ಬ್ರೇಕಿಂಗ್ ನ್ಯೂಸ್
01-12-22 12:24 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.1 : ತನ್ನ ವಿರುದ್ಧ ಟೀಕೆ ಮಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಯತ್ನಾಳ್ ಹೆಸರೆತ್ತದೆ ವ್ಯಂಗ್ಯವಾಗಿ ಚುಚ್ಚಿದ್ದಾರೆ.
ಜೋಕರ್ಗಳ ಬಗ್ಗೆ ತಲೆಕೆಡಿಸಿಕೊಳ್ಳಬಾರದು. ಜೋಕರ್ ಮಾತನ್ನು ಜೋಕ್ ಆಗಿಯೇ ತೆಗೆದುಕೊಳ್ಳಬೇಕು. ಪ್ರತಿನಿತ್ಯ ಒಂದೇ ಜೋಕ್ ಹೇಳಿದರೆ ಜನರು ನಗಲ್ಲ. ಹೊಸ ಹೊಸ ಜೋಕ್ ಹೇಳಿದರೆ ಆ ಜೋಕರ್ಗೆ ಉದ್ಯೋಗ ಸಿಗುತ್ತೆ. ಇಲ್ಲವಾದ್ರೆ ಅವರನ್ನು ಜನ ಉದಾಸೀನ ಮಾಡ್ತಾರೆ. ಅದೇ ರೀತಿ ಅ ಜೋಕರ್ಗಳನ್ನು ಉದಾಸೀನ ಮಾಡಬೇಕು ಎಂದು ಹೇಳುವ ಮೂಲಕ ಯತ್ನಾಳ್ ಅವರನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂಬ ಸಂದೇಶ ನೀಡಿದ್ದಾರೆ.
ಜೋಕರ್ಗಳನ್ನು ಜೋಕ್ ಮಾಡಲು ಬಿಟ್ಟು ನಾವು ಮೀಸಲಾತಿ ಕಡೆ ಗಟ್ಟಿಯಾಗಿ ನಿಲ್ಲಬೇಕಿದೆ. ಕೆಲವರಿಗೆ ಮತ್ತೊಬ್ಬರನ್ನು ಬೈಯುವ ಚಟ ಇರುತ್ತದೆ. ಮತ್ತೊಬ್ಬರನ್ನು ತೆಗಳುವುದರಲ್ಲಿ ಸಂತೋಷ ಪಡೆದುಕೊಳ್ಳುತ್ತಾರೆ. ಹತಾಶ ಮನೋಭಾವದಿಂದ ಈ ರೀತಿ ಮಾತನಾಡುತ್ತಾರೆ ಎಂದು ವಚನಾನಂದ ಸ್ವಾಮೀಜಿ ವ್ಯಂಗ್ಯ ಮಾಡಿದರು.
ಹಗುರವಾಗಿ ಮಾತನಾಡುವ ವ್ಯಕ್ತಿಗಳ ಬಗ್ಗೆ ಮಾತನಾಡುವುದಿಲ್ಲ. ಪ್ರತಿಯೊಬ್ಬರಿಗೆ ಅವರದ್ದೇ ಅದ ವಾಕ್ ಸ್ವಾತಂತ್ರ್ಯ ಇರುತ್ತದೆ. 2ಎ ಮೀಸಲಾತಿ ಬಗ್ಗೆ ಕಾನೂನು ತೊಡಕುಗಳು ಇಲ್ಲದೇ ನಮ್ಮ ಜನರಿಗೆ ಮೀಸಲಾತಿ ಕೊಡಿಸುವುದೇ ನಮ್ಮ ಉದ್ದೇಶ ಎಂದು ವಚನಾನಂದ ಸ್ವಾಮೀಜಿ ಹೇಳಿದರು.
ಹಗುರವಾಗಿ ಮಾತನಾಡುವ ವ್ಯಕ್ತಿಗಳ ಬಗ್ಗೆ ನಾವು ಮಾತನಾಡಿದ್ರೆ ಅದು ಹಗುರತನ ಆಗುತ್ತದೆ. ನಾವು ಪೀಠದ ಘನತೆ ಮತ್ತು ಗೌರವವನ್ನು ಹೆಚ್ಚು ಮಾಡಬೇಕೇ ವಿನಃ ಕಡಿಮೆ ಮಾಡುವ ಕೆಲಸಕ್ಕೆ ನಾವ್ಯಾರು ಮುಂದಾಗಬಾರದು. ಸಮಾಜ ಇವರೆಲ್ಲರನ್ನು ಗಮನಿಸುತ್ತಿದೆ ಎಂದರು.
Jokers should be taken as a joke. Mr. Vachanananda Swamiji of Panchamasali Harihara Peetha indirectly gave a tong to MLA Basanagowda Yatnal, saying that he should not worry about the jokers. Without mentioning the name of MLA Basanagowda Yatnal, who is constantly attacking Sri Vachanananda Swamiji, he attacked, people will not laugh if he tells the same joke every day, if he tells a new joke, that joker will get a job. Otherwise people will ignore them. Similarly, he said that we should also ignore those jokers.
26-07-24 10:39 pm
HK News Desk
Greater Bengalore, DK Shivakumar: ರಾಮನಗರ ಇನ್ನ...
26-07-24 09:58 pm
MUDA Scam, Byrathi Suresh: ಕೇಂದ್ರ ಸಚಿವ ಕುಮಾರಸ...
26-07-24 09:27 pm
Shalini Rajneesh, Rajneesh Goyal: ಮುಖ್ಯ ಕಾರ್ಯ...
26-07-24 09:00 pm
Bangalore bike wheelie: ಬೆಂಗಳೂರಿನಲ್ಲಿ ಹೆಚ್ಚಾಯ...
26-07-24 08:50 pm
26-07-24 05:51 pm
HK News Desk
ಬಯಲು ಶೌಚಕ್ಕೆ ಹೋದವನ ಕತ್ತಿಗೆ ಸುತ್ತಿಕೊಂಡ 13 ಅಡಿ...
25-07-24 01:03 pm
ನೇಪಾಳ ; ಟೇಕಾಫ್ ವೇಳೆ ರನ್ ವೇನಲ್ಲೇ ಹೊತ್ತಿ ಉರಿದ...
24-07-24 01:48 pm
ಪ್ಯಾರಿಸ್ ಒಲಿಂಪಿಕ್ಸ್ ಗೆ ಭಯೋತ್ಪಾದಕ ದಾಳಿ ಬೆದರಿಕೆ...
24-07-24 12:25 pm
IAS Wife Suicide, Rowdy, Crime; ರೌಡಿ ಹಿಂದೆ ಓಡ...
23-07-24 08:45 pm
26-07-24 10:24 pm
Mangalore Correspondent
Mangalore rain, Uchila, Someshwara beach: ಸೋಮ...
26-07-24 09:06 pm
Mangalore Liquid Lounge News: ವಿದ್ಯಾರ್ಥಿಗಳೇ ಬ...
26-07-24 05:07 pm
Mangalore, Vinay Kulkarni, Koragajja: ತುಳುನಾಡ...
26-07-24 02:11 pm
Mangalore rain, Ullal house collapsed: ಉಳ್ಳಾಲ...
25-07-24 11:19 pm
26-07-24 03:42 pm
Bangalore Correspondent
Mangalore Jail Raid: ನಸುಕಿನಲ್ಲಿ ಮಂಗಳೂರು ಜೈಲಿಗ...
25-07-24 11:44 am
Shivamogga Murder News: ಪ್ರೀತಿಸಿದ ಯುವತಿಯನ್ನೇ...
24-07-24 06:45 pm
Bangalore PG Murder: ಬೆಂಗಳೂರು ; ಲೇಡಿಸ್ ಪಿಜಿಗೆ...
24-07-24 05:09 pm
Ramnagara rape, crime: ಐಸ್ಕ್ರೀಮ್ ಕೊಡಿಸೋ ನೆಪ...
23-07-24 03:03 pm