ಬ್ರೇಕಿಂಗ್ ನ್ಯೂಸ್
03-12-22 02:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.3: ಕೇಡರ್ ಬೇಸ್ ಪಾರ್ಟಿ ಆಗಿದ್ದ ಬಿಜೆಪಿ ಮಾಸ್ ಪಾರ್ಟಿ ಆಗಿ ಬದಲಾಗಿದೆ. ಈ ವೇಳೆ ಪ್ರವಾಹದ ಜತೆಗೆ ಕಸ-ಕಡ್ಡಿಗಳ ರೀತಿ ಅನೇಕರು ಹರಿದು ಬಂದಿರಬಹುದು. ಆದರೆ ಪಕ್ಷದ ನೀತಿ- ನಿಯತ್ತು ಬದಲಾಗಲ್ಲ. ಯಾರು ಬಂದರೂ, ಪಕ್ಷದ ನೀತಿ ಎಲ್ಲವನ್ನು ಫಿಲ್ಟರ್ ಮಾಡುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ರೌಡಿಗಳ ಸೇರ್ಪಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಅದನ್ನೇ ಪುನರುಚ್ಚರಿಸುತ್ತೇನೆ ಎಂದರು.
ರಾಜಕೀಯ ಕಾರಣಕ್ಕಾಗಿ 1990ರ ದಶಕದಲ್ಲಿ ನನ್ನ ಹೆಸರನ್ನು ಸಮಾಜಘಾತುಕರ ಪಟ್ಟಿಗೆ ಸೇರಿಸಿ ಪೊಲೀಸ್ ಠಾಣೆಯಲ್ಲಿ ಫೋಟೋ ಅಂಟಿಸಿದ್ದರು. ರೌಡಿಶೀಟರ್ ಹೆಸರಿದ್ದವರೆಲ್ಲ ರೌಡಿಗಳು ಎನ್ನಲಾಗದು. ಸೈಲೆಂಟ್ ಸುನಿಲ್, ಬೆತ್ತನಗೆರೆ ಶಂಕರ್, ವಿಲ್ಸನ್ ಗಾರ್ಡನ್ ನಾಗಾ, ರವಿ ಹೆಸರುಗಳು ಗೊತ್ತಿಲ್ಲ, ಆ ಬಗ್ಗೆ ಮಾಹಿತಿಯೂ ಇಲ್ಲ. ಪಕ್ಷದ ತಂತ್ರಗಾರಿಕೆ ಬದಲಾಗುತ್ತದೆಯೇ ಹೊರತು ನೀತಿ- ನಿಯತ್ತು ಬದಲಾಗದು. ರೌಡಿಗಳ ಸೇರ್ಪಡೆಗೆ ಅವಕಾಶವಿಲ್ಲ ಎಂಬ ಪಕ್ಷದ ರಾಜ್ಯಾಧ್ಯಕ್ಷರ ಹೇಳಿಕೆಯನ್ನೇ ಪುನರುಚ್ಚರಿಸುತ್ತೇನೆ ಎಂದು ಸಿ.ಟಿ.ರವಿ ಹೇಳಿದರು.
ದತ್ತಪೀಠ ಭೂ ಅಕ್ರಮ ತನಿಖೆಯಾಗಲಿ
ದತ್ತ ಪೀಠ ವಿಚಾರವಾಗಿ ನಮ್ಮ ಸರ್ಕಾರ ಹಾಗೂ ಪಕ್ಷ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ನ್ಯಾಯಾಲಯದ ಆದೇಶದ ಅನುಗುಣವಾಗಿ ಸಂಪುಟ ಉಪಸಮಿತಿ ತೆಗೆದುಕೊಂಡ ನಿರ್ಣಯದ ಶಿಫಾರಸು ಅಂಗೀಕರಿಸಿ ಆಡಳಿತ ಮಂಡಳಿಯನ್ನು ನೇಮಕ ಮಾಡಿದೆ. ಅರ್ಚಕರ ನೇಮಕಕ್ಕೆ ಆಡಳಿತ ಮಂಡಳಿ ಕ್ರಮ ಕೈಗೊಂಡಿದೆ. ನಾಲ್ಕು ದಶಕಗಳ ಹೋರಾಟದ ಈಡೇರಿಕೆಯ ಹಿನ್ನೆಲೆಯಲ್ಲಿ ದತ್ತ ಜಯಂತಿಯನ್ನು ಈ ಬಾರಿ ವೈಭವದಿಂದ ಆಚರಣೆ ಮಾಡುತ್ತೇವೆ ಎಂದು ತಿಳಿಸಿದರು.
ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ದತ್ತಾತ್ರೇಯ ದೇವರ ಹೆಸರಿನಲ್ಲಿದ್ದ 1860 ಎಕರೆ ಜಮೀನನ್ನು ಅರ್ಜಿ ಹಾಕದೆ ಇದ್ದವರಿಗೂ ಅವತ್ತಿನ ಕಾಲದ ಮಂತ್ರಿಗಳ ಕುಟುಂಬಸ್ಥರ ಹೆಸರಿಗೆ ಅಕ್ರಮವಾಗಿ ಮಂಜೂರು ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಬೇಕು ಹಾಗೂ ಅಕ್ರಮ ಮಂಜೂರಾತಿ ರದ್ದು ಮಾಡಬೇಕು ಎಂದು ಆಗ್ರಹಿಸಿದರು.
The BJP, which was a cadre base party, has turned into a mass party. During this time, many people may have flowed in like garbage along with the floods. But the policy of the party will not change. Bjp national general secretary CT Ravi defended the induction of rowdies, saying that whoever comes, the party's policy will filter everything out.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm