 2022: Dates & Importance - GaneshaSpeaks

ಈಗ ಡಿಸೆಂಬರ್ 6, 7, 8 ರಂದು ದತ್ತ ಜಯಂತಿ ಆಚರಿಸಲು ಕರ್ನಾಟಕ ಹೈಕೋರ್ಟ್‌ ವಿಭಾಗೀಯ ಪೀಠದಿಂದ ಅನುಮತಿ ಸಿಕ್ಕಿದೆ. ಇದರಿಂದ ಸಾವಿರಾರು ದತ್ತಪೀಠದ ಭಕ್ತರು ಖುಷಿಯಾಗಿದ್ದಾರೆ.

Karnataka High Court has given a green signal for datta jayanti celebrations at Baba Budangiri in Chikkamagaluru district. The high court had earlier asked the state government to find an "amicable solution" to the 50-year-old dispute by allowing Hindus and Muslims to offer prayers at the Dattapeeth in Baba Budangiri. Also, the state government itself had recently appointed a joint committee to find an amicable solution in this regard.